AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿಯಾ’ ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ?

ಕೆಲವೇ ದಿನಗಳ ಹಿಂದೆ ‘ಆಣಿ ಮುತ್ತಗಳು’ ಸಿನಿಮಾದ ಪೋಸ್ಟರ್​ ಬಿಡುಗಡೆ ಆಗಿತ್ತು. ಈ ಚಿತ್ರದಲ್ಲಿ ದೀಕ್ಷಿತ್​ ಶೆಟ್ಟಿ ಅವರು ಮೂಗನ ಪಾತ್ರ ಮಾಡಿದ್ದಾರೆ ಎಂಬ ವಿಷಯ ಬಹಿರಂಗ ಆಗಿತ್ತು.

‘ದಿಯಾ’ ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ?
ನಟ ದೀಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
| Edited By: |

Updated on: Jun 01, 2021 | 2:56 PM

Share

ಸಸ್ಪೆನ್ಸ್​ ಮತ್ತು ರೊಮ್ಯಾಂಟಿಕ್​ ಲವ್​ಸ್ಟೋರಿ ಹೊಂದಿದ್ದ ದಿಯಾ ಸಿನಿಮಾ 2020 ಆರಂಭದಲ್ಲಿ ಸೂಪರ್​ ಹಿಟ್​ ಆಯಿತು. ಆ ಚಿತ್ರದ ಮೂಲಕ ನಟ ದೀಕ್ಷಿತ್​ ಶೆಟ್ಟಿ ಅವರಿಗೆ ಸಿಕ್ಕಾಪಟ್ಟೆ ಜನಪ್ರಿಯತೆ ಕೂಡ ಸಿಕ್ಕಿತು. ಲವರ್​ ಬಾಯ್​ ಆಗಿ ಎಲ್ಲರಿಗೂ ಇಷ್ಟವಾಗಿದ್ದ ಅವರು ಈಗ ಹೊಸ ಸಿನಿಮಾದಲ್ಲಿ ಒಂದು ಕ್ರೈಂ ಕಥೆ ಹೇಳಲು ಬರುತ್ತಿದ್ದಾರೆ. ಅವರು ನಟಿಸಿರುವ ‘ಆಣಿ ಮುತ್ತುಗಳು’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದ್ದು, ಈ ಸಿನಿಮಾದ ಕಥೆಯ ಬಗ್ಗೆ ಸುಳಿವು ಸಿಕ್ಕಿದೆ.

ಕೆಲವೇ ದಿನಗಳ ಹಿಂದೆ ‘ಆಣಿ ಮುತ್ತಗಳು’ ಸಿನಿಮಾದ ಪೋಸ್ಟರ್​ ಬಿಡುಗಡೆ ಆಗಿತ್ತು. ಈ ಚಿತ್ರದಲ್ಲಿ ದೀಕ್ಷಿತ್​ ಶೆಟ್ಟಿ ಅವರು ಮೂಗನ ಪಾತ್ರ ಮಾಡಿದ್ದಾರೆ ಎಂಬ ವಿಷಯ ಬಹಿರಂಗ ಆಗಿತ್ತು. ಈಗ ಟ್ರೇಲರ್​ ರಿಲೀಸ್​ ಆಗಿದ್ದು, ಚಿತ್ರದ ಬಗ್ಗೆ ಇನ್ನಷ್ಟು ಕೌತುಕ ಮೂಡುವಂತಾಗಿದೆ. ಮೇಲ್ನೋಟಕ್ಕೆ ಇದು ಒಂದು ಕಾಮಿಡಿ ಸಿನಿಮಾದಂತೆ ಕಂಡರೂ ಅದರ ಒಳಗೆ ಒಂದು ಕ್ರೈಂ ಕಥೆಯನ್ನು ಹೇಳಲು ನಿರ್ದೇಶಕರು ಪ್ರಯತ್ನಿಸಿದ್ದಾರೆ ಎಂಬುದು ಗೊತ್ತಾಗಿದೆ.

‘ಆಣಿ ಮುತ್ತುಗಳು’ ಚಿತ್ರಕ್ಕೆ ಅಭಿಲಾಷ್​ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ದಿಯಾ ರೀತಿಯ ರೊಮ್ಯಾಂಟಿಕ್​ ಸಿನಿಮಾದಲ್ಲಿ ನಟಿಸಿದ್ದ ದೀಕ್ಷಿತ್​ ಶೆಟ್ಟಿ ಈಗ ‘ಆಣಿ ಮುತ್ತುಗಳು’ ಚಿತ್ರದಲ್ಲಿ ಜನರನ್ನು ನಗಿಸಲು ಪ್ರಯತ್ನಿಸಿದ್ದಾರೆ. ಅವರ ಜೊತೆಗೆ ಶ್ರೀನಿವಾಸ್​ ರೆಡ್ಡಿ ಹಾಗೂ ವೆನ್ನಲ ರಾಮ್​ರಾವ್​ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಿವಾಸ್​ ರೆಡ್ಡಿಗೆ ಕಿವುಡನ ಪಾತ್ರ ಹಾಗೂ ವೆನ್ನಲ ರಾಮ್​ರಾವ್​ ಅವರಿಗೆ ಕುರುಡನ ಪಾತ್ರ ನೀಡಲಾಗಿದೆ. ಟ್ರೇಲರ್​ನಲ್ಲಿ ಅವರಿಬ್ಬರ ನಟನೆ ಕೂಡ ಗಮನ ಸೆಳೆಯುತ್ತಿದೆ.

ಈ ಸಿನಿಮಾದಲ್ಲಿ ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ ಮತ್ತು ತೆಲುಗಿನಲ್ಲಿ ‘ಆಣಿ ಮುತ್ತುಗಳು’ ತಯಾರಾಗಿದೆ. ‘ಚಿತ್ರಮಂದಿರ ಸ್ಟುಡಿಯೋ’ ಬ್ಯಾನರ್​ನಲ್ಲಿ ಅಚ್ಯುತ್​ ರಾಮರಾವ್​ ಅವರು ನಿರ್ಮಾಣ ಮಾಡಿದ್ದಾರೆ. ತೇಜಾ ಚೀಪುರುಪಲ್ಲಿ ಹಾಗೂ ರವೀಂದ್ರ ರೆಡ್ಡಿ ಅಬ್ದುಲ್ಲಾ ಕೂಡ ಬಂಡವಾಳ ಹೂಡಿದ್ದಾರೆ. ಗರುಡವೇಗ ಅಂಜಿ ಛಾಯಾಗ್ರಹಣ, ಸುರೇಶ್​ ಬೊಬ್ಬಿಲಿ ಸಂಗೀತ ನಿರ್ದೇಶನ ಮಾಡಿದ್ದಾರೆ.

(ಆಣಿ ಮುತ್ತುಗಳು ಸಿನಿಮಾ ಟ್ರೇಲರ್​)

ಇದನ್ನೂ ಓದಿ:

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?