AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಯನ್ ನನ್ನ ಮೊದಲ ಮಗ’; ಖುಷಿ ಖುಷಿಯಿಂದ ಮಾತನಾಡಿದ ಧ್ರುವ ಸರ್ಜಾ

ಧ್ರುವ ಸರ್ಜಾ ಅವರು ಇಂದು (ಸೆಪ್ಟೆಂಬರ್ 18) ಬೆಳಗ್ಗೆ ಖುಷಿ ಸುದ್ದಿ ನೀಡಿದರು. ತಾವು ಮತ್ತೆ ತಂದೆ ಆಗಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ಸದ್ಯ ಪ್ರೇರಣಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಧ್ರುವ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯನ್ನು ಮಾತನಾಡಿಸಿದ್ದಾರೆ.

‘ರಾಯನ್ ನನ್ನ ಮೊದಲ ಮಗ’; ಖುಷಿ ಖುಷಿಯಿಂದ ಮಾತನಾಡಿದ ಧ್ರುವ ಸರ್ಜಾ
ಧ್ರುವ-ಮೇಘನಾ-ರಾಯನ್
ರಾಜೇಶ್ ದುಗ್ಗುಮನೆ
|

Updated on: Sep 18, 2023 | 12:06 PM

Share

ಧ್ರುವ ಸರ್ಜಾ (Dhruva Sarja) ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಎರಡನೇ ಬಾರಿ ತಂದೆ ಆಗಿದ್ದಾರೆ. ಧ್ರುವ-ಪ್ರೇರಣಾ ದಂಪತಿಗೆ ಕಳೆದ ಅಕ್ಟೋಬರ್​ನಲ್ಲಿ ಹೆಣ್ಣುಮಗು ಜನಿಸಿತ್ತು. ಈಗ ಗಂಡು ಮಗುವಿಗೆ ಅವರು ತಂದೆ ಆಗಿದ್ದಾರೆ. ಧ್ರುವ ಸರ್ಜಾ ಅವರು ಈ ಸಂದರ್ಭದಲ್ಲಿ ಅಣ್ಣನ ತುಂಬಾನೇ ಮಿಸ್ ಮಾಡಿಕೊಂಡಿದ್ದಾರೆ. ಇದು ನನಗೆ ಮೂರನೇ ಮಗು ಎಂದಿದ್ದಾರೆ. ಅವರು ಈ ರೀತಿ ಹೇಳೋಕೆ ಕಾರಣವೇನು? ಆ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

ಧ್ರುವ ಸರ್ಜಾ ಅವರು ಇಂದು (ಸೆಪ್ಟೆಂಬರ್ 18) ಬೆಳಗ್ಗೆ ಖುಷಿ ಸುದ್ದಿ ನೀಡಿದರು. ತಾವು ಮತ್ತೆ ತಂದೆ ಆಗಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ಸದ್ಯ ಪ್ರೇರಣಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಧ್ರುವ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯನ್ನು ಮಾತನಾಡಿಸಿದ್ದಾರೆ. ಮಗುವನ್ನು ಎತ್ತಿಕೊಂಡಿದ್ದಾರೆ. ಆ ಬಳಿಕ ಅವರು ಮಾಧ್ಯಮದ ಜೊತೆ ಮಾತನಾಡಿದರು.

‘ಎಲ್ಲರಿಗೂ ಗಣೇಶ ಹಬ್ಬದ ಶುಭಾಶಯ. ಎರಡನೇ ಮಗು ಆಗಿದೆ. ಲೆಕ್ಕದ ಪ್ರಕಾರ ನನಗೆ ಇದು ಮೂರನೇ ಮಗು. ರಾಯನ್ ನನ್ನ ಮೊದಲ ಮಗ. ಆ ಬಳಿಕ ಹೆಣ್ಣು ಮಗು ಹುಟ್ಟಿತು. ಅವಳಿಗೆ ಇನ್ನೂ ಹೆಸರು ಇಟ್ಟಿಲ್ಲ. ಈಗ ಮತ್ತೊಂದು ಮಗು ಆಗಿದೆ. ಮನೆಯಲ್ಲಿ ಈಗ ಮೂರು ಮಕ್ಕಳಿದ್ದಾರೆ. ಸದ್ಯ ಪ್ರೇರಣಾ, ಮಗ ಆರೋಗ್ಯವಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ಮಗು ಯಾವಾಗ ಹುಟ್ಟಿದರೂ ಅದು ಒಳ್ಳೆಯ ದಿನವೇ ಆಗಿರುತ್ತದೆ. ಇಂದು ಲೆಜೆಂಡರಿಗಳು ಹುಟ್ಟಿದ ದಿನ. ಗೌರಿ ಗಣೇಶ ಹಬ್ಬ ಬೇರೆ. ಹೀಗಾಗಿ ಸಖತ್ ವಿಶೇಷ. ಗಂಡು ಮಗು ಆಗಿದ್ರೂ, ಹೆಣ್ಣು ಮಗು ಆಗಿದ್ರೂ ಯಾವುದಾದ್ರೂ ಅದನ್ನು ನಾವು ಖುಷಿಯಿಂದಲೇ ಸ್ವೀಕರಿಸುತ್ತಿದ್ದೆವು. ಅಣ್ಣನ ಮಿಸ್ ಮಾಡಿಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಧ್ರುವ ಸರ್ಜಾ.

ಇದನ್ನೂ ಓದಿ: ಮತ್ತೊಮ್ಮೆ ತಂದೆಯಾದ ಧ್ರುವ ಸರ್ಜಾ; ವಿಶೇಷ ದಿನದಂದು ಜನಿಸಿತು ಮಗು

ಧ್ರುವ ಸರ್ಜಾ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯ ತಿಳಿಸಲಾಗುತ್ತಿದೆ. ಅವರು ಮಗನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!