AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಹುಟ್ಟುಹಬ್ಬಕ್ಕೆ 52 ಲಕ್ಷ ಬೆಲೆಯ ಕಾರು ಉಡುಗೊರೆ ಕೊಟ್ಟ ಧ್ರುವ ಸರ್ಜಾ

Dhruva Sarja: ಅಭಿಮಾನಿಗಳಿಗೆ ಸದಾ ಸಹಾಯ ಹಸ್ತ ಚಾಚುವ ನಟ ಧ್ರುವ ಸರ್ಜಾ, ಇದೀಗ ತಮ್ಮ ಆತ್ಮೀಯ ಗೆಳೆಯನ ಹುಟ್ಟುಹಬ್ಬಕ್ಕೆ 52 ಲಕ್ಷ ಬೆಲೆ ಐಶಾರಾಮಿ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಗೆಳೆಯನ ಹುಟ್ಟುಹಬ್ಬಕ್ಕೆ 52 ಲಕ್ಷ ಬೆಲೆಯ ಕಾರು ಉಡುಗೊರೆ ಕೊಟ್ಟ ಧ್ರುವ ಸರ್ಜಾ
ಧೃವ ಸರ್ಜಾ
ಮಂಜುನಾಥ ಸಿ.
|

Updated on: Jun 15, 2023 | 11:09 PM

Share

ಧ್ರುವ ಸರ್ಜಾ (Dhruva Sarja) ತಮ್ಮ ಸಿನಿಮಾಗಳ ಜೊತೆಗೆ ತಮ್ಮ ಮಾನವೀಯ ಕಾರ್ಯದಿಂದಲೂ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ತಮ್ಮನ್ನು ಅರಸಿ ಬಂದ ಎಲ್ಲ ಅಭಿಮಾನಿಗಳನ್ನು ಭೇಟಿಯಾಗಿ ಆತ್ಮೀಯತೆಯಿಂದ ಮಾತನಾಡುವ ಧ್ರುವ ಸರ್ಜಾ, ತಮ್ಮ ಅಭಿಮಾನಿಗಳಿಗೆ (Fan) ಸಂಕಷ್ಟದಲ್ಲಿ ಸಿಲುಕಿದಾಗ ಬಂದು ಸಹಾಯ ಮಾಡಿದ್ದಾರೆ ಸಹ. ಗೆಳೆತನಕ್ಕೆ (Friendship) ವಿಪರೀತ ಗೌರವ ನೀಡುವ ಧ್ರುವ ಸರ್ಜಾ, ತಮ್ಮ ಬಹುಸಮಯದ ಗೆಳೆಯನಿಗೆ ಬಲು ದುಬಾರಿ ಉಡುಗೊರೆಯನ್ನು ನೀಡಿದ್ದಾರೆ.

ಧ್ರುವ ಸರ್ಜಾ, ತಮ್ಮ ಆತ್ಮೀಯ ಗೆಳೆಯ ಅಶ್ವಿನ್ ಎಂಬುವರಿಗೆ ಅವರ ಹುಟ್ಟುಹಬ್ಬದಂದು 52 ಲಕ್ಷ ಮೌಲ್ಯದ ಟೊಯೋಟಾ ಫಾರ್ಚುನರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಶ್ವಿನ್ ಹುಟ್ಟುಹಬ್ಬದಂದು ಗೆಳೆಯನನ್ನು ಕರೆದುಕೊಂಡು ಹೋಗಿ ಸ್ವತಃ ಅವರಿಗೇ ಆಶ್ಚರ್ಯವಾಗುವಂತೆ ಸರ್ಪ್ರೈಸ್ ಗಿಫ್ಟ್ ಆಗಿ ಕಾರನ್ನು ನೀಡಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ, ತಮ್ಮ ಗೆಳೆಯನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಧ್ರುವ ಸರ್ಜಾರ ಆತ್ಮೀಯ ಗೆಳೆಯರಲ್ಲಿ ಅಶ್ವಿನ್ ಸಹ ಒಬ್ಬರು. ಧ್ರುವ ಸರ್ಜಾ ಎಲ್ಲಿಗೇ ಕಾರ್ಯಕ್ರಮಕ್ಕೆ ಹೋಗಲಿ, ಶೂಟಿಂಗ್​ಗೆ ಹೋಗಲಿ ಅವರೊಟ್ಟಿಗೆ ಅಶ್ವಿನ್ ಇದ್ದೇ ಇರುತ್ತಾರೆ. ಬಹಳ ಸಣ್ಣ ವಯಸ್ಸಿನಲ್ಲೇ ಅಶ್ವಿನ್​ರ ಪೋಷಕರು ಕಾಲವಾಗಿದ್ದಾರೆ. ಕೇವಲ ಕಾರನ್ನು ಉಡುಗೊರೆಯಾಗಿ ನೀಡಿದ್ದು ಮಾತ್ರವೇ ಅಲ್ಲದೆ, ಅಶ್ವಿನ್​ರ ಅಪ್ಪ-ಅಮ್ಮನ ಹಳೆಯ ಫೋಟೊವನ್ನು ಎಲ್ಲಿಂದಲೋ ಹುಡುಕಿ ತೆಗೆಸಿ ಅದನ್ನು ಕಾರಿನ ಒಳಗೆ ಲಗತ್ತಿಸಿದ್ದಾರೆ. ಗೆಳೆಯ ಧ್ರುವ ಕೊಟ್ಟ ಈ ಅಪೂರ್ವ ಉಡುಗೊರೆ ಕಂಡು ಅಶ್ವಿನ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ:Martin Movie: ಮಾರ್ಟಿನ್ ಸಿನಿಮಾದಲ್ಲಿ ಧ್ರುವ ಸರ್ಜಾ ಪಾತ್ರದ ಹೆಸರು ಏನು? ಮಾರ್ಟಿನ್ ಯಾರು?

ಧ್ರುವ ಸರ್ಜಾ ಅವರಿಂದ ಸಿಕ್ಕ ದುಬಾರಿ ಉಡುಗೊರೆ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಅಶ್ವಿನ್, ”ಹೀಗೊಂದು ಉಡುಗೊರೆ ಕೊಡುತ್ತಾರೆ ಎಂಬುದು ನನಗೇ ಗೊತ್ತಿರಲಿಲ್ಲ. ಸರ್ಪ್ರೈಸ್ ಆಗಿ ಎಲ್ಲವನ್ನು ಪ್ಲ್ಯಾನ್ ಮಾಡಿ ಉಡುಗೊರೆ ಕೊಟ್ಟಿದ್ದಾರೆ. ನಾನು ನೋಡದೇ ಇದ್ದ ಅಪ್ಪ-ಅಮ್ಮನ ಫೋಟೊ ಸಹ ಕೊಟ್ಟಿದ್ದಾರೆ. ಧ್ರುವ ಸರ್ಜಾ ಗೆಳೆತನಕ್ಕೆ ಬಹಳ ಬೆಲೆ ಕೊಡುವ ವ್ಯಕ್ತಿ. ಎಷ್ಟೋ ಜನರಿಗೆ ಅವರು ಸಹಾಯ ಮಾಡಿದ್ದಾರೆ. ಸಾಕಷ್ಟು ಜನರ ಆಸ್ಪತ್ರೆ ಬಿಲ್ ಕೊಟ್ಟಿದ್ದಾರೆ. ಶಾಲೆಯ ಫೀಸು ಕೊಟ್ಟಿದ್ದಾರೆ. ಬಂದವರಿಗೆಲ್ಲ ಸಹಾಯ ಮಾಡಿದ್ದಾರೆ. ಆದರೆ ಯಾವುದನ್ನೂ ಪ್ರಚಾರ ಮಾಡಿಕೊಂಡವರಲ್ಲ. ನನಗೂ ಸಹ ಈ ಉಡುಗೊರೆ ಕೊಟ್ಟ ವಿಡಿಯೋ ಹೊರಗೆ ಹೋಗಬಾರದು ಎಂದಿದ್ದರು. ಆದರೆ ಅವರು ಮಾಡುವ ಕಾರ್ಯವನ್ನು ಜನರಿಗೆ ಹೇಳಬೇಕು ಎಂದು ವಿಡಿಯೋ ಹಾಕಿಕೊಂಡಿದ್ದೇನೆ” ಎಂದಿದ್ದಾರೆ.

ಧ್ರುವ ಸರ್ಜಾ ಪ್ರಸ್ತುತ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ನಟನೆಯ ಮಾರ್ಟಿನ್ ಸಿನಿಮಾ ಶೀಘ್ರವೇ ತೆರೆಗೆ ಬರಲಿದೆ. ಅದರ ಜೊತೆಗೆ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾದಲ್ಲಿ ಧ್ರುವ ನಟಿಸುತ್ತಿದ್ದು ಆ ಸಿನಿಮಾದಲ್ಲಿ ಸಂಜಯ್ ದತ್ ಸೇರಿದಂತೆ ಇನ್ನೂ ಕೆಲವು ಪರಭಾಷೆಯ ಸ್ಟಾರ್ ನಟರು ಸಹ ನಟಿಸುತ್ತಿದ್ದಾರೆ. ಕೆಡಿ ಸಿನಿಮಾವು 70ರ ದಶಕದ ರೌಡಿಸಂ ಕತೆಯನ್ನು ಒಳಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ