AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಬಿಟ್ಟು ಇರೋಕೆ ಆಗ್ತಾ ಇಲ್ಲ ಅಣ್ಣ..’; ಚಿರು ನೆನೆದು ಎಮೋಷನಲ್​ ಆದ ಧ್ರುವ ಸರ್ಜಾ: ವಿಡಿಯೋ ವೈರಲ್​

ಚಿರಂಜೀವಿ ಸರ್ಜಾ ಅಗಲಿಕೆ ನಂತರ ಧ್ರುವ ಸರ್ಜಾ ಅವರಿಗೆ ಆದ ನೋವು ಅಷ್ಟಿಷ್ಟಲ್ಲ. ಆ ದುರ್ಘಟನೆ ನಡೆದು ಒಂದು ವರ್ಷಕ್ಕೂ ಹೆಚ್ಚು ಕಾಲ ಆಗಿದೆ. ಈಗೇಕೋ ಅವರಿಗೆ ಮತ್ತೆ ತೀವ್ರವಾಗಿ ಸಹೋದರನ ನೆನಪು ಕಾಡುತ್ತಿದೆ.

‘ನಿನ್ನ ಬಿಟ್ಟು ಇರೋಕೆ ಆಗ್ತಾ ಇಲ್ಲ ಅಣ್ಣ..’; ಚಿರು ನೆನೆದು ಎಮೋಷನಲ್​ ಆದ ಧ್ರುವ ಸರ್ಜಾ: ವಿಡಿಯೋ ವೈರಲ್​
ಚಿರಂಜೀವಿ ಸರ್ಜಾ, ಧ್ರುವ ಸರ್ಜಾ
TV9 Web
| Edited By: |

Updated on: Sep 13, 2021 | 8:52 AM

Share

ನಟ ಧ್ರುವ ಸರ್ಜಾ ಅವರು ‘ಮಾರ್ಟಿನ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ನಡುವೆ ಅವರಿಗೆ ಅಣ್ಣನ ನೆನಪು ಕಾಡುತ್ತಿದೆ. ಅವರ ಸಹೋದರ ಚಿರಂಜೀವಿ ಸರ್ಜಾ ಇಹಲೋಕ ತ್ಯಜಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ಆಗಿದೆ. ಹಾಗಿದ್ದರೂ ಕೂಡ ಅಣ್ಣನ ಅಗಲಿಕೆಯ ನೋವನ್ನು ಮರೆಯಲು ಧ್ರುವ ಸರ್ಜಾಗೆ ಸಾಧ್ಯವಾಗುತ್ತಿಲ್ಲ. ಈ ವಿಚಾರದಲ್ಲಿ ಸಾಧ್ಯವಾದಷ್ಟು ಗಟ್ಟಿಯಾಗಿರಲು ಪ್ರಯತ್ನಿಸುವ ಅವರು ಈಗ ಇದ್ದಕ್ಕಿದ್ದಂತೆ ಎಮೋಷನಲ್​ ಆಗಿದ್ದಾರೆ. ತಮ್ಮ ಮನಸ್ಸಿನ ತಳಮಳವನ್ನು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಳ್ಳುವ ಮಟ್ಟಕ್ಕೆ ಅವರು ಅಣ್ಣನನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಚಿರಂಜೀವಿ ಸರ್ಜಾ ಮತ್ತು ಧ್ರುವ ಸರ್ಜಾ ನಡುವೆ ಇದ್ದ ಬಾಂಧವ್ಯಕ್ಕೆ ಸಾಟಿಯೇ ಇಲ್ಲ ಎನ್ನುತ್ತಾರೆ ಅಭಿಮಾನಿಗಳು. ಆ ಮಾತನ್ನು ಸಾಬೀತುಪಡಿಸುವಂತಹ ಅನೇಕ ಫೋಟೋ ಮತ್ತು ವಿಡಿಯೋಗಳು ಲಭ್ಯವಿದೆ. ಅಣ್ಣ-ತಮ್ಮಂದಿರಾದರೂ ಸ್ನೇಹಿತರ ರೀತಿ ಇದ್ದರು ಚಿರು-ಧ್ರುವ. ಅಣ್ಣನ ಅಗಲಿಕೆ ನಂತರ ಧ್ರುವ ಸರ್ಜಾಗೆ ಆದ ನೋವು ಅಷ್ಟಿಷ್ಟಲ್ಲ. ಈಗೇಕೋ ಅವರಿಗೆ ಮತ್ತೆ ತೀವ್ರವಾಗಿ ಸಹೋದರನ ನೆನಪು ಕಾಡುತ್ತಿದೆ.

ಸೋಶಿಯಲ್​ ಮೀಡಿಯಾದಲ್ಲಿ ಧ್ರುವ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಬಾಲ್ಯದಿಂದ ಹಿಡಿದು ಚಿರು ನಿಧನದವರೆಗೂ ಅಣ್ಣ-ತಮ್ಮ ಜೊತೆಯಾಗಿ ಕಳೆದ ಅನೇಕ ಪ್ರೀತಿಯ ಕ್ಷಣಗಳು ಈ ವಿಡಿಯೋದಲ್ಲಿ ಸೆರೆಯಾಗಿವೆ. ‘ಮಿಸ್​ ಯೂ ಚಿರು. ನಿನ್ನನ್ನು ಬಿಟ್ಟು ಇರಲು ಸಾಧ್ಯವಾಗುತ್ತಿಲ್ಲ’ ಎಂದು ಇದಕ್ಕೆ ಅವರು ಕ್ಯಾಪ್ಷನ್​ ನೀಡಿದ್ದಾರೆ. ಅವರಿಗೆ ಸಮಾಧಾನ ಮಾಡುವ ರೀತಿಯಲ್ಲಿ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಚಿರು-ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ ಜನಿಸಿದ ಬಳಿಕ ಅವರ ಕುಟುಂಬದಲ್ಲಿ ಮತ್ತೆ ನಗು ಮೂಡಿತು. ಇತ್ತೀಚೆಗಷ್ಟೇ ಆ ಮಗುವಿಗೆ ನಾಮಕರಣ ಮಾಡಲಾಯಿತು. ಮೇಘನಾ ರಾಜ್​ ಮತ್ತು ಸರ್ಜಾ ಕುಟುಂಬದ ನಡುವೆ ಕೆಲವು ವಿಚಾರಕ್ಕೆ ಮನಸ್ತಾಪ ಮೂಡಿದೆಯೇ ಎಂಬ ಅನುಮಾನ ಕೂಡ ಹಲವರ ಮನದಲ್ಲಿ ಉದ್ಭವ ಆಗಿತ್ತು. ಅದಕ್ಕೆ ಅಂದು ಧ್ರುವ ಸ್ಪಷ್ಟನೆ ನೀಡಿದ್ದರು. ‘ಅಣ್ಣನ ಮಗನಿಗೆ ರಾಯನ್​ ರಾಜ್​ ಸರ್ಜಾ ಎಂದು ಹೆಸರು ಇಟ್ಟಿದ್ದೇವೆ. ರಾಜ್​ ಮತ್ತು ಸರ್ಜಾ ಎಂಬ ಈ ಹೆಸರಿನಲ್ಲಿಯೇ ಗೊತ್ತಾಗುತ್ತದೆ. ರಾಜ್​-ಸರ್ಜಾ ಫ್ಯಾಮಿಲಿ ಜೊತೆಯಾಗಿಯೇ ಇದೆ. ಯೂಟ್ಯೂಬ್​ ಚಾನೆಲ್​ಗಳ ಮೂಲಕ ತಪ್ಪು ಮಾಹಿತಿ ಹರಡಬೇಡಿ. ಅದರ ಪ್ರಭಾವಕ್ಕೆ ನಾವು ಒಳಗಾಗುವುದಿಲ್ಲ. ಸುಂದರ್​ ರಾಜ್​ ಅಂಕಲ್​, ಪ್ರಮೀಳಾ ಜೋಷಾಯ್​ ಆಂಟಿ ಮತ್ತು ಮೇಘನಾ ಅತ್ತಿಗೆ ಸೇರಿದಂತೆ ಎಲ್ಲರೂ ನಮ್ಮೊಂದಿಗೆ ಸಹಕಾರದಿಂದ ಇದ್ದಾರೆ. ನಾವು ಖುಷಿಯಾಗಿದ್ದೇವೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:

‘ಮೇಘನಾಳನ್ನು ನಾವು ನೋಡಿಕೊಳ್ತೀವಿ, ಬೇರೆ ಯಾರೂ ಬೇಡ’; ಪ್ರಮೀಳಾ ಜೋಷಾಯ್​ ನೇರ​ ಮಾತು

ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ಮಗನಿಗೆ ಹೆಸರಿಟ್ಟಿದ್ದಕ್ಕೆ ಕಾರಣ ತಿಳಿಸಿದ ಮೇಘನಾ ರಾಜ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ