ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?

| Updated By: ಮದನ್​ ಕುಮಾರ್​

Updated on: Nov 30, 2021 | 8:59 AM

Me Too: ‘ಅರ್ಜುನ್​ ಸರ್ಜಾ ಯಾವಾಗಲೂ ಜಂಟಲ್​ಮ್ಯಾನ್​’ ಎಂದು ಮೇಘನಾ ರಾಜ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಪೋಸ್ಟ್​ ಮಾಡಿದ್ದಾರೆ. ‘ಧರ್ಮೋ ರಕ್ಷತಿ ರಕ್ಷಿತಃ’ ಎಂದು ಧ್ರುವ ಸರ್ಜಾ ಬರೆದುಕೊಂಡಿದ್ದಾರೆ.

ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?
ಅರ್ಜುನ್​ ಸರ್ಜಾ, ಶ್ರುತಿ ಹರಿಹರನ್​, ಮೇಘನಾ ರಾಜ್​, ಧ್ರುವ ಸರ್ಜಾ
Follow us on

ನಟ ಅರ್ಜುನ್​ ಸರ್ಜಾ (Arjun Sarja) ಅವರ ಮೇಲೆ ಶ್ರುತಿ ಹರಿಹರನ್ (Sruthi Hariharan)​ ಅವರು 2018ರಲ್ಲಿ ಮೀಟೂ (Me Too) ಆರೋಪ ಹೊರಿಸಿದ್ದರು. ಅಲ್ಲದೇ, ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಅವರ ಆರೋಪಗಳಿಗೆ ಸೂಕ್ತ ಸಾಕ್ಷಿ ಸಿಗದ ಕಾರಣ ಪೊಲೀಸರು ಬಿ ರಿಪೋರ್ಟ್​ ಸಿದ್ಧಪಡಿಸಿದ್ದಾರೆ ಎಂಬ ಮಾಹಿತಿ ಕೆಲವೇ ದಿನಗಳ ಹಿಂದೆ ಕೇಳಿಬಂದಿತ್ತು. ಬಿ ರಿಪೋರ್ಟ್​ ಸಲ್ಲಿಕೆ ಮಾಡುವುದಕ್ಕೂ ಮುನ್ನ ಶ್ರುತಿ ಹರಿಹರನ್ ಅವರಿಗೆ ನೋಟಿಸ್​ ಕೂಡ ನೀಡಲಾಗಿತ್ತು. ಒಟ್ಟಿನಲ್ಲಿ ಮೀಟೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರುತಿ ಹರಿಹರನ್​ ಅವರಿಗೆ ಹಿನ್ನಡೆ ಆಗಿದೆ. ಈ ಸಂದರ್ಭದಲ್ಲಿ ಧ್ರುವ ಸರ್ಜಾ (Dhruva Sarja) ಮತ್ತು ಮೇಘನಾ ರಾಜ್​ (Meghana Raj) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಸ್ಟೋರಿಗಳು ಗಮನ ಸೆಳೆಯುತ್ತಿವೆ. ಈ ಮೂಲಕ ಅವರು ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ಅರ್ಜುನ್​ ಸರ್ಜಾ ಯಾವಾಗಲೂ ಜಂಟಲ್​ಮ್ಯಾನ್​’ ಎಂದು ಮೇಘನಾ ರಾಜ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಪೋಸ್ಟ್​ ಮಾಡಿದ್ದಾರೆ. ‘ಧರ್ಮೋ ರಕ್ಷತಿ ರಕ್ಷಿತಃ’ ಎಂದು ಧ್ರುವ ಸರ್ಜಾ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಅವರು ವ್ಯಂಗ್ಯವಾಗಿ ಇನ್ನೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಸೊಳ್ಳೆ ಬ್ಯಾಟ್​ನಿಂದ ಕೀಟಗಳನ್ನು ಸಾಯಿಸುತ್ತಿರುವ ದೃಶ್ಯ ಅದರಲ್ಲಿದ್ದು, ‘ಸೊಳ್ಳೆ ಕ್ರಿಮಿ ಕೀಟ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಈ ಹಿಂದೆ ಅರ್ಜುನ್​ ಸರ್ಜಾ ಮೇಲಿನ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡುವಾಗ ಧ್ರುವ ಸರ್ಜಾ ಅವರು ‘ನಾಯಿ ನರಿ ಸೊಳ್ಳೆ ಕ್ರಿಮಿ ಕೀಟ’ ಎಂಬ ಪದಗಳನ್ನು ಬಳಸಿದ್ದು ಚರ್ಚೆ ಆಗಿತ್ತು. ಈಗ ಮತ್ತೆ ಅದೇ ಪದಗಳನ್ನು ಅವರು ತಮ್ಮ ಸ್ಟೋರಿಯಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ.

(ಧ್ರುವ ಸರ್ಜಾ, ಮೇಘನಾ ರಾಜ್​ ಇನ್​ಸ್ಟಾಗ್ರಾಮ್​ ಸ್ಟೋರಿ)

ಪ್ರಕರಣದ ಹಿನ್ನೆಲೆ ಏನು?

ಅರುಣ್​ ವೈದ್ಯನಾಥನ್​ ನಿರ್ದೇಶನದ ‘ವಿಸ್ಮಯ’ ಸಿನಿಮಾದಲ್ಲಿ ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪ ಹೊರಿಸಿದ ಬಳಿಕ ಇಡೀ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್​ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಸಭೆ ನಡೆಸಲಾಗಿತ್ತು.

2018ರಲ್ಲಿ ಈ ವಿವಾದ ಬಗೆಹರಿಸಲು ‘ರೆಬೆಲ್​ ಸ್ಟಾರ್​’ ಅಂಬರೀಷ್​ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಆದರೆ ಶ್ರುತಿ ಹರಿಹರನ್​ ಅವರು ಸಭೆಯ ಅರ್ಧದಲ್ಲೇ ಹೊರ ನಡೆದಿದ್ದರು. ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಅವರು ಹೇಳಿದ್ದರು. ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಅರ್ಜುನ್​ ಸರ್ಜಾ ವಿರುದ್ಧ ದೂರು ನೀಡಿದ್ದರು. ಮಹಿಳೆಯ ಗೌರವಕ್ಕೆ ಧಕ್ಕೆ (354, 509), ಲೈಂಗಿಕ ಕಿರುಕುಳ (ಐಪಿಸಿ 354ಎ) ಹಾಗೂ ಜೀವಬೆದರಿಕೆ (ಐಪಿಸಿ 506) ಆರೋಪದಡಿ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ:

ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬದ ಫೋಟೋ ಗ್ಯಾಲರಿ; ಸೆಲೆಬ್ರಿಟಿಗಳ ಜೊತೆ ಚಿರು-ಮೇಘನಾ ಪುತ್ರ ಮಿಂಚಿಂಗ್​

ಮೇಘನಾ ರಾಜ್​-ಚಿರು ಸರ್ಜಾ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ತಿಳಿಸಿದ ರಾಯನ್​ ರಾಜ್​ ಸರ್ಜಾ

Published On - 8:53 am, Tue, 30 November 21