‘ಆಪರೇಶನ್ ಡಿ’ ಸಿನಿಮಾ ಟೀಸರ್​ ಬಿಡುಗಡೆ ಮಾಡಿದ ಧ್ರುವ ಸರ್ಜಾ; ಚಿತ್ರತಂಡಕ್ಕೆ ಖುಷಿ

‘ಆಪರೇಶನ್ ಡಿ’ ಸಿನಿಮಾ ತಂಡಕ್ಕೆ ಆ್ಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅವರು ಬೆಂಬಲ ನೀಡಿದ್ದಾರೆ. ಟೀಸರ್​ ಬಿಡುಗಡೆ ಮಾಡಿಕೊಡುವ ಮೂಲಕ ವಿಶ್​ ಮಾಡಿದ್ದಾರೆ. ರುದ್ರೇಶ್ ಬೂದನೂರು, ಸುಹಾಸ್ ಆತ್ರೇಯ, ವಿನೋದ್ ದೇವ್, ಸ್ನೇಹಾ ಭಟ್, ಇಂಚರಾ ಭರತ್ ರಾಜ್ ಮುಂತಾದವರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಇತ್ತೀಚೆಗೆ ‘ಆಪರೇಶನ್ ಡಿ’ ಚಿತ್ರದ ಸುದ್ದಿಗೋಷ್ಠಿ ನಡೆಯಿತು.

‘ಆಪರೇಶನ್ ಡಿ’ ಸಿನಿಮಾ ಟೀಸರ್​ ಬಿಡುಗಡೆ ಮಾಡಿದ ಧ್ರುವ ಸರ್ಜಾ; ಚಿತ್ರತಂಡಕ್ಕೆ ಖುಷಿ
‘ಆಪರೇಷನ್​ ಡಿ’ ಚಿತ್ರತಂಡ
Follow us
|

Updated on: Oct 07, 2024 | 10:25 PM

ನಟ ಧ್ರುವ ಸರ್ಜಾ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಅವರು ‘ಆಪರೇಶನ್ ಡಿ’ ಸಿನಿಮಾದ ಟೀಸರ್ ರಿಲೀಸ್​ ಮಾಡಿದರು. ‘ಅದ್ವಿತಾ ಫಿಲ್ಮ್ ಫ್ಯಾಕ್ಟರಿ’ ಮತ್ತು ‘ಮಸ್ಕ್ಯುಲರ್ ಗ್ರೂಪ್’ ಮೂಲಕ ಭಾರ್ಗವಿ ಮುರಳಿ, ರಂಗನಾಥ್ ಬಿ. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ತಿರುಮಲೇಶ್ ವಿ. ನಿರ್ದೇಶನ ಮಾಡಿದ್ದು, ಧ್ರುವ ಸರ್ಜಾ ಅವರು ಈ ಸಿನಿಮಾ ತಂಡಕ್ಕೆ ವಿಶ್ ಮಾಡಿದ್ದಾರೆ. ಟೀಸರ್ ಲಾಂಚ್ ಮಾಡಿದ ಧ್ರುವ ಸರ್ಜಾ ಅವರಿಗೆ ನಿರ್ದೇಶಕ ತಿರುಮಲೇಶ್​ ಅವರು ಧನ್ಯವಾದ ತಿಳಿಸಿದ್ದಾರೆ. ಟೀಸರ್​ ಬಿಡುಗಡೆ ನಂತರ ‘ಆಪರೇಶನ್ ಡಿ’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿದರು.

ಈ ಸಿನಿಮಾದಲ್ಲಿ ಸಸ್ಪೆನ್ಸ್-ಥ್ರಿಲ್ಲರ್, ಮರ್ಡರ್ ಮಿಸ್ಟರಿ ಕಹಾನಿ ಇರಲಿದೆ. ಈ ಬಗ್ಗೆ ನಿರ್ದೇಶಕರು ವಿವರಣೆ ನೀಡಿದ್ದಾರೆ. ‘ಮರ್ಡರ್ ಮಿಸ್ಟರಿ ಆಗಿದ್ದರೂ ಕೂಡ ಈ ಸಿನಿಮಾದ ಯಾವುದೇ ದೃಶ್ಯದಲ್ಲಿ ರಕ್ತ ಕಾಣಿಸಲ್ಲ. 2018 ಮತ್ತು 2019ರ ಸಮಯದಲ್ಲಿ ಬರೆದ ಕಾಲ್ಪನಿಕ ಕಥೆ ಇದು. 2022ರಲ್ಲಿ ಆ ಕಥೆ ಸಿನಿಮಾ ರೂಪ ಸಿಕ್ಕಿತು. ಈ ಸಿನಿಮಾ ಆಗಲು ಕುಟುಂಬದವರು ಮತ್ತು ಸ್ನೇಹಿತರು ಸಹಕಾರ ನೀಡಿದರು’ ಎಂದು ನಿರ್ದೇಶಕರು ಹೇಳಿದ್ದಾರೆ.

‘ಆಪರೇಶನ್ ಡಿ’ ಸಿನಿಮಾಗೆ ಸದ್ಯದಲ್ಲೇ ಸೆನ್ಸಾರ್ ಪ್ರಕ್ರಿಯೆ ನಡೆಯಲಿದೆ. ಈ ವರ್ಷದ ಕೊನೆಯಲ್ಲಿ ಸಿನಿಮಾವನ್ನು ತೆರೆಕಾಣಿಸಲು ಪ್ಲ್ಯಾನ್​ ನಡೆದಿದೆ. ಟೀಸರ್​ನಲ್ಲಿರುವ ನಾರಾಯಣ, ಲಕ್ಷ್ಮೀ ಮತ್ತು ನಾರದ ಪಾತ್ರಗಳಿಗೆ ಶ್ರೀನಿ, ಸಂಗೀತಾ ಭಟ್, ಸುದರ್ಶನ್ ರಂಗಪ್ರಸಾದ್ ಧ್ವನಿ ನೀಡಿದ್ದಾರೆ. ‘ಸಿರಿ ಮ್ಯೂಸಿಕ್’ ಯೂಟ್ಯೂಬ್ ಚಾನಲ್ ಮೂಲಕ ಟೀಸರ್​ ಬಿಡುಗಡೆಯಾಗಿದೆ.

ಇದನ್ನೂ ಓದಿ: ಮಾರ್ಟಿನ್​ ಟ್ರೇಲರ್​ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ನೇರವಾಗಿ ಉತ್ತರ ನೀಡಿದ ಧ್ರುವ ಸರ್ಜಾ ‌ ವೇದಿಕಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ 4 ಹಾಡುಗಳು ಇರಲಿವೆ. ಕೆಂಪಗಿರಿ, ತಿರುಮಲೇಶ್ ಅವರು ತಲಾ ಒಂದು ಸಾಂಗ್ ಬರೆದಿದ್ದಾರೆ. ಇನ್ನುಳಿದ 2 ಹಾಡುಗಳಿಗೆ ವೇದಿಕಾ ಅವರ ಸಾಹಿತ್ಯವಿದೆ. ವಿಕ್ರಮ್ ಶ್ರೀಧರ್ ಸಂಕಲನ ಮಾಡಿದ್ದಾರೆ. ಕಾರ್ತಿಕ್ ಪ್ರಸಾದ್ ಛಾಯಾಗ್ರಾಹಕ ಮಾಡಿದ್ದಾರೆ. ಜೈ ಹರಿಪ್ರಸಾದ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ.

ರುದ್ರೇಶ್ ಬೂದನೂರು, ವಿನೋದ್ ದೇವ್, ಸುಹಾಸ್ ಆತ್ರೇಯ, ಸ್ನೇಹಾ ಭಟ್, ಇಂಚರಾ ಭರತ್ ರಾಜ್, ಶ್ರೀಧರ್, ಮಹೇಶ್ ಎಸ್. ಕಲಿ, ಪೃಥ್ವಿ ಬನವಾಸಿ, ಸಂಚಯಾ ನಾಗರಾಜ್, ಶಿವಾನಂದ್, ವೆಂಕಟಾಚಲ, ಶಿವಮಂಜು, ಕ್ರೇಜಿ ನಾಗರಾಜ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ