AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಹಾಡಿನಿಂದ ಜೋರಾಗಲಿದೆ ‘ಕೆಡಿ’ ಅಬ್ಬರ; ಡಿ.24ಕ್ಕೆ ಶಿವ ಶಿವ ಸಾಂಗ್

ಜೋಗಿ ಪ್ರೇಮ್​ ನಿರ್ದೇಶನದ ಸಿನಿಮಾಗಳಲ್ಲಿ ಹಾಡಿಗೆ ಮೊದಲ ಆದ್ಯತೆ ಇರುತ್ತದೆ. ಈಗ ಅವರು ‘ಕೆಡಿ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದು, ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾಗೆ ಅರ್ಜುನ್​ ಜನ್ಯ ಅವರು ಸಂಗೀತ ಸಂಯೋಜಿಸಿದ್ದಾರೆ. ಇತ್ತೀಚೆಗೆ ‘ಕೆಡಿ’ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.

ಮೊದಲ ಹಾಡಿನಿಂದ ಜೋರಾಗಲಿದೆ ‘ಕೆಡಿ’ ಅಬ್ಬರ; ಡಿ.24ಕ್ಕೆ ಶಿವ ಶಿವ ಸಾಂಗ್
Dhruva Sarja, Jogi Prem, Suprith
ಮದನ್​ ಕುಮಾರ್​
|

Updated on: Dec 18, 2024 | 6:52 PM

Share

‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ ಮತ್ತು ಡೈರೆಕ್ಟರ್​ ಜೋಗಿ ಪ್ರೇಮ್ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಕೆಡಿ’ ಸಿನಿಮಾಗೆ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಈ ನಡುವೆ ಸಿನಿಮಾದ ಪ್ರಚಾರದ ಕಡೆಗೂ ಚಿತ್ರತಂಡ ಗಮನ ಹರಿಸಿದೆ. ಹಾಡುಗಳ ಮೂಲಕ ಜನರನ್ನು ಸೆಳೆಯಲು ಪ್ಲ್ಯಾನ್ ಮಾಡಲಾಗಿದೆ. 80ರ ದಶಕ ಕಹಾನಿ ಈ ಸಿನಿಮಾದಲ್ಲಿದೆ. ಕೆಡಿ ಅಲಿಯಾಸ್ ಕಾಳಿದಾಸನಾಗಿ ಧ್ರುವ ಸರ್ಜಾ ಅವರು ಕಾಣಿಸಿಕೊಳ್ಳಲಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಡಿಸೆಂಬರ್​ 24ರಂದು ‘ಕೆಡಿ’ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಲಿದೆ.

ಸದ್ಯಕ್ಕೆ ‘ಕೆಡಿ’ ಚಿತ್ರತಂಡದವರು ಡಬ್ಬಿಂಗ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಕಾಶ್​ ರೆಕಾರ್ಡಿಂಗ್ ಸ್ಟುಡಿಯೋದಲ್ಲೇ ಸುದ್ದಿಗೋಷ್ಠಿ ಮಾಡಲಾಯಿತು. ಈ ವೇಳೆ ನಿರ್ದೇಶಕ ಪ್ರೇಮ್, ನಟ ಧ್ರುವ ಸರ್ಜಾ ಹಾಗೂ ಕಾರ್ಯಕಾರಿ ನಿರ್ಮಾಪಕ ಸುಪ್ರೀತ್ ಅವರು ಹಾಜರಿದ್ದರು. ಸಿನಿಮಾದ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ಈ ಚಿತ್ರಕ್ಕೆ ಮಾತಿನ ಭಾಗದ ಶೂಟಿಂಗ್ ಮುಗಿದಿದೆ. ಸದ್ಯಕ್ಕೆ 2 ಸಾಂಗ್​ ಶೂಟಿಂಗ್ ಬಾಕಿ ಇದೆ.

‘ಒಂದು ಹಾಡನ್ನು ಸೆಟ್ ಹಾಕಿ ಚಿತ್ರೀಕರಣ ಮಾಡುತ್ತೇವೆ. ಮತ್ತೊಂದು ಹಾಡನ್ನು ವಿದೇಶದಲ್ಲಿ ಚಿತ್ರೀಕರಿಸುವ ಪ್ಲ್ಯಾನ್ ಇದೆ. ಡಿಸೆಂಬರ್​ 24ಕ್ಕೆ ನಮ್ಮ ಸಿನಿಮಾದ ‘ಶಿವ ಶಿವ..’ ಎಂಬ ಸಾಂಗ್​ ಆನಂದ್ ಆಡಿಯೋ ಮೂಲಕ ರಿಲೀಸ್​ ಆಗಲಿದೆ. ಆನಂದ್ ಮಾಸ್ಟರ್ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಕೈಲಾಶ್ ಖೇರ್ ಮತ್ತು ನಾನು ಹಾಡಿದ್ದೇವೆ. ಇನ್ನುಳಿದ ಭಾಷೆಗಳಲ್ಲಿ ಅಲ್ಲಿನ ಗಾಯಕರು ಹಾಡಿದ್ದಾರೆ. ಸಿನಿಮಾದಲ್ಲಿ ಒಟ್ಟು 6 ಹಾಡುಗಳಿವೆ’ ಎಂದು ಜೋಗಿ ಪ್ರೇಮ್​ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮೊದಲ ಹಾಡನ್ನು ಬಿಡುಗಡೆ ಮಾಡಿ, ಎರಡನೇ ಹಾಡನ್ನು ಮುಂಬೈನಲ್ಲಿ ರಿಲೀಸ್ ಮಾಡಲು ‘ಕೆಡಿ’ ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಈ ಚಿತ್ರಕ್ಕೆ ಒಟ್ಟು 150 ದಿನಗಳ ಚಿತ್ರೀಕರಣ ಮಾಡಲಾಗಿದೆ. ಧ್ರುವ ಸರ್ಜಾ ಅವರು ಪಾತ್ರಕ್ಕಾಗಿ 21 ದಿನಗಳಲ್ಲಿ 18 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಎಐ ತಂತ್ರಜ್ಞಾನದ ಮೂಲಕ ಧ್ರುವ ಅವರ ಧ್ವನಿಯನ್ನೇ ಎಲ್ಲ ಭಾಷೆಗಳಲ್ಲೂ ಬರುವಂತೆ ಪ್ರಯತ್ನಿಸಲಾಗುತ್ತಿದೆ. ಈ ಎಲ್ಲ ವಿಚಾರಗಳ ಬಗ್ಗೆ ಪ್ರೇಮ್ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ‘ನೋಡಿ ಎಲ್ಲ ಕೆಡಿಗಳೇ..’: ಚಿಕ್ಕಮಗಳೂರಲ್ಲಿ ಪ್ರೇಮ್ ವಿಡಿಯೋ

ನಿರ್ಮಾಪಕ ಸುಪ್ರೀತ್ ಅವರು ಮಾತನಾಡಿ. ‘ಸಿನಿಮಾದ ಬ್ಯುಸಿನೆಸ್ ಬಗ್ಗೆ ನಾವು ಇನ್ನೂ ಕಮಿಟ್ ಆಗಿಲ್ಲ‌. ಸದ್ಯಕ್ಕೆ ಸಿನಿಮಾದ ಮೇಲಷ್ಟೇ ಗಮನ ಹರಿಸುತ್ತಿದ್ದೇವೆ. ಆಡಿಯೋ ಹಕ್ಕುಗಳು ಮಾತ್ರ ದೊಡ್ಡ ಮೊತ್ತಕ್ಕೆ ಸೇಲ್ ಆಗಿದೆ. 20 ಎಕರೆ ಪ್ರದೇಶದಲ್ಲಿ ಸೆಟ್ ಹಾಕಿ ಬಹುತೇಕ ಚಿತ್ರೀಕರಣ ಮಾಡಿದ್ದೇವೆ. ಸದ್ಯದಲ್ಲೇ ರಿಲೀಸ್ ಡೇಟ್ ಘೋಷಣೆ ಮಾಡುತ್ತೇವೆ’ ಎಂದರು. ಧ್ರುವ ಸರ್ಜಾ ಜೊತೆ ಸಂಜಯ್‌ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ನೋರಾ ಫತೇಹಿ, ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದ ಕಲಾವಿದರು ‘ಕೆಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. 1970-75ರ ಕಾಲದಲ್ಲಿ ನಡೆದ ನೈಜ ಘಟನೆ ಆಧರಿಸಿ ಸಿನಿಮಾದ ಕಥೆ ಹೆಣೆಯಲಾಗಿದೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!