AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನ್​ಲಾಕ್ ರಾಘವ’ ಸಿನಿಮಾ ಟ್ರೇಲರ್ ನೋಡಿ ಶುಭ ಹಾರೈಸಿದ ಸೆಲೆಬ್ರಿಟಿಗಳು

ಫೆಬ್ರವರಿ 7ರಂದು ‘ಅನ್​ಲಾಕ್ ರಾಘವ’ ಸಿನಿಮಾ ಬಿಡುಗಡೆ ಆಗುತ್ತಿದೆ. ಟ್ರೇಲರ್​ ಮೂಲಕ ಈ ಸಿನಿಮಾ ಕೌತುಕ ಮೂಡಿಸಿದೆ. ಟ್ರೇಲರ್​ ನೋಡಿದ ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ‘ಆ್ಯಕ್ಷನ್​ ಪ್ರಿನ್ಸ್’ ಧ್ರುವ ಸರ್ಜಾ, ಖ್ಯಾತ ನಟ ಕೋಮಲ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ಹಲವರು ಈ ಸಿನಿಮಾಗೆ ವಿಶ್ ಮಾಡಿದ್ದಾರೆ.

‘ಅನ್​ಲಾಕ್ ರಾಘವ’ ಸಿನಿಮಾ ಟ್ರೇಲರ್ ನೋಡಿ ಶುಭ ಹಾರೈಸಿದ ಸೆಲೆಬ್ರಿಟಿಗಳು
Dhruva Sarja, Milind Gautham
ಮದನ್​ ಕುಮಾರ್​
| Edited By: |

Updated on:Jan 28, 2025 | 11:00 AM

Share

ಹೊಸ ಹೀರೋ ಮಿಲಿಂದ್ ಗೌತಮ್ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಮೊದಲ ಪ್ರಾಜೆಕ್ಟ್​ನಲ್ಲೇ ಅವರು ಡಿಫರೆಂಟ್ ಕಥೆ ಇರುವ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹೌದು, ಮಿಲಿಂದ್ ಗೌತಮ್ ನಟಿಸಿರುವ ‘ಅನ್​ಲಾಕ್ ರಾಘವ’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದ್ದು, ಪ್ರೇಕ್ಷಕರಲ್ಲಿ ಕೌತುಕ ಹೆಚ್ಚಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಕೂಡ ಈ ಸಿನಿಮಾದ ಟ್ರೇಲರ್​ ಬಗ್ಗೆ ಮಾತನಾಡುತ್ತಿದ್ದಾರೆ. ಕೋಮಲ್ ಕುಮಾರ್, ಧ್ರುವ ಸರ್ಜಾ ಮುಂತಾದವರು ‘ಅನ್​ಲಾಕ್ ರಾಘವ’ ಟ್ರೇಲರ್​ ಕಂಡು ಭೇಷ್ ಎಂದಿದ್ದಾರೆ.

‘ಮಯೂರ ಮೋಷನ್ ಪಿಕ್ಚರ್ಸ್​’ ಮೂಲಕ ‘ಅನ್​ಲಾಕ್ ರಾಘವ’ ಸಿನಿಮಾ ನಿರ್ಮಾಣ ಆಗಿದೆ. ಮಂಜುನಾಥ ಡಿ. ಹಾಗೂ ಗಿರೀಶ್ ಕುಮಾರ್​ ಅವರು ಬಂಡವಾಳ ಹೂಡಿದ್ದಾರೆ. ದೀಪಕ್ ಮಧುವನಹಳ್ಳಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಫೆಬ್ರವರಿ 7ರಂದು ಈ ಸಿನಿಮಾ ತೆರೆಕಾಣಲಿದೆ. ಈಗ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ.

‘ಅನ್​ಲಾಕ್ ರಾಘವ’ ಸಿನಿಮಾದಲ್ಲಿ ಮಿಲಿಂದ್ ಗೌತಮ್ ಅವರಿಗೆ ಜೋಡಿಯಾಗಿ ರೇಚಲ್ ಡೇವಿಡ್ ಅವರು ನಟಿಸಿದ್ದಾರೆ. ‘ಲವ್​ ಮಾಕ್ಟೇಲ್​ 2’ ಸಿನಿಮಾದಲ್ಲಿ ಗಮನ ಸೆಳೆದಿದ್ದ ರೇಚಲ್ ಅವರು ಈಗ ‘ಅನ್​ಲಾಕ್ ರಾಘವ’ ಚಿತ್ರದ ಮೂಲಕ ಮನರಂಜನೆ ನೀಡಲು ಬರುತ್ತಿದ್ದಾರೆ. ಸಿನಿಮಾ ಕಥೆ ಏನು ಎಂಬುದರ ಸುಳಿವನ್ನು ಟ್ರೇಲರ್​ನಲ್ಲಿ ನೀಡಲಾಗಿದೆ. ಈ ಟ್ರೇಲರ್​ ನೋಡಿ ಕೋಮಲ್, ಧ್ರುವ ಸರ್ಜಾ, ರಾಮಲಿಂಗ ರೆಡ್ಡಿ ಮುಂತಾದವರು ಮೆಚ್ಚಿಕೊಂಡಿದ್ದಾರೆ.

‘ಅನ್​ಲಾಕ್ ರಾಘವ’ ಟ್ರೇಲರ್​:

‘ಮಿಲಿಂದ್ ಅವರು ಹೊಸದಾಗಿ ಪರಿಚಯ ಆಗುತ್ತಿದ್ದಾರೆ. ಈ ಸಿನಿಮಾವನ್ನು ನೋಡುವ ಮೂಲಕ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸಿ’ ಎಂದು ಕೋಮಲ್ ಹೇಳಿದ್ದಾರೆ. ‘ಒಳ್ಳೆಯ ಟ್ರೇಲರ್​ ನೋಡಿದೆ. ಇದರಲ್ಲಿ ವಿಶೇಷವಾದ ಐಡಿಯಾ ಇದೆ. ಹೊಸ ಕಲಾವಿದರ ಜೊತೆ ಸಾಕಷ್ಟು ಹಿರಿಯ ನಟರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇಡೀ ತಂಡಕ್ಕೆ ಆಲ್​ ದ ಬೆಸ್ಟ್​’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

ಇದನ್ನೂ ಓದಿ: ‘ನನಗೇ ಅವಾರ್ಡ್ ಸಿಕ್ಕಷ್ಟು ಖುಷಿ ಇದೆ’; ಬಿಗ್ ಬಾಸ್ ವೇದಿಕೆ ಮೇಲೆ ಅನಂತ್ ನಾಗ್​ ನೆನೆದ ಸುದೀಪ್

ಈ ಸಿನಿಮಾದ ಟ್ರೇಲರ್​ನಲ್ಲಿ ಆ್ಯಕ್ಷನ್​, ಥ್ರಿಲ್ಲರ್​, ಕಾಮಿಡಿ, ಲವ್​ಸ್ಟೋರಿಯ ಝಲಕ್ ಕಾಣಿಸಿದೆ. ಆ್ಯಕ್ಷನ್ ಮೂಲಕ ಮಿಲಿಂದ್ ಗಮನ ಸೆಳೆಯುತ್ತಿದ್ದಾರೆ. ಮನರಂಜನೆಯ ಪೂರ್ತಿ ಪ್ಯಾಕೇಜ್ ಹೇಗಿದೆ ತಿಳಿಯಲು ಫೆಬ್ರವರಿ 7ರಂದು ಸಿನಿಮಾ ನೋಡಬೇಕು. ಶೋಭರಾಜ್, ಅವಿನಾಶ್, ಸಾಧುಕೋಕಿಲ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:05 pm, Mon, 27 January 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ