AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja: ವಿಮಾನ ದುರಂತದಿಂದ ಪಾರಾದ ಧ್ರುವ ಸರ್ಜಾ, ‘ಮಾರ್ಟಿನ್’ ತಂಡ

Martin Movie: ಶ್ರೀನಗರದಿಂದ ದೆಹಲಿಗೆ ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್​’ ಚಿತ್ರತಂಡದವರು ಪ್ರಯಾಣ ಮಾಡುತ್ತಿದ್ದರು. ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಕ್ರ್ಯಾಶ್ ಆಗಬೇಕಿದ್ದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್​ ಆಗಿದ್ದು, ಚಿತ್ರತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ಧ್ರುವ ಸರ್ಜಾ ಮತ್ತು ಅವರ ತಂಡದವರು ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ತಿಳಿಸಿದ್ದಾರೆ.

Dhruva Sarja: ವಿಮಾನ ದುರಂತದಿಂದ ಪಾರಾದ ಧ್ರುವ ಸರ್ಜಾ, ‘ಮಾರ್ಟಿನ್’ ತಂಡ
ಧ್ರುವ ಸರ್ಜಾ ಜೊತೆ ‘ಮಾರ್ಟಿನ್​’ ಸಿನಿಮಾ ತಂಡ
ಮದನ್​ ಕುಮಾರ್​
|

Updated on:Feb 20, 2024 | 7:17 AM

Share

ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ ಹಾಗೂ ಅವರ ‘ಮಾರ್ಟಿನ್​’ ಸಿನಿಮಾ (Martin Movie) ತಂಡದವರು ವಿಮಾನ ದುರಂತದಿಂದ (Plane Crash) ಪಾರಾಗಿದ್ದಾರೆ. ಚಿತ್ರತಂಡದವರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ವಿಷಯ ತಿಳಿಸಿದ್ದಾರೆ. ‘ಮಾರ್ಟಿನ್​’ ಸಿನಿಮಾದ ಶೂಟಿಂಗ್​ ಬಿರುಸಿನಿಂದ ಸಾಗುತ್ತಿವೆ. ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡದವರ ಜೊತೆ ಧ್ರುವ ಸರ್ಜಾ ಅವರು ಶ್ರೀನಗರಕ್ಕೆ ತೆರಳಿದ್ದರು. ಅಲ್ಲಿ ಶೂಟಿಂಗ್​ ಮುಗಿಸಿಕೊಂಡು ದೆಹಲಿಗೆ ವಾಪಸ್​ ಬರುವಾಗ ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡಿದೆ. ಆ ಸಂದರ್ಭದ ವಿಡಿಯೋವನ್ನು ಧ್ರುವ ಸರ್ಜಾ (Dhruva Sarja) ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್​​​ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗಿದೆ. ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್​’ ಚಿತ್ರತಂಡದವರು ವಿಡಿಯೋ ಮಾಡಿದ್ದಾರೆ. ‘ಇವತ್ತಿನ ರೀತಿ ಇಷ್ಟು ಕೆಟ್ಟ ಅನುಭವ ಇಡೀ ಜೀವನದಲ್ಲೇ ಆಗಿರಲಿಲ್ಲ. ಈಗ ನಾವು ಸೇಫ್​ ಆಗಿದ್ದೇವೆ. ಜೈ ಆಂಜನೇಯ. ಪೈಲಟ್​ಗೆ ಧನ್ಯವಾದ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

‘ಮೊದಲ ಬಾರಿ ಸಾವನ್ನು ಹತ್ತಿರದಿಂದ ನೋಡಿ ವಾಪಸ್​ ಬಂದಿದ್ದೇನೆ. ಚಿರು, ತಂದೆ-ತಾಯಿ ಹಾಗೂ ಅಭಿಮಾನಿಗಳು ಆಶೀರ್ವಾದದಿಂದ ಪಾರಾಗಿದ್ದೇನೆ. ಫ್ಲೈಟ್​ನಲ್ಲಿ ಇದ್ದ ಎಲ್ಲರೂ ಜೀವ ಉಳಿಸಿಕೊಳ್ಳಲು ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ನಾವು ಸೇಫ್​ ಆಗಿ ಲ್ಯಾಂಡ್​ ಆದಾಗ ಜನರು ಖುಷಿಯಿಂದ ಕೂಗಾಡಿದರು. ತಮ್ಮ ಪ್ರೀತಿಪಾತ್ರರಿಗೆ ಕರೆ ಮಾಡಿದರು. ಆನಂದ ಭಾಷ್ಪ ಸುರಿಸಿದರು. ಚೆನ್ನಾಗಿ ಬದುಕಲು ನಮಗೆ ಈ ಮರುಜನ್ಮ ಒಂದು ಕಾರಣವಾಗಿದೆ’ ಎಂದು ಧ್ರುವ ಸರ್ಜಾ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ದಯವಿಟ್ಟು ತಗಲಾಕ್ಕೋಬೇಡಿ’; ಇಬ್ಬರ ಮಧ್ಯೆ ದ್ವೇಷ ಬೆಳೆಸಲು ಬಂದವರಿಗೆ ಧ್ರುವ ಸರ್ಜಾ ವಾರ್ನಿಂಗ್

‘ಮಾರ್ಟಿನ್’ ಚಿತ್ರತಂಡದವರು ಸೇಫ್​ ಆಗಿದ್ದಾರೆ ಎಂಬುದು ತಿಳಿದು ಅಭಿಮಾನಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ. ‘ಸುರಕ್ಷಿತವಾಗಿ ಬನ್ನಿ ಅಣ್ಣ. ನಿಮಗಾಗಿ ಕಾಯುತ್ತಿದ್ದೇವೆ. ನಿಮ್ಮ ಜೊತೆ ದೇವರು ಇದ್ದಾನೆ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ‘ಮಾರ್ಟಿನ್​’ ಸಿನಿಮಾಗೆ ಎ.ಪಿ. ಅರ್ಜುನ್​ ನಿರ್ದೇಶನ ಮಾಡುತ್ತಿದ್ದಾರೆ. ಇಮ್ರಾನ್​ ಸರ್ದಾರಿಯಾ ಅವರು ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಅವರು ಕೂಡ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:57 am, Tue, 20 February 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ