AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

ಅವರು ಲಸಿಕೆ ಹಾಕಿಸಿಕೊಳ್ಳುವಾಗ ಶರ್ಟ್​ ತೆಗೆದಿದ್ದರು. ಹೀಗಾಗಿ, ಅವರ ಬೈಸೆಪ್ಸ್​ ಎದ್ದು ಕಾಣುತ್ತಿತ್ತು. ಇದನ್ನು ನೋಡಿದ ಅಭಿಮಾನಿಗಳು ದಂಗಾಗಿದ್ದಾರೆ.

ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on:Jun 05, 2021 | 7:49 PM

Share

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಹರಸಾಹಸ ಪಡುತ್ತಿದೆ. ಇದರ ಜತೆಗೆ ​ ಕೊರೊನಾ ಲಸಿಕೆ ನೀಡುವ ವೇಗವನ್ನು ಹೆಚ್ಚಿಸಿದೆ. ಅನೇಕ ಸೆಲೆಬ್ರಿಟಿಗಳು ಕೊವಿಡ್​ ಲಸಿಕೆ ಪಡೆದು ತಮ್ಮ ಅಭಿಮಾನಿಗಳ ಬಳಿ ಕೊರೊನಾ ಲಸಿಕೆ ಪಡೆಯವಂತೆ ಕರೆ ನೀಡುತ್ತಿದ್ದಾರೆ. ಈಗ ಸ್ಯಾಂಡಲ್​​ವುಡ್​ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಕೂಡ ಕೊವಿಡ್​ ಲಸಿಕೆ ಹಾಕಿಸಿಕೊಂಡಿದ್ದಾರೆ.  

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ ದಂಪತಿ ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಧ್ರುವ, ನೀವೂ ಕೂಡ ತಪ್ಪದೇ ವ್ಯಾಕ್ಸಿನೇಷನ್​ ಮಾಡಿಕೊಂಡು ಕೊವಿಡ್ ಮುಕ್ತ ಭಾರತ ನಿರ್ಮಾಣ ಮಾಡಲು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಇನ್ನು, ಅವರು ಲಸಿಕೆ ಹಾಕಿಸಿಕೊಳ್ಳುವಾಗ ಶರ್ಟ್​ ತೆಗೆದಿದ್ದರು. ಹೀಗಾಗಿ, ಅವರ ಬೈಸೆಪ್ಸ್​ ಎದ್ದು ಕಾಣುತ್ತಿತ್ತು. ಇದನ್ನು ನೋಡಿದ ಅಭಿಮಾನಿಗಳು ದಂಗಾಗಿದ್ದಾರೆ. ಅಲ್ಲದೆ, ನಿಮ್ಮ ಬೈಸೆಪ್ಸ್​ ಅದ್ಭುತವಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ಅಗತ್ಯವಿದ್ದಲ್ಲಿ ಮಾತ್ರ ಶರ್ಟ್​ ತೆಗೆಯಿರಿ ಎಂದು ಕಿವಿಮಾತು ಹೇಳಿದ್ದಾರೆ.

ಧ್ರುವ ಸರ್ಜಾ ಅವರಿಗೆ ಕಳೆದ ವರ್ಷ ಕೊವಿಡ್​ ಪಾಸಿಟಿವ್​ ಆಗಿತ್ತು. ಈ ವೇಳೆ ಟ್ವೀಟ್​ ಮಾಡಿದ್ದ ಅವರು, ನನಗೆ ಕೊವಿಡ್ ಪಾಸಿಟಿವ್​ ಆಗಿದೆ. ಹೀಗಾಗಿ, ನಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದರು. ನಂತರ ಅವರು ಕೊವಿಡ್​ನಿಂದ ಚೇತರಿಸಿಕೊಂಡಿದ್ದರು.

ಇದೇ ವೇಳೆ ಧ್ರುವ ಅತ್ತಿಗೆ ಮೇಘನಾ ರಾಜ್​ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್​ ಆಗಿತ್ತು. ಆ ವಿಚಾರವನ್ನು ಅವರು ಡಿ.8ರಂದು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದರು. ಮೇಘನಾ ರಾಜ್​ ಮತ್ತು ಅವರ ಪುತ್ರ ಮನೆಯಲ್ಲೇ ಐಸೋಲೇಟ್​ ಆಗಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾದರು.

ಇದನ್ನೂ ಓದಿ: Meghana Raj: ಮೇಘನಾ ರಾಜ್​ ಮನೆಯಲ್ಲಿ ಮತ್ತೆ ಶೋಕ; ಕುಟುಂಬದ ಸದಸ್ಯನಂತಿದ್ದ ಬ್ರುನೋ ಸಾವು

Published On - 7:31 pm, Sat, 5 June 21

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!