AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲವೂ ಕೋರ್ಟ್​ನಲ್ಲಿ ಇತ್ಯರ್ಥ ಆಗುತ್ತೆ’; 3 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಸ್ಪಷ್ಟನೆ

ಧ್ರುವ ಸರ್ಜಾ ಅವರ ಮೇಲೆ 3 ಕೋಟಿ ರೂಪಾಯಿ ವಂಚನೆ ಆರೋಪ ಹೊರಿಸಲಾಗಿದೆ. 2016ರ "ಜಗ್ಗು ದಾದ" ಸಿನಿಮಾ ನಿರ್ದೇಶಕ ರಾಘವೇಂದ್ರ ಹೆಗ್ಡೆ ಈ ಆರೋಪ ಮಾಡಿದ್ದಾರೆ. ಆದರೆ, ಧ್ರುವರ ತಂಡ ಈ ಆರೋಪವನ್ನು ಸುಳ್ಳು ಎಂದು ಹೇಳಿದೆ.ಅವರ ಮ್ಯಾನೇಜರ್​ ಕೊಟ್ಟ ಸ್ಪಷ್ಟನೆ ಇಲ್ಲಿದೆ.

‘ಎಲ್ಲವೂ ಕೋರ್ಟ್​ನಲ್ಲಿ ಇತ್ಯರ್ಥ ಆಗುತ್ತೆ’; 3 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಸ್ಪಷ್ಟನೆ
ಧ್ರುವ ಸರ್ಜಾ-ರಾಘವೇಂದ್ರ
ರಾಜೇಶ್ ದುಗ್ಗುಮನೆ
|

Updated on: Aug 09, 2025 | 12:34 PM

Share

ಧ್ರುವ ಸರ್ಜಾ ವಿರುದ್ಧ ಈಗ 3 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. 2016ರ ಜಗ್ಗು ದಾದ ಸಿನಿಮಾ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ ಈ ಆರೋಪ ಮಾಡಿದ್ದಾರೆ. ಈ ವಿಚಾರ ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಹೇಳಿಕೆ ಬಗ್ಗೆ ಧ್ರುವ ಸರ್ಜಾ (Dhruva Sarja) ಅವರ ಟೀಂ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಈ ಆರೋಪ ಸಂಪೂರ್ಣ ಸುಳ್ಳು ಎಂದು ಧ್ರುವ ಮ್ಯಾನೇಜರ್ ಅಶ್ವಿನ್ ಸ್ಪಷ್ಟನೆ ನೀಡಿದ್ದಾರೆ.

‘ರಾಘವೇಂದ್ರ ಹೆಗ್ಡೆ ಮಾಡಿರುವ ಆರೋಪ ಸುಳ್ಳು. 2018ರಲ್ಲಿ ಸೋಲ್ಜರ್ ಸಿನಿಮಾ ಮಾಡಲು 3.15 ಕೋಟಿ ರೂಪಾಯಿ ಹಣ ನೀಡಿದ್ದರು. ನಂದಿನಿ ಎಂಟರ್​ಟೇನ್​ಮೆಂಟ್​ನಿಂದ 20 ಲಕ್ಷ ರೂಪಾಯಿ ಹಾಗೂ ರಾಘವೇಂದ್ರ ಕಡೆಯಿಂದ 2.95 ಲಕ್ಷ ರೂಪಾಯಿ ಬಂದಿತ್ತು. ನಂದಿನಿ ಸಂಸ್ಥೆ ಹಾಗೂ ರಾಘವೇಂದ್ರ ಅವರಿಗೆ ಏನೋ ಸಮಸ್ಯೆ ಆಗಿದ್ದರಿಂದ 20 ಲಕ್ಷ ರೂಪಾಯಿ ಹಣವನ್ನು ನಾವು ಹಿಂದಿರುಗಿಸಿದ್ದೆವು. ಉಳಿದ ಹಣಕ್ಕೆ ಒಂದು ಸಿನಿಮಾ ಮಾಡಬೇಕಿತ್ತು. ಇದಕ್ಕಾಗಿ ಅವರು ಮೂರು ತಿಂಗಳು ಅವಕಾಶ ಕೇಳಿದ್ದರು’ ಎಂದು ಧ್ರುವ ಮ್ಯಾನೇಜರ್ ಅಶ್ವಿನ್ ಹೇಳಿದ್ದಾರೆ.

‘ಪ್ರತಿ ಬಾರಿ ಕಾಲ್ ಮಾಡಿದಾಗಲೂ ಅವರು ಬ್ಯುಸಿ ಇದ್ದಿದ್ದಾಗಿ ಹೇಳುತ್ತಲೇ ಬರುತ್ತಿದ್ದರು. ನಾಲ್ಕೂವರೆ ವರ್ಷ ಆದಮೇಲೆ ಸಿನಿಮಾ ಸ್ಕ್ರಿಪ್ಟ್​ನ ಮೊದಲಾರ್ಧ ಕಳುಹಿಸಿದರು. ದ್ವೀತಿಯಾರ್ಧ ಇನ್ನೂ ಬಂದಿರಲಿಲ್ಲ. ನಾವು ಅವರ ಜೊತೆ ನಿರಂತರವಾಗಿ ಮಾತುಕತೆ ಮಾಡುತ್ತಲೇ ಇದ್ದೆವು. ಒಂದು ದಿನ ಬಂದು ಸೋಲ್ಜರ್ ಸಿನಿಮಾ ಮಾಡೋದು ಬೇಡ, ಬಜೆಟ್ ಜಾಸ್ತಿ ಆಗುತ್ತದೆ. ಮಾಡಿದರೂ ಕನ್ನಡದಲ್ಲಿ ಬೇಡ, ತೆಲುಗು ಅಥವಾ ಹಿಂದಿಯಲ್ಲಿ ಮಾಡೋಣ ಎಂದು ಹೇಳಿದರು’ ಎಂಬುದು ಅಶ್ವಿನ್ ಹೇಳಿಕೆ.

ಇದನ್ನೂ ಓದಿ
Image
ನಿರ್ದೇಶಕನಿಗೆ 3 ಕೋಟಿ ವಂಚನೆ ಮಾಡಿದ ಆರೋಪ; ಧ್ರುವ ಸರ್ಜಾ ವಿರುದ್ಧ FIR
Image
ಮಹೇಶ್ ಬಾಬು ಇಷ್ಟೊಂದು ಶ್ರೀಮಂತರೇ? ನಟನ ಆಸ್ತಿ ಬಗ್ಗೆ ಇಲ್ಲಿದೆ ವಿವರ
Image
‘ಬ್ಲಾಕ್​ಬಸ್ಟರ್’; ಒಂದು ವಾರ ಮೊದಲೇ ಹೊರಬಿತ್ತು ಕೂಲಿ ಸಿನಿಮಾ ವಿಮರ್ಶೆ
Image
ತೆಲುಗು ರಿಲೀಸ್ ಬೆನ್ನಲ್ಲೇ ಮತ್ತೆ ಹೆಚ್ಚಿತು ‘ಸು ಫ್ರಮ್ ಸೋ’ ಕಲೆಕ್ಷನ್

‘ಈ ಬೇಡಿಕೆಗೆ ಧ್ರುವ ಒಪ್ಪಿಲ್ಲ. ಕನ್ನಡದಲ್ಲೇ ಸಿನಿಮಾ ಮಾಡಬೇಕು ಎಂದು ಪಟ್ಟು ಹಿಡಿದರು. ಇದೇ ಜೂನ್ 28ರಂದು ನಾವು ಭೇಟಿ ಆದೆವು. ಆಗ ರಾಘವೇಂದ್ರ ಅವರು ಈ ಚಿತ್ರವನ್ನು ತೆಲುಗು ಅಥವಾ ಹಿಂದಿಯಲ್ಲೇ ಮಾಡೋಣ ಎಂದು ಮತ್ತೆ ಹೇಳಿದ್ದರು. ಆದರೆ, ಇದಕ್ಕೆ ಧ್ರುವ ಒಪ್ಪಿಲ್ಲ. ಕೊನೆಗೆ ಕನ್ನಡದಲ್ಲೇ ಸಿನಿಮಾ ಮಾಡೋದು ಎಂಬ ತೀರ್ಮಾನ ಆಯಿತು. ಅಕ್ಟೋಬರ್​ನಿಂದ ಡೇಟ್ಸ್ ಬೇಕು ಎಂದು ರಾಘವೇಂದ್ರ ಕೇಳಿದರು. ನಾವು ಇದಕ್ಕೆ ರೆಡಿ ಇದ್ದೆವು’ ಎಂದಿದ್ದಾರೆ ಅಶ್ವಿನ್.

‘ಜುಲೈನಲ್ಲಿ ನೋಟಿಸ್ ಕೊಟ್ಟಿದ್ದಾರೆ. ನಾವು ಪ್ರತಿ ಸಿನಿಮಾ ಆದಾಗಲೂ ರೆಡಿನಾ ಎಂದು ಕೇಳುತ್ತಲೇ ಬರುತ್ತಿದ್ದೆವು. ಅವರೇ ಅದನ್ನು ಮುಂದಕ್ಕೆ ಹಾಕುತ್ತಿದ್ದರು. ನಮ್ಮ ಬಳಿ ಇಲ್ಲಿ ಒಂದು ರೀತಿ ಮಾತನಾಡೋದು, ಆಮೇಲೆ ಅಲ್ಲಿ ಬೇರೆ ರೀತಿ ನಡೆದುಕೊಳ್ಳೋದು ಮಾಡುತ್ತಿದ್ದರು. ನಮಗೆ ಈ ಮೊದಲು ನೋಟಿಸ್ ಬಂದಿತ್ತು. ಆ ಬಳಿಕ 100 ಬಾರಿ ಕರೆ ಮಾಡಿದ್ದೇವೆ. ಆದರೆ, ಅವರು ಉತ್ತರಿಸಿಲ್ಲ. ಬೇಕೆಂದಲೇ ಈ ರೀತಿ ಮಾಡಿದ್ದಾರೆ. ನಾವು ಹಣ ಕೊಡೋದಿಲ್ಲ ಎಂದು ಯಾವಾಗಲೂ ಹೇಳಿಲ್ಲ. ಕುಳಿತು ಬಗೆಹರಿಸಿಕೊಳ್ಳುವುದಕ್ಕೆ ಕೋರ್ಟ್​ಗೆ ಹೋಗಿದ್ದಾರೆ. ಎಲ್ಲವೂ ಕೋರ್ಟ್​​ನಲ್ಲಿ ಇತ್ಯರ್ಥ ಆಗಲಿದೆ’ ಎಂದು ಧ್ರುವ ಮ್ಯಾನೇಜರ್ ಹೇಳಿದ್ದಾರೆ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು