AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​

ಪೃಥ್ವಿ ಅಂಬಾರ್​ ಅವರು ‘ದಿಯಾ’ ಬಳಿಕ ಮತ್ತೆ ಪ್ರೇಮ್​ ಕಹಾನಿ ಇರುವ ಒಂದು ರೊಮ್ಯಾಂಟಿಕ್ ಚಿತ್ರದಲ್ಲಿ ನಟಿಸಿದ್ದಾರೆ. ‘ಜೂನಿ’ ಎಂಬುದು ಈ ಸಿನಿಮಾದ ಶೀರ್ಷಿಕೆ. ವೈಭವ್ ಮಹಾದೇವ್ ನಿರ್ದೇಶನ ಮಾಡಿದ್ದಾರೆ. ಪೃಥ್ವಿ ಅಂಬಾರ್​ ಜೊತೆ ರಿಷಿಕಾ ನಾಯಕ್ ತೆರೆ ಹಂಚಿಕೊಂಡಿದ್ದಾರೆ. 2024ರ ಜನವರಿಯಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ.

‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​
ಜೂನಿ ಸಿನಿಮಾ ಫಸ್ಟ್​ ಲುಕ್​
ಮದನ್​ ಕುಮಾರ್​
|

Updated on: Nov 29, 2023 | 12:25 PM

Share

ನಟ ಪೃಥ್ವಿ ಅಂಬಾರ್​ (Pruthvi Ambaar) ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. 2020ರಲ್ಲಿ ‘ದಿಯಾ’ ಸಿನಿಮಾ ಮೂಲಕ ಅವರಿಗೆ ಸಿಕ್ಕ ಜನಪ್ರಿಯತೆ ಅಪಾರ. ತ್ರಿಕೋನ ಪ್ರೇಮಕಥೆ ಹೊಂದಿದ್ದ ಆ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಪೃಥ್ವಿ ಅಂಬಾರ್​ ಅವರಿಗೆ ಸಾಲು ಸಾಲು ಅವಕಾಶಗಳು ಹರಿದುಬರಲು ಆರಂಭ ಆದವು. ಪರಭಾಷೆಯಲ್ಲೂ ಅವರಿಗೆ ಚಾನ್ಸ್​ ಸಿಗುತ್ತಿದೆ. ಕನ್ನಡದಲ್ಲಿ ಹೊಸ ಹೊಸ ತಂಡಗಳ ಜೊತೆ ಪೃಥ್ವಿ ಅಂಬಾರ್​ ಸಿನಿಮಾ (Pruthvi Ambaar Movies) ಮಾಡುತ್ತಿದ್ದಾರೆ. ಈಗ ಅವರು ಇನ್ನೊಂದು ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾಗೆ ‘ಜೂನಿ’ (Juny) ಎಂದು ಟೈಟಲ್​ ಇಡಲಾಗಿದೆ.

ಪೃಥ್ವಿ ಅಂಬಾರ್ ಅಭಿನಯಿಸಿರುವ ‘ಜೂನಿ’ ಸಿನಿಮಾಗೆ ಯುವ ಪ್ರತಿಭೆ ವೈಭವ್ ಮಹಾದೇವ್ ಅವರು ನಿರ್ದೇಶನ ಮಾಡಿದ್ದಾರೆ. ಮುಖ್ಯ ಭೂಮಿಕೆ ನಿಭಾಯಿಸಿರುವ ಪೃಥ್ವಿಗೆ ರಿಷಿಕಾ ನಾಯಕ್ ಅವರು ಜೋಡಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಡಿಫರೆಂಟ್​ ಆಗಿರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ಸಿನಿಮಾದ ಶೀರ್ಷಿಕೆ ಭಿನ್ನವಾಗಿದೆ. ಶೀರ್ಷಿಕೆಯ ಅರ್ಥ ಏನು ಎಂದು ತಿಳಿಯಲು ಸಿನಿಪ್ರಿಯರಲ್ಲಿ ಕುತೂಹಲ ಮೂಡಿದೆ.

ಇದನ್ನೂ ಓದಿ: ವಿಷ್ಣುವರ್ಧನ್‌ ಅಭಿಮಾನಿಗಳಿಂದ ಡಿಸೆಂಬರ್‌ 17ಕ್ಕೆ ನಡೆಯಲಿದೆ ಬೃಹತ್‌ ಪ್ರತಿಭಟನೆ; ಕಾರಣ ಏನು?

ಈ ಮೊದಲು ‘ಜನ್ನಿ’ ಎಂಬ ಕಿರುಚಿತ್ರವನ್ನು ವೈಭವ್ ಮಹಾದೇವ್ ನಿರ್ದೇಶಿಸಿದ್ದರು. ಈಗ ‘ಜೂನಿ’ ಸಿನಿಮಾಗೆ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ. ಪ್ರಾಗ್ ಫಿಲ್ಮ್ ಸ್ಕೂಲ್​ನಲ್ಲಿ ನಿರ್ದೇಶನದ ಕೋರ್ಸ್ ಮುಗಿಸಿ ಬಂದಿರುವ ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ‘ಜೂನಿ’ ತಂಡದಿಂದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಶೀಘ್ರದಲ್ಲೇ ಟೀಸರ್, ಟ್ರೇಲರ್ ಮತ್ತು ಹಾಡುಗಳು ಕೂಡ ರಿಲೀಸ್​ ಆಗಲಿವೆ.

ಇದನ್ನೂ ಓದಿ: ತೆಲುಗು ಯುವನಟನ ‘ಹರೋಮ್ ಹರ’ ಸಿನಿಮಾ ಟೀಸರ್ ರಿಲೀಸ್ ಮಾಡಲಿರುವ ಸುದೀಪ್

ಒಂದು ರೊಮ್ಯಾಂಟಿಕ್ ಕಥೆಯನ್ನು ‘ಜೂನಿ’ ಸಿನಿಮಾ ಹೊಂದಿರಲಿದೆ. ‘ದಿಯಾ’ ಬಳಿಕ ಮತ್ತೊಮ್ಮೆ ಲವ್​ ಸ್ಟೋರಿ ಸಿನಿಮಾದಲ್ಲಿ ಪೃಥ್ವಿ ನಟಿಸಿರುವುದು ವಿಶೇಷ. ‘ತ್ರಿಶೂಲ ಕ್ರಿಯೇಷನ್’ ಮೂಲಕ ಮೋಹನ್ ಕುಮಾರ್ ಎಸ್. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶ್ರೇಯಸ್ ವೈ.ಎಸ್. ಅವರು ಸಹ-ನಿರ್ಮಾಪಕರಾಗಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮುಗಿಸಿರುವ ‘ಜೂನಿ’ ಚಿತ್ರತಂಡ 2024ರ ಜನವರಿಯಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುಲು ತಯಾರಿ ನಡೆಸುತ್ತಿದೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ನಾರಾಯಣ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ ಮಾಡಿದ್ದಾರೆ. ನವೀನ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು