AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?

ಪ್ರೇಮ್​ ಎಕ್​ ಲವ್​ ಯಾ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಸುದೀಪ್​ಗೆ ಆ್ಯಕ್ಷನ್​ ಕಟ್​ ಹೇಳುವ ಆಲೋಚನೆ ಪ್ರೇಮ್​ ಅವರದ್ದಾಗಿತ್ತು.

ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on: Apr 25, 2021 | 5:10 PM

Share

ಫೆಬ್ರವರಿ ತಿಂಗಳಲ್ಲಿ ತೆರೆಕಂಡ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ಈಗ ಧ್ರುವ ಸರ್ಜಾ ‘ದುಬಾರಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಸಿನಿಮಾ ಕೆಲಸಗಳು ಸೆಟ್ಟೇರೋದು ವಿಳಂಬವಾಗುತ್ತಿದೆ. ಹೀಗಾಗಿ, ಧ್ರುವ ಮುಂದಿನ ಚಿತ್ರ ಜೋಗಿ ಪ್ರೇಮ್​ ಜತೆಗೆ ಎನ್ನುವ ಮಾತು ಕೇಳಿ ಬಂದಿದೆ.

ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ. ಆದರೆ, ಚಿತ್ರದ ಶೂಟಿಂಗ್​ ವಿಳಂಬವಾದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ, ಜೋಗಿ ಪ್ರೇಮ್​ ಜತೆ ಧ್ರುವ ಕೈ ಜೋಡಿಸೋ ಆಲೋಚನೆ ಇಟ್ಟುಕೊಂಡಿದ್ದಾರೆ.

ಪ್ರೇಮ್​ ಎಕ್​ ಲವ್​ ಯಾ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಸುದೀಪ್​ಗೆ ಆ್ಯಕ್ಷನ್​ ಕಟ್​ ಹೇಳುವ ಆಲೋಚನೆ ಪ್ರೇಮ್​ ಅವರದ್ದಾಗಿತ್ತು. ಆದರೆ, ಈಗ ಅವರು ಧ್ರುವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಗಾಂಧಿ ನಗರದಲ್ಲಿ ಹರಿದಾಡಿದೆ.

ಈಗಾಗಲೇ ಧ್ರುವ ಹಾಗೂ ಪ್ರೇಮ್​ ಜತೆ ಒಂದು ಹಂತದ ಮಾತುಕತೆ ಪೂರ್ಣಗೊಂಡಿದೆ ಎನ್ನುತ್ತಿವೆ ಮೂಲಗಳು. ಸಿನಿಮಾದ ಕಥೆ ಧ್ರುವ ಅವರಿಗೂ ಇಷ್ಟವಾಗಿದೆ. ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿದ್ದು, ಶೀಘ್ರವೇ ಈ ಬಗ್ಗೆ ಲೇಟೆಸ್ಟ್​ ಅಪ್​ಡೇಟ್​ ಸಿಗಲಿದೆಯಂತೆ. ಅಂದಹಾಗೆ, ಈ ಚಿತ್ರ ಯಾವಾಗ ಸೆಟ್ಟೇರಲಿದೆ ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಫೆಬ್ರವರಿ ತಿಂಗಳಲ್ಲಿ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಮೊದಲ ಮೂರು ದಿನಕ್ಕೆ ಈ ಚಿತ್ರ 30 ಕೋಟಿ ರೂ. ಕಲೆಕ್ಷನ್​ ಮಾಡಿತು. 6 ದಿನಗಳಲ್ಲಿ 46 ಕೋಟಿ ರೂ. ಗಳಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಒಟ್ಟಾರೆಯಾಗಿ ಈ ಚಿತ್ರಕ್ಕೆ 50 ಕೋಟಿಗೂ ಹೆಚ್ಚು ಕಲೆಕ್ಷನ್​ ಆಗಿದೆ ಎನ್ನಲಾಗುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತೆರೆಕಂಡಿತ್ತು.

ಇದನ್ನೂ ಓದಿ: ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!