AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?

ಕೊವಿಡ್ ಕಾರಣದಿಂದ ಸಾಕಷ್ಟು ಸಿನಿಮಾಗಳ ಶೂಟಿಂಗ್​ ವಿಳಂಬವಾಗುತ್ತಿದೆ. ಅಷ್ಟೇ ಅಲ್ಲ, ಸಿನಿಮಾ ಬಿಡುಗಡೆ ಕೂಡ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರವೇ ಚಿತ್ರಗಳು ರಿಲೀಸ್​ ಆಗಲಿವೆ.

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?
ಪೃಥ್ವಿ ಅಂಬರ್​-ಖುಷಿ ರವಿ
ರಾಜೇಶ್ ದುಗ್ಗುಮನೆ
|

Updated on: May 20, 2021 | 6:42 PM

Share

2020ರಲ್ಲಿ ರಿಲೀಸ್​ ಆಗಿದ್ದ ದಿಯಾ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ದುರಂತ ಪ್ರೇಮಕಥೆ ಪ್ರೇಕ್ಷಕರ ಕಣ್ಣಲ್ಲಿ ನೀರು ತರಿಸಿತ್ತು. ಪೃಥ್ವಿ ಅಂಬರ್, ಖುಷಿ ರವಿ ಮತ್ತು ದೀಕ್ಷಿತ್​ ಶೆಟ್ಟಿ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಸಿಕೊಂಡಿದ್ದರು. ಈಗ ಪೃಥ್ವಿ-ಖುಷಿ ಮತ್ತೆ ತೆರೆಮೇಲೆ ಒಂದಾಗಲಿದ್ದಾರೆ. ಸಿನಿಮಾ ಕಥೆ ಕೂಡ ರೆಡಿ ಇದ್ದು, ಶೂಟಿಂಗ್​ ಆರಂಭವಾಗುವುದೊಂದೇ ಬಾಕಿ ಇದೆ.

ಪೃಥ್ವಿ ಅಂಬರ್ ಕೊವಿಡ್​ ಲಾಕ್​ಡೌನಿಂದ್​ ತಮ್ಮ ಹುಟ್ಟೂರಾದ ಕಾಸರಗೋಡು ಸೇರಿದ್ದಾರೆ. ಅಲ್ಲಿದ್ದುಕೊಂಡೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ವಿಶೇಷ ಎಂದರೆ, ಅವರು ಸಿನಿಮಾ ಒಂದಕ್ಕೆ ಕಥೆ ಹಾಗೂ ಸ್ಕ್ರಿಪ್ಟ್​ ಬರೆದಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿ ಹಾಗೂ ಖುಷಿ ನಟಿಸುತ್ತಿದ್ದಾರೆ.

ಸಿನಿಮಾ ಹೇಗಿದೆ, ಯಾವ ಹಂತದಲ್ಲಿದೆ? ಎನ್ನುವ ಬಗ್ಗೆ ಪೃಥ್ವಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಸ್ಕ್ರಿಪ್ಟ್​ ಕೆಲಸ ಮಾಡಿದ ಒಂದು ಪ್ರಾಜೆಕ್ಟ್​ ಶೂಟ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ನಾನು ಮತ್ತು ಖುಷಿ ನಟಿಸುತ್ತಿದ್ದೇವೆ. ಇದೊಂದು ಲವ್​ ಸ್ಟೋರಿ. ದಿಯಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ದರ್ಶನ್​ ಅಪೂರ್ವ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ ಎಂದು ಪೃಥ್ವಿ ಮಾಹಿತಿ ನೀಡಿದ್ದಾರೆ.

ಜೂನ್​ನಲ್ಲಿ ಸಿನಿಮಾ ಶೂಟಿಂಗ್​ ಮಾಡಬೇಕು ಎನ್ನುವುದು ಚಿತ್ರತಂಡದ ಪ್ಲ್ಯಾನ್​ ಆಗಿತ್ತು. ಆದರೆ, ಕೊರೊನಾ ಸಂಖ್ಯೆ ಹೆಚ್ಚಿದೆ. ಹೀಗಾಗಿ, ಲಾಕ್​ಡೌನ್​ ಕೂಡ ಘೋಷಣೆ ಮಾಡಲಾಗಿದೆ. ಹೀಗಾಗಿ ಸಿನಿಮಾ ಶೂಟಿಂಗ್​ ಮುಂದೂಡಲ್ಪಟ್ಟಿದೆ. ದುಬೈನಲ್ಲಿ ನೆಲೆಸಿರುವ ಪೂರ್ಣಿಮಾ ರಾಜೀವ್​ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಫ್ರೆಂಡ್ಸ್​ ಜತೆ ಸೇರಿ ಹಾರರ್​ ಸಿನಿಮಾ ಮಾಡ್ತಾ ಇದೀನಿ. ಇದರ ಕೆಲಸ ಕೂಡ ಶುರುವಾಗಬೇಕಿದೆ.  ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’ ಚಿತ್ರದ​ ಶೂಟಿಂಗ್​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ನಡೆಯುತ್ತಿದೆ ಎಂದು ಪೃಥ್ವಿ ಅಂಬರ್ ಮಾಹಿತಿ ನೀಡಿದ್ದಾರೆ.

ಕೊವಿಡ್ ಕಾರಣದಿಂದ ಸಾಕಷ್ಟು ಸಿನಿಮಾಗಳ ಶೂಟಿಂಗ್​ ವಿಳಂಬವಾಗುತ್ತಿದೆ. ಅಷ್ಟೇ ಅಲ್ಲ, ಸಿನಿಮಾ ಬಿಡುಗಡೆ ಕೂಡ ವಿಳಂಬವಾಗುತ್ತಿದೆ. ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರವೇ ಚಿತ್ರಗಳು ರಿಲೀಸ್​ ಆಗಲಿವೆ.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಅನುಷ್ಕಾ ಶರ್ಮಾ ನಟಿಸಿರುವ ಯಾವ ಸಿನಿಮಾ ಫೆವರೆಟ್ ಗೊತ್ತಾ?

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!