AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಗೆಲುವಿಗಾಗಿ ‘ಜಿಂಗಲ ಜೈ’ ಎಂದ ಧ್ರುವ ಸರ್ಜಾ, ಮಾಳು ನಿಪನಾಳ, ಯೋಗರಾಜ್​ ಭಟ್​

ಸಿನಿಮಾಗಳಿಗೆ ಹಾಡು ಬರೆಯುವುದು ಮಾತ್ರವಲ್ಲದೇ ವಿಶೇಷ ಸಂದರ್ಭಗಳಲ್ಲೂ ಹಾಡು ಬರೆಯುವ ಮೂಲಕ ಯೋಗರಾಜ್​ ಭಟ್​ ಅವರು ಗಮನ ಸೆಳೆಯುತ್ತಾರೆ. ಈಗ ಅವರು ‘ರಾಯಲ್​ ಚಾಲೆಂಜರ್ಸ್​ ಬೆಂಗಳೂರು’ ತಂಡದ ಬೆನ್ನು ತಟ್ಟಲು ಹೊಸ ಸಾಂಗ್​ ರಚಿಸಿದ್ದಾರೆ. ಧ್ರುವ ಸರ್ಜಾ ಅವರ ಕಂಠದಲ್ಲಿ ‘ಜಿಂಗಲ ಜೈ’ ಎಂಬ ಈ ಹಾಡು ಮೂಡಿಬಂದಿದೆ.

RCB ಗೆಲುವಿಗಾಗಿ ‘ಜಿಂಗಲ ಜೈ’ ಎಂದ ಧ್ರುವ ಸರ್ಜಾ, ಮಾಳು ನಿಪನಾಳ, ಯೋಗರಾಜ್​ ಭಟ್​
ಧ್ರುವ ಸರ್ಜಾ
ಮದನ್​ ಕುಮಾರ್​
|

Updated on: Mar 22, 2024 | 9:40 PM

Share

ಮತ್ತೆ ಐಪಿಎಲ್​ ಹಬ್ಬ ಶುರುವಾಗಿದೆ. ಕರುನಾಡಿನ ಮಂದಿ ಆರ್​ಸಿಬಿ (RCB) ಗೆಲುವನ್ನು ನಿರೀಕ್ಷಿಸಿದ್ದಾರೆ. ಈ ಬಾರಿ ‘ರಾಯಲ್​ ಚಾಲೆಂಜರ್ಸ್​ ಬೆಂಗಳೂರು’ ತಂಡ ಕಪ್​ ಎತ್ತಬೇಕು ಎಂಬ ಆಸೆ ಬಲವಾಗಿದೆ. ಇತ್ತೀಚೆಗೆ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಆರ್​ಸಿಬಿ ಟೀಮ್​ ಚಾಂಪಿಯನ್​ ಆಗಿದೆ. ಈಗ ವಿರಾಟ್​ ಕೊಹ್ಲಿ ಪಡೆಯನ್ನು ಹುರಿದುಂಬಿಸಲು ನಿರ್ದೇಶಕ ಯೋಗರಾಜ್​ ಭಟ್​ ಅವರು ಒಂದು ಹಾಡು ಬರೆದಿದ್ದಾರೆ. ಎಂದಿನಂತೆ ತಮ್ಮ ಫನ್ನಿ ಸಾಹಿತ್ಯದ ಮೂಲಕ ಆರ್​ಸಿಬಿ ತಂಡಕ್ಕೆ ವಿಶ್​ ಮಾಡಿದ್ದಾರೆ. ‘ಜಿಂಗಲ ಜೈ’ (Jingala Jai) ಎಂಬ ಈ ಹಾಡು ‘ಪಂಚರಂಗಿ ಆಡಿಯೋ’ ಮೂಲಕ ಬಿಡುಗಡೆ ಆಗಿದೆ. ವಿಶೇಷ ಏನೆಂದರೆ, ‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ (Dhruva Sarja) ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಯೋಗರಾಜ್​ ಭಟ್​ ಬರೆದ ‘ಜಿಂಗಲ ಜೈ’ ಹಾಡಿಗೆ ಚೇತನ್ ಸೋಸ್ಕಾ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರೇಣುಕಾ ಯೋಗರಾಜ್ ಭಟ್ ಅವರು ಇದನ್ನು ನಿರ್ಮಿಸಿದ್ದಾರೆ. ಯೋಗರಾಜ್​ ಭಟ್​ ನಿರ್ದೇಶಿಸಿದ್ದಾರೆ. ಧ್ರುವ ಸರ್ಜಾ ಅವರ ಧ್ವನಿಯಿಂದ ಈ ಹಾಡಿಗೆ ಸಖತ್​ ಜೋಶ್​ ಬಂದಿದೆ. ಯಾಕೆಂದರೆ, ಧ್ರುವ ಸರ್ಜಾ ಅವರು ಮೈಕ್​ ಮುಂದೆ ನಿಂತು ಹಾಡಿರುವುದು ಇದೇ ಮೊದಲು.

ಇದನ್ನೂ ಓದಿ: ಕೃಷ್ಣ-ಕುಚೇಲನ ಸಂಬಂಧ: ಧ್ರುವ ಸರ್ಜಾ ಬಗ್ಗೆ ‘ಕೆರೆಬೇಟೆ’ ಹೀರೋ ಹೇಳಿದ್ದೇನು?

ಚಿತ್ರರಂಗದ ಹಲವು ಪ್ರತಿಭಾವಂತರು ಸೇರಿ ‘ಜಿಂಗಲ ಜೈ’ ಹಾಡಿಗೆ ಸಾಥ್​ ನೀಡಿದ್ದಾರೆ. ಧ್ರುವ ಸರ್ಜಾ ಜೊತೆ ಯೋಗರಾಜ್ ಭಟ್ ಕೂಡ ಹಾಡಿದ್ದಾರೆ. ಅಷ್ಟೇ ಅಲ್ಲದೇ, ‘ನಾ ಡ್ರೈವರ..’ ಹಾಡಿನ ಖ್ಯಾತಿಯ ಉತ್ತರ ಕರ್ನಾಟಕದ ಸಿಂಗರ್​ ಮಾಳು ನಿಪನಾಳ ಕೂಡ ಈ ಗೀತೆಗೆ ಧ್ವನಿಯಾಗಿದ್ದಾರೆ. ಚೇತನ್ ಸೋಸ್ಕಾ ಕೂಡ ಜೊತೆಯಾಗಿದ್ದಾರೆ‌. ಎಲ್ಲರ ಸಂಗಮದಿಂದ ‘ಜಿಂಗಲ ಜೈ’ ಹಾಡು ಭರ್ಜರಿಯಾಗಿ ಮೂಡಿಬಂದಿದೆ.

‘ಜಿಂಗಲ ಜೈ’ ಹಾಡು:

‘ಜಿಂಗಲ ಜೈ’ ಹಾಡಿನಲ್ಲಿ ಅನೇಕ ಮಕ್ಕಳು ಮತ್ತು ಆರ್​ಸಿಬಿ ಅಭಿಮಾನಿಗಳು ಕೂಡ ಕಾಣಿಸಿಕೊಂಡಿದ್ದಾರೆ. ಈ ಹಾಡಿಗೆ ‘ಮಾರ್ಟಿನ್​’ ಸಿನಿಮಾದ ನಿರ್ದೇಶಕ ಎ.ಪಿ. ಅರ್ಜುನ್, ಮಣಿಕಂಠನ್, ದಾನಿಶ್ ಸೇಠ್ ಮುಂತಾದವರು ಸಹಕಾರ ನೀಡಿದ್ದಾರೆ. ಅಭಿರಾಜ್, ರಾಕೇಶ್ ರಾಮ್, ಶಿವ್ ಪಾಟೀಲ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಸಚಿನ್ ಕೆ. ರಾಮು ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಗುಡ್ಡು ರಾಜ್ ನೃತ್ಯ ನಿರ್ದೇಶನ ಮಾಡಿದ್ದು, ಗಡ್ಡ ವಿಜಿ ಅವರು ಕಲಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು