AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?

ಕೊವಿಡ್ ಕಾರಣದಿಂದ ಸಾಕಷ್ಟು ಸಿನಿಮಾಗಳ ಶೂಟಿಂಗ್​ ವಿಳಂಬವಾಗುತ್ತಿದೆ. ಅಷ್ಟೇ ಅಲ್ಲ, ಸಿನಿಮಾ ಬಿಡುಗಡೆ ಕೂಡ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರವೇ ಚಿತ್ರಗಳು ರಿಲೀಸ್​ ಆಗಲಿವೆ.

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?
ಪೃಥ್ವಿ ಅಂಬರ್​-ಖುಷಿ ರವಿ
ರಾಜೇಶ್ ದುಗ್ಗುಮನೆ
|

Updated on: May 20, 2021 | 6:42 PM

Share

2020ರಲ್ಲಿ ರಿಲೀಸ್​ ಆಗಿದ್ದ ದಿಯಾ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ದುರಂತ ಪ್ರೇಮಕಥೆ ಪ್ರೇಕ್ಷಕರ ಕಣ್ಣಲ್ಲಿ ನೀರು ತರಿಸಿತ್ತು. ಪೃಥ್ವಿ ಅಂಬರ್, ಖುಷಿ ರವಿ ಮತ್ತು ದೀಕ್ಷಿತ್​ ಶೆಟ್ಟಿ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಸಿಕೊಂಡಿದ್ದರು. ಈಗ ಪೃಥ್ವಿ-ಖುಷಿ ಮತ್ತೆ ತೆರೆಮೇಲೆ ಒಂದಾಗಲಿದ್ದಾರೆ. ಸಿನಿಮಾ ಕಥೆ ಕೂಡ ರೆಡಿ ಇದ್ದು, ಶೂಟಿಂಗ್​ ಆರಂಭವಾಗುವುದೊಂದೇ ಬಾಕಿ ಇದೆ.

ಪೃಥ್ವಿ ಅಂಬರ್ ಕೊವಿಡ್​ ಲಾಕ್​ಡೌನಿಂದ್​ ತಮ್ಮ ಹುಟ್ಟೂರಾದ ಕಾಸರಗೋಡು ಸೇರಿದ್ದಾರೆ. ಅಲ್ಲಿದ್ದುಕೊಂಡೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ವಿಶೇಷ ಎಂದರೆ, ಅವರು ಸಿನಿಮಾ ಒಂದಕ್ಕೆ ಕಥೆ ಹಾಗೂ ಸ್ಕ್ರಿಪ್ಟ್​ ಬರೆದಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿ ಹಾಗೂ ಖುಷಿ ನಟಿಸುತ್ತಿದ್ದಾರೆ.

ಸಿನಿಮಾ ಹೇಗಿದೆ, ಯಾವ ಹಂತದಲ್ಲಿದೆ? ಎನ್ನುವ ಬಗ್ಗೆ ಪೃಥ್ವಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಸ್ಕ್ರಿಪ್ಟ್​ ಕೆಲಸ ಮಾಡಿದ ಒಂದು ಪ್ರಾಜೆಕ್ಟ್​ ಶೂಟ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ನಾನು ಮತ್ತು ಖುಷಿ ನಟಿಸುತ್ತಿದ್ದೇವೆ. ಇದೊಂದು ಲವ್​ ಸ್ಟೋರಿ. ದಿಯಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ದರ್ಶನ್​ ಅಪೂರ್ವ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ ಎಂದು ಪೃಥ್ವಿ ಮಾಹಿತಿ ನೀಡಿದ್ದಾರೆ.

ಜೂನ್​ನಲ್ಲಿ ಸಿನಿಮಾ ಶೂಟಿಂಗ್​ ಮಾಡಬೇಕು ಎನ್ನುವುದು ಚಿತ್ರತಂಡದ ಪ್ಲ್ಯಾನ್​ ಆಗಿತ್ತು. ಆದರೆ, ಕೊರೊನಾ ಸಂಖ್ಯೆ ಹೆಚ್ಚಿದೆ. ಹೀಗಾಗಿ, ಲಾಕ್​ಡೌನ್​ ಕೂಡ ಘೋಷಣೆ ಮಾಡಲಾಗಿದೆ. ಹೀಗಾಗಿ ಸಿನಿಮಾ ಶೂಟಿಂಗ್​ ಮುಂದೂಡಲ್ಪಟ್ಟಿದೆ. ದುಬೈನಲ್ಲಿ ನೆಲೆಸಿರುವ ಪೂರ್ಣಿಮಾ ರಾಜೀವ್​ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಫ್ರೆಂಡ್ಸ್​ ಜತೆ ಸೇರಿ ಹಾರರ್​ ಸಿನಿಮಾ ಮಾಡ್ತಾ ಇದೀನಿ. ಇದರ ಕೆಲಸ ಕೂಡ ಶುರುವಾಗಬೇಕಿದೆ.  ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’ ಚಿತ್ರದ​ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ನಡೆಯುತ್ತಿದೆ ಎಂದು ಪೃಥ್ವಿ ಅಂಬರ್ ಮಾಹಿತಿ ನೀಡಿದ್ದಾರೆ.

ಕೊವಿಡ್ ಕಾರಣದಿಂದ ಸಾಕಷ್ಟು ಸಿನಿಮಾಗಳ ಶೂಟಿಂಗ್​ ವಿಳಂಬವಾಗುತ್ತಿದೆ. ಅಷ್ಟೇ ಅಲ್ಲ, ಸಿನಿಮಾ ಬಿಡುಗಡೆ ಕೂಡ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರವೇ ಚಿತ್ರಗಳು ರಿಲೀಸ್​ ಆಗಲಿವೆ.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಅನುಷ್ಕಾ ಶರ್ಮಾ ನಟಿಸಿರುವ ಯಾವ ಸಿನಿಮಾ ಫೆವರೆಟ್ ಗೊತ್ತಾ?

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು