AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್​’ ಬಗ್ಗೆ ಸಿಕ್ತು ಹೊಸ ಅಪ್​ಡೇಟ್​; ಫೆ.23ಕ್ಕೆ ಟೀಸರ್ ರಿಲೀಸ್

Martin Movie Teaser: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ಕಳೆದ ಸೆಪ್ಟೆಂಬರ್ 30ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಶೂಟಿಂಗ್ ವಿಳಂಬ ಆಗಿದ್ದರಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್​’ ಬಗ್ಗೆ ಸಿಕ್ತು ಹೊಸ ಅಪ್​ಡೇಟ್​; ಫೆ.23ಕ್ಕೆ ಟೀಸರ್ ರಿಲೀಸ್
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on:Feb 15, 2023 | 11:14 AM

Share

ಧ್ರುವ ಸರ್ಜಾ (Dhruva Sarja) ಅವರ ‘ಪೊಗರು’ ಸಿನಿಮಾ ತೆರೆಗೆ ಬಂದು ಎರಡು ವರ್ಷ ಕಳೆದಿದೆ. ಈ ಚಿತ್ರ ತೆರೆಗೆ ಬಂದ ಬಳಿಕ ಅವರು ‘ಮಾರ್ಟಿನ್​’ ಸಿನಿಮಾ (Martin Movie) ಒಪ್ಪಿಕೊಂಡರು. ಕಾರಣಾಂತರಗಳಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಿವೆ. ಎ.ಪಿ. ಅರ್ಜುನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಫೆಬ್ರವರಿ 23ಕ್ಕೆ ಚಿತ್ರದ ಟೀಸರ್ ರಿಲೀಸ್ ಆಗಲಿದೆ. ಈ ವಿಚಾರವನ್ನು ಚಿತ್ರತಂಡದವರು ಅಧಿಕೃತ ಮಾಡಿದ್ದಾರೆ.

‘ಮಾರ್ಟಿನ್’ ಚಿತ್ರವನ್ನು ವಾಸವಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಉದಯ್ ಕೆ.ಮೆಹ್ತಾ ನಿರ್ಮಾಣ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ಕಳೆದ ಸೆಪ್ಟೆಂಬರ್ 30ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಶೂಟಿಂಗ್ ವಿಳಂಬ ಆಗಿದ್ದರಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಈಗ ಟೀಸರ್ ರಿಲೀಸ್ ಆಗುತ್ತಿರುವ ವಿಚಾರ ತಿಳಿದು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಪೋಸ್ಟರ್ ಮೂಲಕ ಗಮನ ಸೆಳೆದಿರುವ ಈ ಸಿನಿಮಾ ಈಗ ಟೀಸರ್ ಮೂಲಕ ಸದ್ದು ಮಾಡಲು ರೆಡಿ ಆಗಿದೆ.

ಎ.ಪಿ. ಅರ್ಜುನ್ ಹಾಗೂ ಧ್ರುವ ಇಬ್ಬರೂ ‘ಅದ್ದೂರಿ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇಬ್ಬರೂ ಮತ್ತೊಮ್ಮೆ ಒಂದಾಗಿರುವುದಕ್ಕೆ ಸಾಕಷ್ಟು ನಿರೀಕ್ಷೆ ಇದೆ. ‘ಮಾರ್ಟಿನ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹೊಸ ರಿಲೀಸ್ ದಿನಾಂಕ ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ವೈಭವಿ ಶಾಂಡಿಲ್ಯ ಅವರು ‘ಮಾರ್ಟಿನ್​’ ಚಿತ್ರಕ್ಕೆ ನಾಯಕಿ ಆಗಿದ್ದಾರೆ.

ಡಿಕೆ ಬಗ್ಗೆ ನಿರೀಕ್ಷೆ

ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಅವರು ‘ಕೆಡಿ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇದ್ದಾರೆ. ಈ ಚಿತ್ರದ ಟೈಟಲ್ ಅನಾವರಣ ಅದ್ದೂರಿಯಾಗಿ ಆಗಿತ್ತು. ಈ ಚಿತ್ರದ ಶೂಟಿಂಗ್ ಕೆಲಸಗಳು ಭರದಿಂದ ಸಾಗುತ್ತಿವೆ. ‘ಮಾರ್ಟಿನ್’ ರಿಲೀಸ್ ಆದ ಬಳಿಕ ಅವರು ಸಂಪೂರ್ಣವಾಗಿ ‘ಕೆಡಿ’ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:14 am, Wed, 15 February 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ