AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

ಅವರು ಲಸಿಕೆ ಹಾಕಿಸಿಕೊಳ್ಳುವಾಗ ಶರ್ಟ್​ ತೆಗೆದಿದ್ದರು. ಹೀಗಾಗಿ, ಅವರ ಬೈಸೆಪ್ಸ್​ ಎದ್ದು ಕಾಣುತ್ತಿತ್ತು. ಇದನ್ನು ನೋಡಿದ ಅಭಿಮಾನಿಗಳು ದಂಗಾಗಿದ್ದಾರೆ.

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on:Jun 05, 2021 | 7:49 PM

Share

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಹರಸಾಹಸ ಪಡುತ್ತಿದೆ. ಇದರ ಜತೆಗೆ ​ ಕೊರೊನಾ ಲಸಿಕೆ ನೀಡುವ ವೇಗವನ್ನು ಹೆಚ್ಚಿಸಿದೆ. ಅನೇಕ ಸೆಲೆಬ್ರಿಟಿಗಳು ಕೊವಿಡ್​ ಲಸಿಕೆ ಪಡೆದು ತಮ್ಮ ಅಭಿಮಾನಿಗಳ ಬಳಿ ಕೊರೊನಾ ಲಸಿಕೆ ಪಡೆಯವಂತೆ ಕರೆ ನೀಡುತ್ತಿದ್ದಾರೆ. ಈಗ ಸ್ಯಾಂಡಲ್​​ವುಡ್​ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಕೂಡ ಕೊವಿಡ್​ ಲಸಿಕೆ ಹಾಕಿಸಿಕೊಂಡಿದ್ದಾರೆ.  

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ ದಂಪತಿ ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಧ್ರುವ, ನೀವೂ ಕೂಡ ತಪ್ಪದೇ ವ್ಯಾಕ್ಸಿನೇಷನ್​ ಮಾಡಿಕೊಂಡು ಕೊವಿಡ್ ಮುಕ್ತ ಭಾರತ ನಿರ್ಮಾಣ ಮಾಡಲು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಇನ್ನು, ಅವರು ಲಸಿಕೆ ಹಾಕಿಸಿಕೊಳ್ಳುವಾಗ ಶರ್ಟ್​ ತೆಗೆದಿದ್ದರು. ಹೀಗಾಗಿ, ಅವರ ಬೈಸೆಪ್ಸ್​ ಎದ್ದು ಕಾಣುತ್ತಿತ್ತು. ಇದನ್ನು ನೋಡಿದ ಅಭಿಮಾನಿಗಳು ದಂಗಾಗಿದ್ದಾರೆ. ಅಲ್ಲದೆ, ನಿಮ್ಮ ಬೈಸೆಪ್ಸ್​ ಅದ್ಭುತವಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ಅಗತ್ಯವಿದ್ದಲ್ಲಿ ಮಾತ್ರ ಶರ್ಟ್​ ತೆಗೆಯಿರಿ ಎಂದು ಕಿವಿಮಾತು ಹೇಳಿದ್ದಾರೆ.

ಧ್ರುವ ಸರ್ಜಾ ಅವರಿಗೆ ಕಳೆದ ವರ್ಷ ಕೊವಿಡ್​ ಪಾಸಿಟಿವ್​ ಆಗಿತ್ತು. ಈ ವೇಳೆ ಟ್ವೀಟ್​ ಮಾಡಿದ್ದ ಅವರು, ನನಗೆ ಕೊವಿಡ್ ಪಾಸಿಟಿವ್​ ಆಗಿದೆ. ಹೀಗಾಗಿ, ನಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದರು. ನಂತರ ಅವರು ಕೊವಿಡ್​ನಿಂದ ಚೇತರಿಸಿಕೊಂಡಿದ್ದರು.

ಇದೇ ವೇಳೆ ಧ್ರುವ ಅತ್ತಿಗೆ ಮೇಘನಾ ರಾಜ್​ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್​ ಆಗಿತ್ತು. ಆ ವಿಚಾರವನ್ನು ಅವರು ಡಿ.8ರಂದು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದರು. ಮೇಘನಾ ರಾಜ್​ ಮತ್ತು ಅವರ ಪುತ್ರ ಮನೆಯಲ್ಲೇ ಐಸೋಲೇಟ್​ ಆಗಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾದರು.

ಇದನ್ನೂ ಓದಿ: Meghana Raj: ಮೇಘನಾ ರಾಜ್​ ಮನೆಯಲ್ಲಿ ಮತ್ತೆ ಶೋಕ; ಕುಟುಂಬದ ಸದಸ್ಯನಂತಿದ್ದ ಬ್ರುನೋ ಸಾವು

Published On - 7:31 pm, Sat, 5 June 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ