ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?

ಪ್ರೇಮ್​ ಎಕ್​ ಲವ್​ ಯಾ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಸುದೀಪ್​ಗೆ ಆ್ಯಕ್ಷನ್​ ಕಟ್​ ಹೇಳುವ ಆಲೋಚನೆ ಪ್ರೇಮ್​ ಅವರದ್ದಾಗಿತ್ತು.

ಮುಂದಿನ ಚಿತ್ರಕ್ಕಾಗಿ ಕನ್ನಡದ ಸ್ಟಾರ್​ ನಿರ್ದೇಶಕನ ಜತೆ ಕೈ ಜೋಡಿಸಿದ ಧ್ರುವ ಸರ್ಜಾ?
ಧ್ರುವ ಸರ್ಜಾ
Follow us
| Updated By: ಮದನ್​ ಕುಮಾರ್​

Updated on: Apr 25, 2021 | 5:10 PM

ಫೆಬ್ರವರಿ ತಿಂಗಳಲ್ಲಿ ತೆರೆಕಂಡ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ಈಗ ಧ್ರುವ ಸರ್ಜಾ ‘ದುಬಾರಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಸಿನಿಮಾ ಕೆಲಸಗಳು ಸೆಟ್ಟೇರೋದು ವಿಳಂಬವಾಗುತ್ತಿದೆ. ಹೀಗಾಗಿ, ಧ್ರುವ ಮುಂದಿನ ಚಿತ್ರ ಜೋಗಿ ಪ್ರೇಮ್​ ಜತೆಗೆ ಎನ್ನುವ ಮಾತು ಕೇಳಿ ಬಂದಿದೆ.

ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ. ಆದರೆ, ಚಿತ್ರದ ಶೂಟಿಂಗ್​ ವಿಳಂಬವಾದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ, ಜೋಗಿ ಪ್ರೇಮ್​ ಜತೆ ಧ್ರುವ ಕೈ ಜೋಡಿಸೋ ಆಲೋಚನೆ ಇಟ್ಟುಕೊಂಡಿದ್ದಾರೆ.

ಪ್ರೇಮ್​ ಎಕ್​ ಲವ್​ ಯಾ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಸುದೀಪ್​ಗೆ ಆ್ಯಕ್ಷನ್​ ಕಟ್​ ಹೇಳುವ ಆಲೋಚನೆ ಪ್ರೇಮ್​ ಅವರದ್ದಾಗಿತ್ತು. ಆದರೆ, ಈಗ ಅವರು ಧ್ರುವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಗಾಂಧಿ ನಗರದಲ್ಲಿ ಹರಿದಾಡಿದೆ.

ಈಗಾಗಲೇ ಧ್ರುವ ಹಾಗೂ ಪ್ರೇಮ್​ ಜತೆ ಒಂದು ಹಂತದ ಮಾತುಕತೆ ಪೂರ್ಣಗೊಂಡಿದೆ ಎನ್ನುತ್ತಿವೆ ಮೂಲಗಳು. ಸಿನಿಮಾದ ಕಥೆ ಧ್ರುವ ಅವರಿಗೂ ಇಷ್ಟವಾಗಿದೆ. ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿದ್ದು, ಶೀಘ್ರವೇ ಈ ಬಗ್ಗೆ ಲೇಟೆಸ್ಟ್​ ಅಪ್​ಡೇಟ್​ ಸಿಗಲಿದೆಯಂತೆ. ಅಂದಹಾಗೆ, ಈ ಚಿತ್ರ ಯಾವಾಗ ಸೆಟ್ಟೇರಲಿದೆ ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಫೆಬ್ರವರಿ ತಿಂಗಳಲ್ಲಿ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಮೊದಲ ಮೂರು ದಿನಕ್ಕೆ ಈ ಚಿತ್ರ 30 ಕೋಟಿ ರೂ. ಕಲೆಕ್ಷನ್​ ಮಾಡಿತು. 6 ದಿನಗಳಲ್ಲಿ 46 ಕೋಟಿ ರೂ. ಗಳಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಒಟ್ಟಾರೆಯಾಗಿ ಈ ಚಿತ್ರಕ್ಕೆ 50 ಕೋಟಿಗೂ ಹೆಚ್ಚು ಕಲೆಕ್ಷನ್​ ಆಗಿದೆ ಎನ್ನಲಾಗುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತೆರೆಕಂಡಿತ್ತು.

ಇದನ್ನೂ ಓದಿ: ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ