AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?

ಕೊವಿಡ್ ಕಾರಣದಿಂದ ಸಾಕಷ್ಟು ಸಿನಿಮಾಗಳ ಶೂಟಿಂಗ್​ ವಿಳಂಬವಾಗುತ್ತಿದೆ. ಅಷ್ಟೇ ಅಲ್ಲ, ಸಿನಿಮಾ ಬಿಡುಗಡೆ ಕೂಡ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರವೇ ಚಿತ್ರಗಳು ರಿಲೀಸ್​ ಆಗಲಿವೆ.

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?
ಪೃಥ್ವಿ ಅಂಬರ್​-ಖುಷಿ ರವಿ
ರಾಜೇಶ್ ದುಗ್ಗುಮನೆ
|

Updated on: May 20, 2021 | 6:42 PM

Share

2020ರಲ್ಲಿ ರಿಲೀಸ್​ ಆಗಿದ್ದ ದಿಯಾ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ದುರಂತ ಪ್ರೇಮಕಥೆ ಪ್ರೇಕ್ಷಕರ ಕಣ್ಣಲ್ಲಿ ನೀರು ತರಿಸಿತ್ತು. ಪೃಥ್ವಿ ಅಂಬರ್, ಖುಷಿ ರವಿ ಮತ್ತು ದೀಕ್ಷಿತ್​ ಶೆಟ್ಟಿ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಸಿಕೊಂಡಿದ್ದರು. ಈಗ ಪೃಥ್ವಿ-ಖುಷಿ ಮತ್ತೆ ತೆರೆಮೇಲೆ ಒಂದಾಗಲಿದ್ದಾರೆ. ಸಿನಿಮಾ ಕಥೆ ಕೂಡ ರೆಡಿ ಇದ್ದು, ಶೂಟಿಂಗ್​ ಆರಂಭವಾಗುವುದೊಂದೇ ಬಾಕಿ ಇದೆ.

ಪೃಥ್ವಿ ಅಂಬರ್ ಕೊವಿಡ್​ ಲಾಕ್​ಡೌನಿಂದ್​ ತಮ್ಮ ಹುಟ್ಟೂರಾದ ಕಾಸರಗೋಡು ಸೇರಿದ್ದಾರೆ. ಅಲ್ಲಿದ್ದುಕೊಂಡೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ವಿಶೇಷ ಎಂದರೆ, ಅವರು ಸಿನಿಮಾ ಒಂದಕ್ಕೆ ಕಥೆ ಹಾಗೂ ಸ್ಕ್ರಿಪ್ಟ್​ ಬರೆದಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿ ಹಾಗೂ ಖುಷಿ ನಟಿಸುತ್ತಿದ್ದಾರೆ.

ಸಿನಿಮಾ ಹೇಗಿದೆ, ಯಾವ ಹಂತದಲ್ಲಿದೆ? ಎನ್ನುವ ಬಗ್ಗೆ ಪೃಥ್ವಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಸ್ಕ್ರಿಪ್ಟ್​ ಕೆಲಸ ಮಾಡಿದ ಒಂದು ಪ್ರಾಜೆಕ್ಟ್​ ಶೂಟ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ನಾನು ಮತ್ತು ಖುಷಿ ನಟಿಸುತ್ತಿದ್ದೇವೆ. ಇದೊಂದು ಲವ್​ ಸ್ಟೋರಿ. ದಿಯಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ದರ್ಶನ್​ ಅಪೂರ್ವ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ ಎಂದು ಪೃಥ್ವಿ ಮಾಹಿತಿ ನೀಡಿದ್ದಾರೆ.

ಜೂನ್​ನಲ್ಲಿ ಸಿನಿಮಾ ಶೂಟಿಂಗ್​ ಮಾಡಬೇಕು ಎನ್ನುವುದು ಚಿತ್ರತಂಡದ ಪ್ಲ್ಯಾನ್​ ಆಗಿತ್ತು. ಆದರೆ, ಕೊರೊನಾ ಸಂಖ್ಯೆ ಹೆಚ್ಚಿದೆ. ಹೀಗಾಗಿ, ಲಾಕ್​ಡೌನ್​ ಕೂಡ ಘೋಷಣೆ ಮಾಡಲಾಗಿದೆ. ಹೀಗಾಗಿ ಸಿನಿಮಾ ಶೂಟಿಂಗ್​ ಮುಂದೂಡಲ್ಪಟ್ಟಿದೆ. ದುಬೈನಲ್ಲಿ ನೆಲೆಸಿರುವ ಪೂರ್ಣಿಮಾ ರಾಜೀವ್​ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಫ್ರೆಂಡ್ಸ್​ ಜತೆ ಸೇರಿ ಹಾರರ್​ ಸಿನಿಮಾ ಮಾಡ್ತಾ ಇದೀನಿ. ಇದರ ಕೆಲಸ ಕೂಡ ಶುರುವಾಗಬೇಕಿದೆ.  ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’ ಚಿತ್ರದ​ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ನಡೆಯುತ್ತಿದೆ ಎಂದು ಪೃಥ್ವಿ ಅಂಬರ್ ಮಾಹಿತಿ ನೀಡಿದ್ದಾರೆ.

ಕೊವಿಡ್ ಕಾರಣದಿಂದ ಸಾಕಷ್ಟು ಸಿನಿಮಾಗಳ ಶೂಟಿಂಗ್​ ವಿಳಂಬವಾಗುತ್ತಿದೆ. ಅಷ್ಟೇ ಅಲ್ಲ, ಸಿನಿಮಾ ಬಿಡುಗಡೆ ಕೂಡ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರವೇ ಚಿತ್ರಗಳು ರಿಲೀಸ್​ ಆಗಲಿವೆ.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಅನುಷ್ಕಾ ಶರ್ಮಾ ನಟಿಸಿರುವ ಯಾವ ಸಿನಿಮಾ ಫೆವರೆಟ್ ಗೊತ್ತಾ?

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್