AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MN Kumar: ‘ಸುದೀಪ್​ ಮಾಡಿದ 45 ಸಿನಿಮಾಗಳಿಗೆ ಅಗ್ರಿಮೆಂಟ್​ ಇದೆಯಾ?’; ದಾಖಲೆ ಕೇಳಿದ್ದಕ್ಕೆ ಎಂ.ಎನ್​. ಕುಮಾರ್​ ಮರುಪ್ರಶ್ನೆ

Kichcha Sudeep: ಅಡ್ವಾನ್ಸ್ ಹಣ ಪಡೆಯುವ ಹೀರೋಗಳು ನಂತರ ಅದೇ ನಿರ್ಮಾಪಕರ ಜೊತೆ ಸಿನಿಮಾ ಮಾಡಲು ಹಿಂದೇಟು ಹಾಕುತ್ತಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಎಂ.ಎನ್​. ಕುಮಾರ್​ ವಿವರಿಸಿದ್ದಾರೆ.

MN Kumar: ‘ಸುದೀಪ್​ ಮಾಡಿದ 45 ಸಿನಿಮಾಗಳಿಗೆ ಅಗ್ರಿಮೆಂಟ್​ ಇದೆಯಾ?’; ದಾಖಲೆ ಕೇಳಿದ್ದಕ್ಕೆ ಎಂ.ಎನ್​. ಕುಮಾರ್​ ಮರುಪ್ರಶ್ನೆ
ಎಂ.ಎನ್​. ಕುಮಾರ್​, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jul 08, 2023 | 6:25 PM

Share

ನಿರ್ಮಾಪಕ ಎಂ.ಎನ್​. ಕುಮಾರ್​ (Producer MN Kumar) ಮತ್ತು ನಟ ಕಿಚ್ಚ ಸುದೀಪ್​ ನಡುವಿನ ಜಟಾಪಟ ಮತ್ತೊಂದು ಹಂತಕ್ಕೆ ಏರಿದೆ. ಕಾನೂನಿನ ಮೂಲಕ ವಿವಾದ ಬಗೆಹರಿಸಿಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ. ಎಂ.ಎನ್​. ಕುಮಾರ್​ಗೆ ಸುದೀಪ್​ (Kichcha Sudeep) ಅವರು ಲೀಗಲ್​ ನೋಟೀಸ್​ ಕಳಿಸಿದ್ದಾರೆ. ಅಡ್ವಾನ್ಸ್​ ಹಣ ಪಡೆದು ಕಾಲ್​ಶೀಟ್​ ನೀಡಿಲ್ಲ ಎಂಬ ಆರೋಪಕ್ಕೆ ದಾಖಲೆ ಇದೆಯೇ ಎಂದು ಸುದೀಪ್​ ಪ್ರಶ್ನಿಸಿದ್ದಾರೆ. ಆ ಮಾತಿಗೆ ಎಂ.ಎನ್​. ಕುಮಾರ್​ ಅವರು ಮರು ಪ್ರಶ್ನೆ ಹಾಕಿದ್ದಾರೆ. ಸುದೀಪ್​ ಮಾಡಿರುವ 45 ಸಿನಿಮಾಗಳಿಗೆ ಅಗ್ರಿಮೆಂಟ್​ ಇದೆಯೇ ಎಂದು ಎಂ.ಎನ್​. ಕುಮಾರ್​ ಪ್ರಶ್ನಿಸಿದ್ದಾರೆ.

‘ಸುದೀಪ್​ ಅವರು 45 ಸಿನಿಮಾ ಮಾಡಿದ್ದಾರೆ. ಆ 45 ಸಿನಿಮಾಗಳ ಅಗ್ರಿಮೆಂಟ್​ ತಂದು ಮಾಧ್ಯಮಗಳ ಮುಂದೆ ಕೊಡಲು ಹೇಳಿ. ಯಾವುದಕ್ಕಾದರೂ ಅಗ್ರಿಮೆಂಟ್​ ಮಾಡಿದ್ದಾರಾ. ಸಿನಿಮಾ ಕ್ಷೇತ್ರ ನಡೆಯುವುದೇ ನಂಬಿಕೆ ಮೇಲೆ. ಪ್ರಪಂಚದಲ್ಲಿ ಬೇರೆ ಯಾವ ವ್ಯವಹಾರ ಈ ರೀತಿ ನಡೆಯುತ್ತೋ ಇಲ್ಲವೋ ಗೊತ್ತಿಲ್ಲ’ ಎಂದು ಎಂ.ಎನ್​. ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ಜುಲೈ 6 ಎಂದರೆ ಸುದೀಪ್​ ಪಾಲಿಗೆ ಭಾರಿ ವಿಶೇಷ; ‘ಹುಚ್ಚ’ ಚಿತ್ರ ತೆರೆಕಂಡು ಕಳೆಯಿತು 22 ವರ್ಷ

ಮೊದಲು ಅಡ್ವಾನ್ಸ್ ಹಣ ಪಡೆಯುವ ಹೀರೋಗಳು ನಂತರ ಅದೇ ನಿರ್ಮಾಪಕರ ಜೊತೆ ಸಿನಿಮಾ ಮಾಡಲು ಹಿಂದೇಟು ಹಾಕುತ್ತಾರೆ ಎಂಬ ಆರೋಪ ಇದೆ. ಅದಕ್ಕೆ ಕಾರಣ ಏನು ಎಂಬುದನ್ನು ಎಂ.ಎನ್​. ಕುಮಾರ್​ ವಿವರಿಸಿದ್ದಾರೆ. ‘ಇಂದು ಒಬ್ಬ ಹೀರೋ ಸಂಭಾವನೆ 1 ಕೋಟಿ ರೂಪಾಯಿ ಇರುತ್ತದೆ. ಅವರಿಗೆ ನಾವು 50 ಲಕ್ಷ ರೂಪಾಯಿ ಅಡ್ವಾನ್ಸ್​ ಕೊಡುತ್ತೇವೆ. ಅವರು ನಮ್ಮ ಜೊತೆ ಸಿನಿಮಾ ಮಾಡುವಷ್ಟರಲ್ಲಿ ಅವರ ಸಂಭಾವನೆ 5 ಕೋಟಿ ರೂಪಾಯಿ ಆಗಿರುತ್ತದೆ. ಆಗ ಅವರಿಗೆ ಒಂದು ಕೋಟಿ ರೂಪಾಯಿಗೆ ಸಿನಿಮಾ ಮಾಡಲು ಮನಸ್ಸು ಇರುವುದಿಲ್ಲ. 5 ಕೋಟಿ ರೂಪಾಯಿ ಕೇಳೋಕೆ ಆಗಲ್ಲ. ಅದಕ್ಕೆ ಹೀಗೆಲ್ಲ ಮಾಡ್ತಾರೆ’ ಎಂದು ಎಂ.ಎನ್​. ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ಕ್ಯಾನ್ಸರ್​ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಆಸೆ ಈಡೇರಿಸಿದ ಕಿಚ್ಚ ಸುದೀಪ್​

ಲೀಗಲ್​ ನೋಟೀಸ್​ಗೆ ಎಂ.ಎನ್​. ಕುಮಾರ್​ ರಿಯಾಕ್ಷನ್​:

‘ವಾಟ್ಸಪ್​ ಮೂಲಕ ಬಂದಿದ್ದೆಲ್ಲ ನಿಜವಲ್ಲ. ಅಧಿಕೃತವಾಗಿ ನೋಟೀಸ್​ ಬರಲಿ. ಅದಕ್ಕೆ ಸೂಕ್ತವಾಗಿ ಉತ್ತರ ನೀಡೋಣ. ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘಕ್ಕೂ ವಕೀಲರು ಇರುತ್ತಾರೆ. ನಿರ್ಮಾಪಕರಲ್ಲೂ ಲಾಯರ್​ಗಳಿದ್ದಾರೆ. ಅವರೆಲ್ಲ ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ರೆಡಿ ಇರುತ್ತೇನೆ’ ಎಂದು ಎಂ.ಎನ್​. ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್