Dhruva Sarja: ವಿಮಾನ ದುರಂತದಿಂದ ಪಾರಾದ ಧ್ರುವ ಸರ್ಜಾ, ‘ಮಾರ್ಟಿನ್’ ತಂಡ

Martin Movie: ಶ್ರೀನಗರದಿಂದ ದೆಹಲಿಗೆ ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್​’ ಚಿತ್ರತಂಡದವರು ಪ್ರಯಾಣ ಮಾಡುತ್ತಿದ್ದರು. ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಕ್ರ್ಯಾಶ್ ಆಗಬೇಕಿದ್ದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್​ ಆಗಿದ್ದು, ಚಿತ್ರತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ಧ್ರುವ ಸರ್ಜಾ ಮತ್ತು ಅವರ ತಂಡದವರು ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ತಿಳಿಸಿದ್ದಾರೆ.

Dhruva Sarja: ವಿಮಾನ ದುರಂತದಿಂದ ಪಾರಾದ ಧ್ರುವ ಸರ್ಜಾ, ‘ಮಾರ್ಟಿನ್’ ತಂಡ
ಧ್ರುವ ಸರ್ಜಾ ಜೊತೆ ‘ಮಾರ್ಟಿನ್​’ ಸಿನಿಮಾ ತಂಡ

Updated on: Feb 20, 2024 | 7:17 AM

ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ ಹಾಗೂ ಅವರ ‘ಮಾರ್ಟಿನ್​’ ಸಿನಿಮಾ (Martin Movie) ತಂಡದವರು ವಿಮಾನ ದುರಂತದಿಂದ (Plane Crash) ಪಾರಾಗಿದ್ದಾರೆ. ಚಿತ್ರತಂಡದವರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ವಿಷಯ ತಿಳಿಸಿದ್ದಾರೆ. ‘ಮಾರ್ಟಿನ್​’ ಸಿನಿಮಾದ ಶೂಟಿಂಗ್​ ಬಿರುಸಿನಿಂದ ಸಾಗುತ್ತಿವೆ. ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡದವರ ಜೊತೆ ಧ್ರುವ ಸರ್ಜಾ ಅವರು ಶ್ರೀನಗರಕ್ಕೆ ತೆರಳಿದ್ದರು. ಅಲ್ಲಿ ಶೂಟಿಂಗ್​ ಮುಗಿಸಿಕೊಂಡು ದೆಹಲಿಗೆ ವಾಪಸ್​ ಬರುವಾಗ ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡಿದೆ. ಆ ಸಂದರ್ಭದ ವಿಡಿಯೋವನ್ನು ಧ್ರುವ ಸರ್ಜಾ (Dhruva Sarja) ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್​​​ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗಿದೆ. ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್​’ ಚಿತ್ರತಂಡದವರು ವಿಡಿಯೋ ಮಾಡಿದ್ದಾರೆ. ‘ಇವತ್ತಿನ ರೀತಿ ಇಷ್ಟು ಕೆಟ್ಟ ಅನುಭವ ಇಡೀ ಜೀವನದಲ್ಲೇ ಆಗಿರಲಿಲ್ಲ. ಈಗ ನಾವು ಸೇಫ್​ ಆಗಿದ್ದೇವೆ. ಜೈ ಆಂಜನೇಯ. ಪೈಲಟ್​ಗೆ ಧನ್ಯವಾದ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

‘ಮೊದಲ ಬಾರಿ ಸಾವನ್ನು ಹತ್ತಿರದಿಂದ ನೋಡಿ ವಾಪಸ್​ ಬಂದಿದ್ದೇನೆ. ಚಿರು, ತಂದೆ-ತಾಯಿ ಹಾಗೂ ಅಭಿಮಾನಿಗಳು ಆಶೀರ್ವಾದದಿಂದ ಪಾರಾಗಿದ್ದೇನೆ. ಫ್ಲೈಟ್​ನಲ್ಲಿ ಇದ್ದ ಎಲ್ಲರೂ ಜೀವ ಉಳಿಸಿಕೊಳ್ಳಲು ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ನಾವು ಸೇಫ್​ ಆಗಿ ಲ್ಯಾಂಡ್​ ಆದಾಗ ಜನರು ಖುಷಿಯಿಂದ ಕೂಗಾಡಿದರು. ತಮ್ಮ ಪ್ರೀತಿಪಾತ್ರರಿಗೆ ಕರೆ ಮಾಡಿದರು. ಆನಂದ ಭಾಷ್ಪ ಸುರಿಸಿದರು. ಚೆನ್ನಾಗಿ ಬದುಕಲು ನಮಗೆ ಈ ಮರುಜನ್ಮ ಒಂದು ಕಾರಣವಾಗಿದೆ’ ಎಂದು ಧ್ರುವ ಸರ್ಜಾ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ದಯವಿಟ್ಟು ತಗಲಾಕ್ಕೋಬೇಡಿ’; ಇಬ್ಬರ ಮಧ್ಯೆ ದ್ವೇಷ ಬೆಳೆಸಲು ಬಂದವರಿಗೆ ಧ್ರುವ ಸರ್ಜಾ ವಾರ್ನಿಂಗ್

‘ಮಾರ್ಟಿನ್’ ಚಿತ್ರತಂಡದವರು ಸೇಫ್​ ಆಗಿದ್ದಾರೆ ಎಂಬುದು ತಿಳಿದು ಅಭಿಮಾನಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ. ‘ಸುರಕ್ಷಿತವಾಗಿ ಬನ್ನಿ ಅಣ್ಣ. ನಿಮಗಾಗಿ ಕಾಯುತ್ತಿದ್ದೇವೆ. ನಿಮ್ಮ ಜೊತೆ ದೇವರು ಇದ್ದಾನೆ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ‘ಮಾರ್ಟಿನ್​’ ಸಿನಿಮಾಗೆ ಎ.ಪಿ. ಅರ್ಜುನ್​ ನಿರ್ದೇಶನ ಮಾಡುತ್ತಿದ್ದಾರೆ. ಇಮ್ರಾನ್​ ಸರ್ದಾರಿಯಾ ಅವರು ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಅವರು ಕೂಡ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:57 am, Tue, 20 February 24

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us