AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja: ವಿಮಾನ ದುರಂತದಿಂದ ಪಾರಾದ ಧ್ರುವ ಸರ್ಜಾ, ‘ಮಾರ್ಟಿನ್’ ತಂಡ

Martin Movie: ಶ್ರೀನಗರದಿಂದ ದೆಹಲಿಗೆ ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್​’ ಚಿತ್ರತಂಡದವರು ಪ್ರಯಾಣ ಮಾಡುತ್ತಿದ್ದರು. ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಕ್ರ್ಯಾಶ್ ಆಗಬೇಕಿದ್ದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್​ ಆಗಿದ್ದು, ಚಿತ್ರತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ಧ್ರುವ ಸರ್ಜಾ ಮತ್ತು ಅವರ ತಂಡದವರು ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ತಿಳಿಸಿದ್ದಾರೆ.

Dhruva Sarja: ವಿಮಾನ ದುರಂತದಿಂದ ಪಾರಾದ ಧ್ರುವ ಸರ್ಜಾ, ‘ಮಾರ್ಟಿನ್’ ತಂಡ
ಧ್ರುವ ಸರ್ಜಾ ಜೊತೆ ‘ಮಾರ್ಟಿನ್​’ ಸಿನಿಮಾ ತಂಡ
ಮದನ್​ ಕುಮಾರ್​
|

Updated on:Feb 20, 2024 | 7:17 AM

Share

ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ ಹಾಗೂ ಅವರ ‘ಮಾರ್ಟಿನ್​’ ಸಿನಿಮಾ (Martin Movie) ತಂಡದವರು ವಿಮಾನ ದುರಂತದಿಂದ (Plane Crash) ಪಾರಾಗಿದ್ದಾರೆ. ಚಿತ್ರತಂಡದವರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ವಿಷಯ ತಿಳಿಸಿದ್ದಾರೆ. ‘ಮಾರ್ಟಿನ್​’ ಸಿನಿಮಾದ ಶೂಟಿಂಗ್​ ಬಿರುಸಿನಿಂದ ಸಾಗುತ್ತಿವೆ. ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡದವರ ಜೊತೆ ಧ್ರುವ ಸರ್ಜಾ ಅವರು ಶ್ರೀನಗರಕ್ಕೆ ತೆರಳಿದ್ದರು. ಅಲ್ಲಿ ಶೂಟಿಂಗ್​ ಮುಗಿಸಿಕೊಂಡು ದೆಹಲಿಗೆ ವಾಪಸ್​ ಬರುವಾಗ ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡಿದೆ. ಆ ಸಂದರ್ಭದ ವಿಡಿಯೋವನ್ನು ಧ್ರುವ ಸರ್ಜಾ (Dhruva Sarja) ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್​​​ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗಿದೆ. ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್​’ ಚಿತ್ರತಂಡದವರು ವಿಡಿಯೋ ಮಾಡಿದ್ದಾರೆ. ‘ಇವತ್ತಿನ ರೀತಿ ಇಷ್ಟು ಕೆಟ್ಟ ಅನುಭವ ಇಡೀ ಜೀವನದಲ್ಲೇ ಆಗಿರಲಿಲ್ಲ. ಈಗ ನಾವು ಸೇಫ್​ ಆಗಿದ್ದೇವೆ. ಜೈ ಆಂಜನೇಯ. ಪೈಲಟ್​ಗೆ ಧನ್ಯವಾದ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

‘ಮೊದಲ ಬಾರಿ ಸಾವನ್ನು ಹತ್ತಿರದಿಂದ ನೋಡಿ ವಾಪಸ್​ ಬಂದಿದ್ದೇನೆ. ಚಿರು, ತಂದೆ-ತಾಯಿ ಹಾಗೂ ಅಭಿಮಾನಿಗಳು ಆಶೀರ್ವಾದದಿಂದ ಪಾರಾಗಿದ್ದೇನೆ. ಫ್ಲೈಟ್​ನಲ್ಲಿ ಇದ್ದ ಎಲ್ಲರೂ ಜೀವ ಉಳಿಸಿಕೊಳ್ಳಲು ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ನಾವು ಸೇಫ್​ ಆಗಿ ಲ್ಯಾಂಡ್​ ಆದಾಗ ಜನರು ಖುಷಿಯಿಂದ ಕೂಗಾಡಿದರು. ತಮ್ಮ ಪ್ರೀತಿಪಾತ್ರರಿಗೆ ಕರೆ ಮಾಡಿದರು. ಆನಂದ ಭಾಷ್ಪ ಸುರಿಸಿದರು. ಚೆನ್ನಾಗಿ ಬದುಕಲು ನಮಗೆ ಈ ಮರುಜನ್ಮ ಒಂದು ಕಾರಣವಾಗಿದೆ’ ಎಂದು ಧ್ರುವ ಸರ್ಜಾ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ದಯವಿಟ್ಟು ತಗಲಾಕ್ಕೋಬೇಡಿ’; ಇಬ್ಬರ ಮಧ್ಯೆ ದ್ವೇಷ ಬೆಳೆಸಲು ಬಂದವರಿಗೆ ಧ್ರುವ ಸರ್ಜಾ ವಾರ್ನಿಂಗ್

‘ಮಾರ್ಟಿನ್’ ಚಿತ್ರತಂಡದವರು ಸೇಫ್​ ಆಗಿದ್ದಾರೆ ಎಂಬುದು ತಿಳಿದು ಅಭಿಮಾನಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ. ‘ಸುರಕ್ಷಿತವಾಗಿ ಬನ್ನಿ ಅಣ್ಣ. ನಿಮಗಾಗಿ ಕಾಯುತ್ತಿದ್ದೇವೆ. ನಿಮ್ಮ ಜೊತೆ ದೇವರು ಇದ್ದಾನೆ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ‘ಮಾರ್ಟಿನ್​’ ಸಿನಿಮಾಗೆ ಎ.ಪಿ. ಅರ್ಜುನ್​ ನಿರ್ದೇಶನ ಮಾಡುತ್ತಿದ್ದಾರೆ. ಇಮ್ರಾನ್​ ಸರ್ದಾರಿಯಾ ಅವರು ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಅವರು ಕೂಡ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:57 am, Tue, 20 February 24

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್