AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಯನ್ ನನ್ನ ಮೊದಲ ಮಗ’; ಖುಷಿ ಖುಷಿಯಿಂದ ಮಾತನಾಡಿದ ಧ್ರುವ ಸರ್ಜಾ

ಧ್ರುವ ಸರ್ಜಾ ಅವರು ಇಂದು (ಸೆಪ್ಟೆಂಬರ್ 18) ಬೆಳಗ್ಗೆ ಖುಷಿ ಸುದ್ದಿ ನೀಡಿದರು. ತಾವು ಮತ್ತೆ ತಂದೆ ಆಗಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ಸದ್ಯ ಪ್ರೇರಣಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಧ್ರುವ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯನ್ನು ಮಾತನಾಡಿಸಿದ್ದಾರೆ.

‘ರಾಯನ್ ನನ್ನ ಮೊದಲ ಮಗ’; ಖುಷಿ ಖುಷಿಯಿಂದ ಮಾತನಾಡಿದ ಧ್ರುವ ಸರ್ಜಾ
ಧ್ರುವ-ಮೇಘನಾ-ರಾಯನ್
ರಾಜೇಶ್ ದುಗ್ಗುಮನೆ
|

Updated on: Sep 18, 2023 | 12:06 PM

Share

ಧ್ರುವ ಸರ್ಜಾ (Dhruva Sarja) ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಎರಡನೇ ಬಾರಿ ತಂದೆ ಆಗಿದ್ದಾರೆ. ಧ್ರುವ-ಪ್ರೇರಣಾ ದಂಪತಿಗೆ ಕಳೆದ ಅಕ್ಟೋಬರ್​ನಲ್ಲಿ ಹೆಣ್ಣುಮಗು ಜನಿಸಿತ್ತು. ಈಗ ಗಂಡು ಮಗುವಿಗೆ ಅವರು ತಂದೆ ಆಗಿದ್ದಾರೆ. ಧ್ರುವ ಸರ್ಜಾ ಅವರು ಈ ಸಂದರ್ಭದಲ್ಲಿ ಅಣ್ಣನ ತುಂಬಾನೇ ಮಿಸ್ ಮಾಡಿಕೊಂಡಿದ್ದಾರೆ. ಇದು ನನಗೆ ಮೂರನೇ ಮಗು ಎಂದಿದ್ದಾರೆ. ಅವರು ಈ ರೀತಿ ಹೇಳೋಕೆ ಕಾರಣವೇನು? ಆ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

ಧ್ರುವ ಸರ್ಜಾ ಅವರು ಇಂದು (ಸೆಪ್ಟೆಂಬರ್ 18) ಬೆಳಗ್ಗೆ ಖುಷಿ ಸುದ್ದಿ ನೀಡಿದರು. ತಾವು ಮತ್ತೆ ತಂದೆ ಆಗಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ಸದ್ಯ ಪ್ರೇರಣಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಧ್ರುವ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯನ್ನು ಮಾತನಾಡಿಸಿದ್ದಾರೆ. ಮಗುವನ್ನು ಎತ್ತಿಕೊಂಡಿದ್ದಾರೆ. ಆ ಬಳಿಕ ಅವರು ಮಾಧ್ಯಮದ ಜೊತೆ ಮಾತನಾಡಿದರು.

‘ಎಲ್ಲರಿಗೂ ಗಣೇಶ ಹಬ್ಬದ ಶುಭಾಶಯ. ಎರಡನೇ ಮಗು ಆಗಿದೆ. ಲೆಕ್ಕದ ಪ್ರಕಾರ ನನಗೆ ಇದು ಮೂರನೇ ಮಗು. ರಾಯನ್ ನನ್ನ ಮೊದಲ ಮಗ. ಆ ಬಳಿಕ ಹೆಣ್ಣು ಮಗು ಹುಟ್ಟಿತು. ಅವಳಿಗೆ ಇನ್ನೂ ಹೆಸರು ಇಟ್ಟಿಲ್ಲ. ಈಗ ಮತ್ತೊಂದು ಮಗು ಆಗಿದೆ. ಮನೆಯಲ್ಲಿ ಈಗ ಮೂರು ಮಕ್ಕಳಿದ್ದಾರೆ. ಸದ್ಯ ಪ್ರೇರಣಾ, ಮಗ ಆರೋಗ್ಯವಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ಮಗು ಯಾವಾಗ ಹುಟ್ಟಿದರೂ ಅದು ಒಳ್ಳೆಯ ದಿನವೇ ಆಗಿರುತ್ತದೆ. ಇಂದು ಲೆಜೆಂಡರಿಗಳು ಹುಟ್ಟಿದ ದಿನ. ಗೌರಿ ಗಣೇಶ ಹಬ್ಬ ಬೇರೆ. ಹೀಗಾಗಿ ಸಖತ್ ವಿಶೇಷ. ಗಂಡು ಮಗು ಆಗಿದ್ರೂ, ಹೆಣ್ಣು ಮಗು ಆಗಿದ್ರೂ ಯಾವುದಾದ್ರೂ ಅದನ್ನು ನಾವು ಖುಷಿಯಿಂದಲೇ ಸ್ವೀಕರಿಸುತ್ತಿದ್ದೆವು. ಅಣ್ಣನ ಮಿಸ್ ಮಾಡಿಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಧ್ರುವ ಸರ್ಜಾ.

ಇದನ್ನೂ ಓದಿ: ಮತ್ತೊಮ್ಮೆ ತಂದೆಯಾದ ಧ್ರುವ ಸರ್ಜಾ; ವಿಶೇಷ ದಿನದಂದು ಜನಿಸಿತು ಮಗು

ಧ್ರುವ ಸರ್ಜಾ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯ ತಿಳಿಸಲಾಗುತ್ತಿದೆ. ಅವರು ಮಗನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ