AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಸಮಾಧಿ ನೆಲಸಮ: ಧ್ರುವ ಸರ್ಜಾ ಹೇಳಿದ್ದೇನು?

Dhruva Sarja: ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಇದು ವಿಷ್ಣುವರ್ಧನ್ ಅಭಿಮಾನಿಗಳಿಗೆ ತೀವ್ರ ಆಕ್ರೋಶ ತಂದಿದೆ. ಆದರೆ ಅಭಿಮಾನಿಗಳು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ವಿಷ್ಣು ಸಮಾಧಿ ಧ್ವಂಸದ ಬಗ್ಗೆ ಕೆಲ ಸಿನಿಮಾ ಸೆಲೆಬ್ರಿಟಿಗಳು ಮಾತನಾಡಿದ್ದು, ಇದೀಗ ನಟ ಧ್ರುವ ಸರ್ಜಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿಷ್ಣುವರ್ಧನ್ ಸಮಾಧಿ ನೆಲಸಮ: ಧ್ರುವ ಸರ್ಜಾ ಹೇಳಿದ್ದೇನು?
Dhruva Sarja
ಮಂಜುನಾಥ ಸಿ.
|

Updated on: Aug 09, 2025 | 4:27 PM

Share

ಅಭಿಮಾನಿ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ನೆಲಸಮ ಮಾಡಿದ್ದಾರೆ. ಈ ಘಟನೆಯನ್ನು ವಿಷ್ಣುವರ್ಧನ್ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದು ಪ್ರತಿಭಟನೆ ಸಹ ನಡೆದಿವೆ. ಆದರೆ ಮೊದಲಿನಿಂದಲೂ ವಿಷ್ಣುವರ್ಧನ್ ಸಮಾಧಿ ವಿವಾದದಲ್ಲಿಯೇ ಇದೆ. ಇದೀಗ ನ್ಯಾಯಾಲಯದ ಒಪ್ಪಿಗೆ ಮೇರೆಗೆ ಬಾಲಣ್ಣ ಕುಟುಂಬದವರು ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿಸಿದ್ದಾರೆ. ಈ ವಿಷಾಧನೀಯ ಘಟನೆ ಕುರಿತಂತೆ ನಟ ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಸಾಧಕನಿಗೂ ಸಾವಿಲ್ಲ, ಕಲೆಗೂ ಸಾವಿಲ್ಲ. ವಿಷ್ಣು ಅಪ್ಪಾಜಿ ಸದಾ ಅಜರಾಮರ. ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು? ಆದರೂ ಸಹ ಈ ನಾಡಿನಲ್ಲಿ ಇಂಥಹಾ ಒಬ್ಬ ಕಲಾವಿದನಿಗೆ ಹೀಗೆ ಆಗಿದ್ದು ಖಂಡಿತ ಮನಸ್ಸಿಗೆ ನೋವುಂಟು ಮಾಡಿದೆ. ಕೇಳಲು ಸಾಕಷ್ಟು ಪ್ರಶ್ನೆಗಳಿವೆ. ಆದರೆ ಇದಕ್ಕೆಲ್ಲ ಉತ್ತರ, ನಾನು ಒಬ್ಬ ಕನ್ನಡಿಗನಾಗಿ, ಒಬ್ಬ ಕಲಾವಿದನಾಗಿ, ಈ ಒಂದು ಸಂದರ್ಭದಲ್ಲಿ ನಾನು ವಿಷ್ಣುವರ್ಧನ್ ಅವರ ಅಭಿಮಾನಿಗಳ ಜೊತೆಗೆ ನಿಂತಿದ್ದೇನೆ. ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ’ ಎಂದು ಧ್ರುವ ಸರ್ಜಾ ಸಂದೇಶ ಹಂಚಿಕೊಂಡಿದ್ದಾರೆ.

ವಿಷ್ಣುವರ್ಧನ್ ಅವರ ಜೊತೆಗೆ ಅರ್ಜುನ್ ಸರ್ಜಾ ಮತ್ತು ಚಿರಂಜೀವಿ ಸರ್ಜಾ ಅವರು ಒಟ್ಟಿಗೆ ನಿಂತಿರುವ ಚಿತ್ರವೊಂದನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದಾರೆ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಮುಂದೆ ಯಾವ ಹೆಜ್ಜೆ ಇಡಲಿದ್ದಾರೆಯೋ ಅದಕ್ಕೆ ತಮ್ಮ ಬೆಂಬಲ ಇದೆಯೆಂದು ಧ್ರುವ ಸರ್ಜಾ ಹೇಳಿದ್ದಾರೆ. ಆ ಮೂಲಕ ವಿಷ್ಣುವರ್ಧನ್ ಅಭಿಮಾನಿಗಳಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಲಯ ಸ್ಪಷ್ಟ ತೀರ್ಪು ನೀಡಿದ್ದು, ಅಭಿಮಾನ್ ಸ್ಟುಡಿಯೋ ಬಹುತೇಕ ಕೈಜಾರಿ ಹೋಗಿದ್ದಾಗಿದೆ.

ಇದನ್ನೂ ಓದಿ:ಅದೇ ಜಾಗದಲ್ಲಿ ವಿಷ್ಣುವರ್ಧನ್ ಪುಣ್ಯಭೂಮಿ ಆಗಬೇಕು: ಫ್ಯಾನ್ಸ್ ಪ್ರತಿಭಟನೆ

ಇನ್ನು ಧ್ರುವ ಸರ್ಜಾ ವಿರುದ್ಧ ಇಂದಷ್ಟೆ ಆರೋಪವೊಂದು ಕೇಳಿ ಬಂದಿದೆ. ಯುವ ನಿರ್ಮಾಪಕರೊಬ್ಬರು, ಧ್ರುವ ಸರ್ಜಾ ತಮಗೆ ಮೂರು ಕೋಟಿ ರೂಪಾಯಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಮುಂಬೈನ ಅಂಬೋಲಿ ಠಾಣೆಯಲ್ಲಿ ಧ್ರುವ ಸರ್ಜಾ ವಿರುದ್ಧ ದೂರು ದಾಖಲಾಗಿದ್ದು, 3 ಕೋಟಿಗೆ ಬಡ್ಡಿ ಹಣ ಸೇರಿಸಿ 9 ಕೋಟಿ ಹಣವನ್ನು ಧ್ರುವ ಸರ್ಜಾ ಮರಳಿ ನೀಡಬೇಕು ಎಂಬುದು ನಿರ್ಮಾಪಕನ ಒತ್ತಾಯವಾಗಿದೆ. ಆದರೆ ಧ್ರುವ ಸರ್ಜಾ ಇದನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದು, ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು