‘ದಿಯಾ’ ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ?

ಕೆಲವೇ ದಿನಗಳ ಹಿಂದೆ ‘ಆಣಿ ಮುತ್ತಗಳು’ ಸಿನಿಮಾದ ಪೋಸ್ಟರ್​ ಬಿಡುಗಡೆ ಆಗಿತ್ತು. ಈ ಚಿತ್ರದಲ್ಲಿ ದೀಕ್ಷಿತ್​ ಶೆಟ್ಟಿ ಅವರು ಮೂಗನ ಪಾತ್ರ ಮಾಡಿದ್ದಾರೆ ಎಂಬ ವಿಷಯ ಬಹಿರಂಗ ಆಗಿತ್ತು.

‘ದಿಯಾ’ ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ?
ನಟ ದೀಕ್ಷಿತ್​ ಶೆಟ್ಟಿ
Edited By:

Updated on: Jun 01, 2021 | 2:56 PM

ಸಸ್ಪೆನ್ಸ್​ ಮತ್ತು ರೊಮ್ಯಾಂಟಿಕ್​ ಲವ್​ಸ್ಟೋರಿ ಹೊಂದಿದ್ದ ದಿಯಾ ಸಿನಿಮಾ 2020 ಆರಂಭದಲ್ಲಿ ಸೂಪರ್​ ಹಿಟ್​ ಆಯಿತು. ಆ ಚಿತ್ರದ ಮೂಲಕ ನಟ ದೀಕ್ಷಿತ್​ ಶೆಟ್ಟಿ ಅವರಿಗೆ ಸಿಕ್ಕಾಪಟ್ಟೆ ಜನಪ್ರಿಯತೆ ಕೂಡ ಸಿಕ್ಕಿತು. ಲವರ್​ ಬಾಯ್​ ಆಗಿ ಎಲ್ಲರಿಗೂ ಇಷ್ಟವಾಗಿದ್ದ ಅವರು ಈಗ ಹೊಸ ಸಿನಿಮಾದಲ್ಲಿ ಒಂದು ಕ್ರೈಂ ಕಥೆ ಹೇಳಲು ಬರುತ್ತಿದ್ದಾರೆ. ಅವರು ನಟಿಸಿರುವ ‘ಆಣಿ ಮುತ್ತುಗಳು’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದ್ದು, ಈ ಸಿನಿಮಾದ ಕಥೆಯ ಬಗ್ಗೆ ಸುಳಿವು ಸಿಕ್ಕಿದೆ.

ಕೆಲವೇ ದಿನಗಳ ಹಿಂದೆ ‘ಆಣಿ ಮುತ್ತಗಳು’ ಸಿನಿಮಾದ ಪೋಸ್ಟರ್​ ಬಿಡುಗಡೆ ಆಗಿತ್ತು. ಈ ಚಿತ್ರದಲ್ಲಿ ದೀಕ್ಷಿತ್​ ಶೆಟ್ಟಿ ಅವರು ಮೂಗನ ಪಾತ್ರ ಮಾಡಿದ್ದಾರೆ ಎಂಬ ವಿಷಯ ಬಹಿರಂಗ ಆಗಿತ್ತು. ಈಗ ಟ್ರೇಲರ್​ ರಿಲೀಸ್​ ಆಗಿದ್ದು, ಚಿತ್ರದ ಬಗ್ಗೆ ಇನ್ನಷ್ಟು ಕೌತುಕ ಮೂಡುವಂತಾಗಿದೆ. ಮೇಲ್ನೋಟಕ್ಕೆ ಇದು ಒಂದು ಕಾಮಿಡಿ ಸಿನಿಮಾದಂತೆ ಕಂಡರೂ ಅದರ ಒಳಗೆ ಒಂದು ಕ್ರೈಂ ಕಥೆಯನ್ನು ಹೇಳಲು ನಿರ್ದೇಶಕರು ಪ್ರಯತ್ನಿಸಿದ್ದಾರೆ ಎಂಬುದು ಗೊತ್ತಾಗಿದೆ.

‘ಆಣಿ ಮುತ್ತುಗಳು’ ಚಿತ್ರಕ್ಕೆ ಅಭಿಲಾಷ್​ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ದಿಯಾ ರೀತಿಯ ರೊಮ್ಯಾಂಟಿಕ್​ ಸಿನಿಮಾದಲ್ಲಿ ನಟಿಸಿದ್ದ ದೀಕ್ಷಿತ್​ ಶೆಟ್ಟಿ ಈಗ ‘ಆಣಿ ಮುತ್ತುಗಳು’ ಚಿತ್ರದಲ್ಲಿ ಜನರನ್ನು ನಗಿಸಲು ಪ್ರಯತ್ನಿಸಿದ್ದಾರೆ. ಅವರ ಜೊತೆಗೆ ಶ್ರೀನಿವಾಸ್​ ರೆಡ್ಡಿ ಹಾಗೂ ವೆನ್ನಲ ರಾಮ್​ರಾವ್​ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಿವಾಸ್​ ರೆಡ್ಡಿಗೆ ಕಿವುಡನ ಪಾತ್ರ ಹಾಗೂ ವೆನ್ನಲ ರಾಮ್​ರಾವ್​ ಅವರಿಗೆ ಕುರುಡನ ಪಾತ್ರ ನೀಡಲಾಗಿದೆ. ಟ್ರೇಲರ್​ನಲ್ಲಿ ಅವರಿಬ್ಬರ ನಟನೆ ಕೂಡ ಗಮನ ಸೆಳೆಯುತ್ತಿದೆ.

ಈ ಸಿನಿಮಾದಲ್ಲಿ ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ ಮತ್ತು ತೆಲುಗಿನಲ್ಲಿ ‘ಆಣಿ ಮುತ್ತುಗಳು’ ತಯಾರಾಗಿದೆ. ‘ಚಿತ್ರಮಂದಿರ ಸ್ಟುಡಿಯೋ’ ಬ್ಯಾನರ್​ನಲ್ಲಿ ಅಚ್ಯುತ್​ ರಾಮರಾವ್​ ಅವರು ನಿರ್ಮಾಣ ಮಾಡಿದ್ದಾರೆ. ತೇಜಾ ಚೀಪುರುಪಲ್ಲಿ ಹಾಗೂ ರವೀಂದ್ರ ರೆಡ್ಡಿ ಅಬ್ದುಲ್ಲಾ ಕೂಡ ಬಂಡವಾಳ ಹೂಡಿದ್ದಾರೆ. ಗರುಡವೇಗ ಅಂಜಿ ಛಾಯಾಗ್ರಹಣ, ಸುರೇಶ್​ ಬೊಬ್ಬಿಲಿ ಸಂಗೀತ ನಿರ್ದೇಶನ ಮಾಡಿದ್ದಾರೆ.

(ಆಣಿ ಮುತ್ತುಗಳು ಸಿನಿಮಾ ಟ್ರೇಲರ್​)

ಇದನ್ನೂ ಓದಿ:

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us