AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

ಅವರು ಲಸಿಕೆ ಹಾಕಿಸಿಕೊಳ್ಳುವಾಗ ಶರ್ಟ್​ ತೆಗೆದಿದ್ದರು. ಹೀಗಾಗಿ, ಅವರ ಬೈಸೆಪ್ಸ್​ ಎದ್ದು ಕಾಣುತ್ತಿತ್ತು. ಇದನ್ನು ನೋಡಿದ ಅಭಿಮಾನಿಗಳು ದಂಗಾಗಿದ್ದಾರೆ.

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on:Jun 05, 2021 | 7:49 PM

Share

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಹರಸಾಹಸ ಪಡುತ್ತಿದೆ. ಇದರ ಜತೆಗೆ ​ ಕೊರೊನಾ ಲಸಿಕೆ ನೀಡುವ ವೇಗವನ್ನು ಹೆಚ್ಚಿಸಿದೆ. ಅನೇಕ ಸೆಲೆಬ್ರಿಟಿಗಳು ಕೊವಿಡ್​ ಲಸಿಕೆ ಪಡೆದು ತಮ್ಮ ಅಭಿಮಾನಿಗಳ ಬಳಿ ಕೊರೊನಾ ಲಸಿಕೆ ಪಡೆಯವಂತೆ ಕರೆ ನೀಡುತ್ತಿದ್ದಾರೆ. ಈಗ ಸ್ಯಾಂಡಲ್​​ವುಡ್​ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಕೂಡ ಕೊವಿಡ್​ ಲಸಿಕೆ ಹಾಕಿಸಿಕೊಂಡಿದ್ದಾರೆ.  

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ ದಂಪತಿ ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಧ್ರುವ, ನೀವೂ ಕೂಡ ತಪ್ಪದೇ ವ್ಯಾಕ್ಸಿನೇಷನ್​ ಮಾಡಿಕೊಂಡು ಕೊವಿಡ್ ಮುಕ್ತ ಭಾರತ ನಿರ್ಮಾಣ ಮಾಡಲು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಇನ್ನು, ಅವರು ಲಸಿಕೆ ಹಾಕಿಸಿಕೊಳ್ಳುವಾಗ ಶರ್ಟ್​ ತೆಗೆದಿದ್ದರು. ಹೀಗಾಗಿ, ಅವರ ಬೈಸೆಪ್ಸ್​ ಎದ್ದು ಕಾಣುತ್ತಿತ್ತು. ಇದನ್ನು ನೋಡಿದ ಅಭಿಮಾನಿಗಳು ದಂಗಾಗಿದ್ದಾರೆ. ಅಲ್ಲದೆ, ನಿಮ್ಮ ಬೈಸೆಪ್ಸ್​ ಅದ್ಭುತವಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ಅಗತ್ಯವಿದ್ದಲ್ಲಿ ಮಾತ್ರ ಶರ್ಟ್​ ತೆಗೆಯಿರಿ ಎಂದು ಕಿವಿಮಾತು ಹೇಳಿದ್ದಾರೆ.

ಧ್ರುವ ಸರ್ಜಾ ಅವರಿಗೆ ಕಳೆದ ವರ್ಷ ಕೊವಿಡ್​ ಪಾಸಿಟಿವ್​ ಆಗಿತ್ತು. ಈ ವೇಳೆ ಟ್ವೀಟ್​ ಮಾಡಿದ್ದ ಅವರು, ನನಗೆ ಕೊವಿಡ್ ಪಾಸಿಟಿವ್​ ಆಗಿದೆ. ಹೀಗಾಗಿ, ನಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದರು. ನಂತರ ಅವರು ಕೊವಿಡ್​ನಿಂದ ಚೇತರಿಸಿಕೊಂಡಿದ್ದರು.

ಇದೇ ವೇಳೆ ಧ್ರುವ ಅತ್ತಿಗೆ ಮೇಘನಾ ರಾಜ್​ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್​ ಆಗಿತ್ತು. ಆ ವಿಚಾರವನ್ನು ಅವರು ಡಿ.8ರಂದು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದರು. ಮೇಘನಾ ರಾಜ್​ ಮತ್ತು ಅವರ ಪುತ್ರ ಮನೆಯಲ್ಲೇ ಐಸೋಲೇಟ್​ ಆಗಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾದರು.

ಇದನ್ನೂ ಓದಿ: Meghana Raj: ಮೇಘನಾ ರಾಜ್​ ಮನೆಯಲ್ಲಿ ಮತ್ತೆ ಶೋಕ; ಕುಟುಂಬದ ಸದಸ್ಯನಂತಿದ್ದ ಬ್ರುನೋ ಸಾವು

Published On - 7:31 pm, Sat, 5 June 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ