Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja: ನಾ ಅಣ್ಣನನ್ನು ತುಂಬಾ ಮಿಸ್ ಮಾಡ್ಕೊತ್ತಿದ್ದೀನಿ: ಖುಷಿಯ ನಡುವೆ ಧ್ರುವ ಸರ್ಜಾರ ನೋವು..!

Dhruva Sarja: ಸದ್ಯ ಮಾರ್ಟಿನ್ ಚಿತ್ರದಲ್ಲಿ ತೊಡಗಿಸಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್, ಶೀಘ್ರದಲ್ಲೇ ಜೋಗಿ ಪ್ರೇಮ್ ಅವರು ಆ್ಯಕ್ಷನ್ ಕಟ್ ಹೇಳಲಿರುವ ಮಾಸ್ ಮಸಾಲ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ.

Dhruva Sarja: ನಾ ಅಣ್ಣನನ್ನು ತುಂಬಾ ಮಿಸ್ ಮಾಡ್ಕೊತ್ತಿದ್ದೀನಿ: ಖುಷಿಯ ನಡುವೆ ಧ್ರುವ ಸರ್ಜಾರ ನೋವು..!
Dhruva Sarja - Chiranjeevi Sarja
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 02, 2022 | 2:10 PM

ಕನ್ನಡದ ಚಿತ್ರರಂಗದ ಬಹದ್ದೂರ್ ಗಂಡು ಆ್ಯಕ್ಷನ್ ಪ್ರಿನ್ ಧ್ರುವ ಸರ್ಜಾ (Dhruva Sarja) ತಂದೆಯಾಗಿದ್ದಾರೆ. ಇಂದು ಅವರ ಧರ್ಮಪತ್ನಿ ಪ್ರೇರಣಾ ಶಂಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯಲ್ಲಿರುವ ಧ್ರುವ ಸರ್ಜಾ ಅವರನ್ನು ನೋವೊಂದು ಕಾಡುತ್ತಿದೆ. ಅದುವೇ ಅಣ್ಣ, ಗೆಳೆಯ ಚಿರಂಜೀವಿ ಸರ್ಜಾ (Chiranjeevi Sarja) ಇಲ್ಲದಿರುವುದು. ಈ ಬಗ್ಗೆ ಮಾತನಾಡಿರುವ ಧ್ರುವ ಸರ್ಜಾ ಇಂತಹ ಖುಷಿಯ ಸಂದರ್ಭದಲ್ಲಿ ನಾನು ಅಣ್ಣ ಹಾಗೂ ಅಜ್ಜಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಮನದ ನೋವನ್ನು ಹೊರಹಾಕಿದ್ದಾರೆ.

ನಾನು ಆಸೆ ಪಟ್ಟಂತೆ ಹೆಣ್ಣು ಮಗು ಆಗಿದೆ. ಇದು ತುಂಬಾ ಖುಷಿಯ ವಿಚಾರ. ಆದರೆ ಈ ಸಮಯದಲ್ಲಿ ನಮ್ಮ ಅಣ್ಣ, ಅಜ್ಜಿ ಇಲ್ಲದಿರುವುದು ನೋವಿನ ಸಂಗತಿ. ಅವರಿಬ್ಬರನ್ನು ನಾನು ತುಂಬಾ ಮಿಸ್ ಮಾಡಿ ಕೊಳ್ಳುತ್ತಿದ್ದೇನೆ ಎಂದು ಧ್ರುವ ಸರ್ಜಾ ಖುಷಿಯ ನಡುವೆ ಚಿರು ಹಾಗೂ ಅಜ್ಜಿಯನ್ನು ನೆನಪಿಸಿಕೊಂಡಿದ್ದಾರೆ.

ಇನ್ನು ಹೆಣ್ಣು ಮಗುವಿನ ಆಗಮನದ ಬಗ್ಗೆ ಮಾತನಾಡಿದ ಆ್ಯಕ್ಷನ್ ಪ್ರಿನ್ಸ್​, ಸಾಮಾನ್ಯವಾಗಿ ಹೆಣ್ಣು ಮಕ್ಕಳಂದ್ರೆ ಒಂದು ಮರ್ಯಾದೆ ಇತ್ತು. ಆದರೀಗ ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ಎಲ್ಲರ ಲೈಫ್​ನಲ್ಲೂ ಏರಿಳಿತಗಳಿರುತ್ತೆ. ನಮ್ಮ ಜೀವನದಲ್ಲೂ ಅಂತಹ ಕಷ್ಟಗಳು ಎದುರಾಗಿತ್ತು. ಈ ಸಮಯದಲ್ಲಿ ಡಾಕ್ಟರ್ ಸಲಹೆಯಿಂದ ಮುದ್ದಾದ ಮಗು ನಮ್ಮ ಕೈ ಸೇರಿದೆ. ನನಗೆ ಆಶೀರ್ವದಿಸಿದಂತೆ ನನ್ನ ಮಗುವಿನ ಮೇಲೂ ಕೂಡ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಎಂದು ಅಭಿಮಾನಿಗಳಲ್ಲಿ ಧ್ರುವ ಸರ್ಜಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

2019 ರಲ್ಲಿ ಧ್ರುವ ಸರ್ಜಾ ಬಾಲ್ಯದ ಗೆಳೆತಿ ಪ್ರೇರಣಾರನ್ನು ವಿವಾಹವಾಗಿದ್ದರು. ಈ ಶುಭ ಸಮಾರಂಭದ ಬೆನ್ನಲ್ಲೇ, ಅಂದರೆ 2020 ರಲ್ಲಿ ಸರ್ಜಾ ಕುಟುಂಬದಿಂದ ಚಿರಂಜೀವಿ ಸರ್ಜಾ ಅಗಲಿದ್ದರು. ಇದಾದ ಬಳಿಕ ಸರ್ಜಾ ಕುಟುಂಬದಲ್ಲಿ ಯಾವುದೇ ಮಹತ್ವದ ಶುಭ ಸಮಾರಂಭ ನಡೆದಿರಲಿಲ್ಲ. ಇದೀಗ ಧ್ರುವ ಸರ್ಜಾ ದಂಪತಿಗಳ ಮೂಲಕ ಮತ್ತೊಮ್ಮೆ ಕುಟುಂಬದಲ್ಲಿ ಸಂತಸ ಮನೆ ಮಾಡಿರುವುದು ವಿಶೇಷ.

ಸದ್ಯ ಮಾರ್ಟಿನ್ ಚಿತ್ರದಲ್ಲಿ ತೊಡಗಿಸಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್, ಶೀಘ್ರದಲ್ಲೇ ಜೋಗಿ ಪ್ರೇಮ್ ಅವರು ಆ್ಯಕ್ಷನ್ ಕಟ್ ಹೇಳಲಿರುವ ಮಾಸ್ ಮಸಾಲ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ.

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ