AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಧ್ರುವ ಅಭಿಮಾನಿಗಳಿಂದ ಬೆದರಿಕೆ

Dhruva Sarja Martin Movie: ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಬಗ್ಗೆ ವಿಡಿಯೋ ಹಾಕಿ ಸಿನಿಮಾ ಚೆನ್ನಾಗಿಲ್ಲ ಎಂದಿದ್ದ ಕಂಟೆಂಟ್ ಕ್ರಿಯೇಟರ್ ಒಬ್ಬರಿಗೆ ಧ್ರುವ ಸರ್ಜಾ ಅಭಿಮಾನಿಗಳು ಬೆದರಿಕೆ ಹಾಕಿದ್ದಾರೆ.

‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಧ್ರುವ ಅಭಿಮಾನಿಗಳಿಂದ ಬೆದರಿಕೆ
Follow us
ಮಂಜುನಾಥ ಸಿ.
|

Updated on:Oct 15, 2024 | 1:49 PM

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಭಾರಿ ಬಜೆಟ್​ನ ಈ ಸಿನಿಮಾ ಬಿಡುಗಡೆ ಆದಾಗ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿತ್ತು. ಧ್ರುವ ಸರ್ಜಾ ದ್ವಿಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಆಗಿತ್ತು. ಆದರೆ ಸಿನಿಮಾದ ಬಿಡುಗಡೆ ಬಳಿಕ ಹಲವರು ಸಿನಿಮಾದ ಬಗ್ಗೆ ಋಣಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಹೀಗೆ ಸಿನಿಮಾಕ್ಕೆ ನೆಗೆಟಿವ್ ವಿಮರ್ಶೆ ನೀಡಿದ ಯೂಟ್ಯೂಬರ್ ಒಬ್ಬರಿಗೆ ಧ್ರುವ ಸರ್ಜಾ ಅಭಿಮಾನಿಗಳು ಕೆಲವರು ಬೆದರಿಕೆ ಹಾಕಿದ್ದಾರೆ. ಹೀಗೆಂದು ಸ್ವತಃ ಯೂಟ್ಯೂಬರ್ ಆರೋಪ ಮಾಡಿದ್ದಾರೆ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ನೋಡಿದ್ದ ಸುಧಾಕರ್ ಹೆಸರಿನ ಕಂಟೆಂಟ್ ಕ್ರಿಯೇಟರ್, ಸಿನಿಮಾ ಚೆನ್ನಾಗಿಲ್ಲ ಎಂದಿದ್ದರು, ಅಲ್ಲದೆ ಚಿತ್ರತಂಡ ಉದ್ದೇಶಪೂರ್ವಕವಾಗಿ ಟಿಕೆಟ್​ಗಳನ್ನು ಬುಕ್ ಮಾಡಿ ನಕಲಿ ಹೌಸ್​ಫುಲ್ ಪ್ರದರ್ಶನ ಮಾಡಿಸುತ್ತಿದೆ. ಬುಕ್​ ಮೈ ಶೋನಲ್ಲಿ ಥೀಯೇಟರ್ ಫುಲ್ ತೋರಿಸುತ್ತಿದೆ ಚಿತ್ರಮಂದಿರಕ್ಕೆ ಹೋದರೆ ಜನವೇ ಇರಲಿಲ್ಲ ಎಂದಿದ್ದರು. ಅಲ್ಲದೆ, ಧ್ರುವ ಸರ್ಜಾ ನಟನೆಯನ್ನೂ ಸಹ ಟೀಕೆ ಮಾಡಿದ್ದರು, ಪ್ರಾಣಿಗಳ ರೀತಿ ಅರಚುತ್ತಿರುತ್ತಾರೆ, ಅದನ್ನು ನೋಡಿ ಜನ ಥಿಯೇಟರ್​ನಲ್ಲಿ ನಗುತ್ತಿದ್ದರು ಎಂದಿದ್ದರು.

ಸುಧಾಕರ್ ಗೌಡ ನೀಡಿರುವ ವಿಮರ್ಶೆಗೆ, ಧ್ರುವ ಸರ್ಜಾ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ‘ನಿನಗೆ ಸಿನಿಮಾ ಇಷ್ಟವಾಗಿಲ್ಲವೆಂದರೆ ಅದನ್ನು ನಿನ್ನ ಬಳಿ ಇಟ್ಟುಕೊ ಹೊರಗೆ ಯಾಕೆ ಹೇಳಬೇಕು’ ಎಂದು ಪ್ರಶ್ನೆ ಮಾಡಿದ್ದರು. ಧ್ರುವ ಸರ್ಜಾ ಅಭಿಮಾನಿಗಳ ವಿರೋಧ ವ್ಯಕ್ತವಾದ ಬಳಿಕ ಸುಧಾಕರ್, ಧ್ರುವ ಅಭಿಮಾನಿಗಳ ಬಳಿ ಕ್ಷಮೆ ಸಹ ಕೇಳಿದ್ದರು. ಆದರೆ ಆದರೂ ಸಹ ಬೆದರಿಕೆ, ಟ್ರೋಲಿಂಗ್ ಮುಂದುವರೆದ ಕಾರಣ ದೀಗ ಸುಧಾಕರ್ ಹೊಸ ವಿಡಿಯೋ ಒಂದನ್ನು ಅಪ್​ಲೋಡ್ ಮಾಡಿದ್ದು, ‘ಸುಮಾರು 300 ಕ್ಕೂ ಹೆಚ್ಚು ಕರೆಗಳು ಬಂದಿವೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಮಾತ್ರವೇ ಅಲ್ಲದೆ, ಕೊಲೆ ಬೆದರಿಕೆ ಸಹ ಹಾಕಲಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ:ಸೋಮವಾರ ತಗ್ಗಿತು ‘ಮಾರ್ಟಿನ್’ ಸಿನಿಮಾ ಗಳಿಕೆ; ಒಟ್ಟಾರೆ ಕಲೆಕ್ಷನ್ ಎಷ್ಟು?

ಸುಧಾಕರ್ ಸಹ ಧ್ರುವ ಅಭಿಮಾನಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದು, ತನ್ನ ವಿಳಾಸವನ್ನು ವಿಡಿಯೋದಲ್ಲಿ ನೀಡಿದ್ದು, ಇದೇ ನನ್ನ ವಿಳಾಸ, ಬಂದು ಮಾತನಾಡೋಣ, ಚರ್ಚೆ ಮಾಡೋಣ ಎನ್ನುವ ಉದ್ದೇಶಿದಿಂದ ಬರುವಿರಾದರೆ ಬನ್ನಿ, ಜಗಳ ಮಾಡಲು ಬರುವಿರಾದರೆ ನಾನೂ ಸಹ ತಯಾರಾಗಿಯೇ ಇರುತ್ತೀನಿ’ ಎಂದಿದ್ದಾರೆ.

‘ಮಾರ್ಟಿನ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದೆ. ಎಪಿ ಅರ್ಜುನ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸಿನಿಮಾ ದೇಶಪ್ರೇಮದ ಕತೆಯನ್ನು ಒಳಗೊಂಡಿದೆ. ಸಿನಿಮಾವನ್ನು ಉದಯ್ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಆದರೆ ಸಿನಿಮಾ ಅಷ್ಟೇನೂ ಚೆನ್ನಾಗಿಲ್ಲ ಎಂಬ ಅಭಿಪ್ರಾಯಗಳು ಹೊರಬಿದ್ದಿವೆ. ಆದರೆ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:48 pm, Tue, 15 October 24

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ