Martin Collection: ‘ಮಾರ್ಟಿನ್’ ಸಿನಿಮಾ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಕಲೆಕ್ಷನ್ ವಿವರ

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಈ ಚಿತ್ರವನ್ನು ರಿಲೀಸ್ ಮಾಡಲಾಯಿತು. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಹಲವು ವರ್ಷಗಳು ಕಾದಿದ್ದರು. ಈಗ ಸಿನಿಮಾದ ಮೂರು ದಿನದ ಗಳಿಕೆ ವಿಚಾರದ ಬಗ್ಗೆ ಮಾಹಿತಿ ಸಿಕ್ಕಿದೆ.

Martin Collection: ‘ಮಾರ್ಟಿನ್’ ಸಿನಿಮಾ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಕಲೆಕ್ಷನ್ ವಿವರ
ಧ್ರುವ
Follow us
|

Updated on:Oct 14, 2024 | 7:22 AM

‘ಮಾರ್ಟಿನ್’ ಸಿನಿಮಾ ರಿಲೀಸ್ ಆಗಿ ಮೂರು ದಿನಗಳು ಕಳೆದಿವೆ. ಈ ಚಿತ್ರವನ್ನು ಅವರ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಗಳಿಕೆ ಬಗ್ಗೆ ಮಾಹಿತಿ ಸಿಕ್ಕಿದೆ. ದಸರಾ ಸಂದರ್ಭದಲ್ಲಿ ರಿಲೀಸ್ ಆದ ಈ ಚಿತ್ರ ಮೂರು ದಿನಗಳಲ್ಲಿ ಗಳಿಕೆ ಮಾಡಿದ್ದು ಎಷ್ಟು ಎಂಬ ಬಗ್ಗೆ ಮಾಹಿತಿ ರಿವೀಲ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಎಪಿ ಅರ್ಜುನ್ ಅವರು ‘ಮಾರ್ಟಿನ್’ ಚಿತ್ರವನ್ನು ನಿರ್ದೇಶನ ಮಾಡಿದರೆ, ಉದಯ್ ಮೆಹ್ತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಧ್ರುವ ಸರ್ಜಾ ವೃತ್ತಿ ಬದುಕಿನಲ್ಲೇ ಅತಿ ದೊಡ್ಡ ಬಜೆಟ್​ನ ಚಿತ್ರವಾಗಿದೆ. ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ ದಾಟಿದೆ ಎಂದು ವರದಿ ಆಗಿದೆ. ಈ ಚಿತ್ರದ ಕಲೆಕ್ಷನ್ ಬಗ್ಗೆ sacnilk ವರದಿ ಮಾಡಿದೆ.

Sacnilk ವರದಿ ಮಾಡಿರುವ ಪ್ರಕಾರ ‘ಮಾರ್ಟಿನ್’ ಸಿನಿಮಾ ಮೂರು ದಿನಗಳಲ್ಲಿ ಸುಮಾರು 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆಯಂತೆ. ಬಜೆಟ್​ಗೆ ಹೋಲಿಕೆ ಮಾಡಿದರೆ ಸಿನಿಮಾದ ಗಳಿಕ ಸ್ವಲ್ಪ ಕಡಿಮೆ ಆಯಿತು ಎಂದೇ ಹೇಳಬಹುದು. ಏಕೆಂದರೆ ಇದು ಕೇವಲ ಕನ್ನಡದ ಸಿನಿಮಾ ಮಾತ್ರವಲ್ಲ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಆಗಿದೆ. ಹೀಗಾಗಿ, ಇನ್ನೂ ಹೆಚ್ಚಿನ ಗಳಿಕೆ ಮಾಡೋ ಅಗತ್ಯತೆ ಚಿತ್ರಕ್ಕೆ ಇತ್ತು.

ಮೊದಲ ದಿನ (ಅಕ್ಟೋಬರ್ 11) ‘ಮಾರ್ಟಿನ್’ ಚಿತ್ರ 6.7 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರನಡೇ ದಿನ (ಅಕ್ಟೋಬರ್ 12) 5.5 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ ಸುಮಾರು ನಾಲ್ಕು ಕೋಟಿ ರೂಪಾಯಿ ಹರಿದು ಬಂದಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 16 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ‘ಮಾರ್ಟಿನ್’ ಸಿನಿಮಾ ಗಳಿಸಿದ್ದೆಷ್ಟು? ಹೇಗಿದೆ ಓಪನಿಂಗ್ ಡೇ ಕಲೆಕ್ಷನ್? ಇಲ್ಲಿದೆ ಲೆಕ್ಕಾಚಾರ

ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಕುರಿತು ತಂಡದವರು ಅಧಿಕೃತ ಮಾಹಿತಿ ನೀಡಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಸಿನಿಮಾ ಕೆಲವರು ತೆಗಳಿದರೆ, ಧ್ರುವ ಅಭಿಮಾನಿಗಳು ಹೊಗಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:20 am, Mon, 14 October 24

ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ