AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’

`ಧುರಂಧರ್ 2` ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದ್ದರೂ, ಪ್ರಚಾರದ ಕೊರತೆಯಿಂದ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. `ಬಾಹುಬಲಿ 2`, `ಕೆಜಿಎಫ್ 2` ಯಶಸ್ಸಿನ ಸೀಕ್ವೆಲ್‌ಗಳ ಸಾಲಿನಲ್ಲಿ ಈ ಚಿತ್ರವೂ ಸೇರಬೇಕಿದೆ. `ಟಾಕ್ಸಿಕ್` ಚಿತ್ರದ ಭಾರಿ ಪ್ರಚಾರದ ಎದುರು, `ಧುರಂಧರ್ 2` ತಂಡ ಖಡಕ್ ಆಗಿ ನಿಲ್ಲಬೇಕಿದೆ.

‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’
ಯಶ್-ರಣವೀರ್
ರಾಜೇಶ್ ದುಗ್ಗುಮನೆ
|

Updated on: Mar 02, 2026 | 12:24 PM

Share

ಒಂದು ಸಿನಿಮಾ ಹಿಟ್ ಆಗಿ ಅದಕ್ಕೆ ಸೀಕ್ವೆಲ್ ಬರ್ತಿದೆ ಎಂದರೆ ಆ ಚಿತ್ರ ಹಿಟ್ ಆಗೋದು ಬಹುತೇಕ ಖಚಿತ ಎಂಬ ವಾತಾವರಣ ನಿರ್ಮಾಣ ಆಗಿದೆ. ‘ಬಾಹುಬಲಿ 2’, ‘ಕೆಜಿಎಫ್ 2’, ‘ಪುಷ್ಪ 2’ ಚಿತ್ರಗಳ ಮೂಲಕ ಇದು ಸಾಬೀತಾಗಿದೆ. ಈಗ ಮಾರ್ಚ್ 19ಕ್ಕೆ ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ಪ್ರಚಾರ ಆರಂಭ ಆಗಿಲ್ಲ. ಇದು ರಣವೀರ್ ಸಿಂಗ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಯಶ್ ಎದುರು ಬರಲು ಸಾಕಷ್ಟು ಸಿದ್ಧತೆ ಬೇಕು. ಆದರೆ, ಆ ಸಿದ್ಧತೆ ತಂಡದ ಕಡೆಯಿಂದ ಆಗುತ್ತಿಲ್ಲ ಎಂಬ ಕೊರಗು ಅಭಿಮಾನಿಗಳಿಗೆ ಇದೆ. ಹೀಗಿರುವಾಗಲೇ ಸಡನ್ ಶಾಕ್ ನೀಡಲು ‘ಧುರಂಧರ್ 2’ ತಂಡ ಪ್ಲ್ಯಾನ್ ಮಾಡಿದೆಯಂತೆ.

ಯಾವುದೇ ವಿಷಯವನ್ನು ಘೋಷಣೆ ಮಾಡಿ ರಿಲೀಸ್ ಮಾಡಿದರೆ ಅದಕ್ಕೆ ಹೈಪ್ ಸಿಗೋ ಸಾಧ್ಯತೆ ಕಡಿಮೆ. ಆದರೆ, ಯಾವುದೇ ಘೋಷಣೆ ಇಲ್ಲದೆ ಬಂದರೆ ಅದಕ್ಕೆ ಸಿಗೋ ಹೈಪ್ ಹೆಚ್ಚು. ಹೀಗಾಗಿ, ಹೋಳಿ ಹಬ್ಬದ ಪ್ರಯುಕ್ತ ಫೆಬ್ರವರಿ 3ರಂದು ‘ಧುರಂಧರ್ 2’ ಟ್ರೇಲರ್ ಲಾಂಚ್ ಮಾಡಲು ಪ್ಲ್ಯಾನ್ ರೂಪಿಸಲಾಗಿದೆಯಂತೆ. ಈ ಮೂಲಕ ಹಲ್ಚಲ್ ಎಬ್ಬಿಸಲು ಯೋಜನೆ ರೆಡಿ ಆಗಿದೆ.

‘ಟಾಕ್ಸಿಕ್’ ತಂಡ ನಿರಂತರವಾಗಿ ಸಿನಿಮಾ ಪ್ರಚಾರ ಮಾಡುತ್ತಿದೆ. ದಿನಕ್ಕೊಂದು ಅಪ್​​ಡೇಟ್ ಕೊಡುವ ಮೂಲಕ ಕುತೂಹಲ ಮೂಡಿಸುತ್ತಿದೆ. ಆದರೆ, ‘ಧುರಂಧರ್ 2’ ಟೀಂ ಆ ರೀತಿ ಅಲ್ಲ. ಈ ಮೊದಲು ‘ಧುರಂದರ್ 2’ ತಂಡದವರು ಟೀಸರ್ ರಿಲೀಸ್ ಮಾಡಿದ್ದರು. ಅದು ಮೊದಲ ಪಾರ್ಟ್​​ನ ಕೊನೆಯಲ್ಲಿ ಬರುವ ದೃಶ್ಯಗಳೇ ಇದ್ದವು. ಹೀಗಾಗಿ ಈ ಟೀಸರ್ ಗಮನ ಸೆಳೆಯುವಲ್ಲಿ ವಿಫಲವಾಗಿತ್ತು. ಈ ಕಾರಣದಿಂದ ಈಗ ಟ್ರೇಲರ್ ರಿಲೀಸ್ ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ‘ಧುರಂದರ್ 2’ ತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಇದನ್ನೂ ಓದಿ: ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ?

‘ಟಾಕ್ಸಿಕ್’ ವಿರುದ್ಧ ಗೆಲ್ಲಬೇಕು ಎಂದರೆ ಅದು ಸುಲಭದಲ್ಲಿ ಇಲ್ಲ. ಯಶ್ ಅವರು ಏನೇ ಪ್ಲ್ಯಾನ್ ಮಾಡಿದರೂ ದೊಡ್ಡ ಮಟ್ಟದಲ್ಲಿ ಆಲೋಚಿಸಿರುತ್ತಾರೆ. ಎದುರಾಳಿಯ ಪ್ಲ್ಯಾನ್ ಏನು ಎಂಬುದನ್ನು ತಿಳಿದೇ ‘ಟಾಕ್ಸಿಕ್’ ರಿಲೀಸ್ ಮಾಡಲು ಅವರು ಮುಂದೆ ಬಂದಿದ್ದಾರೆ. ದಕ್ಷಿಣ ಭಾರತದ ಜೊತೆಗೆ ಬಾಲಿವುಡ್​​​ನಲ್ಲೂ ಸಿನಿಮಾ ಅಬ್ಬರಿಸೋದು ಫಿಕ್ಸ್ ಆಗಿದೆ. ಹೀಗಾಗಿ,ಈ ಚಿತ್ರದ ಎದುರು ಅಬ್ಬರಿಸಲು ‘ಧುರಂಧರ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಪ್ಲ್ಯಾನ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ