MN Kumar: ‘ಸುದೀಪ್​ ಮಾಡಿದ 45 ಸಿನಿಮಾಗಳಿಗೆ ಅಗ್ರಿಮೆಂಟ್​ ಇದೆಯಾ?’; ದಾಖಲೆ ಕೇಳಿದ್ದಕ್ಕೆ ಎಂ.ಎನ್​. ಕುಮಾರ್​ ಮರುಪ್ರಶ್ನೆ

Kichcha Sudeep: ಅಡ್ವಾನ್ಸ್ ಹಣ ಪಡೆಯುವ ಹೀರೋಗಳು ನಂತರ ಅದೇ ನಿರ್ಮಾಪಕರ ಜೊತೆ ಸಿನಿಮಾ ಮಾಡಲು ಹಿಂದೇಟು ಹಾಕುತ್ತಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಎಂ.ಎನ್​. ಕುಮಾರ್​ ವಿವರಿಸಿದ್ದಾರೆ.

MN Kumar: ‘ಸುದೀಪ್​ ಮಾಡಿದ 45 ಸಿನಿಮಾಗಳಿಗೆ ಅಗ್ರಿಮೆಂಟ್​ ಇದೆಯಾ?’; ದಾಖಲೆ ಕೇಳಿದ್ದಕ್ಕೆ ಎಂ.ಎನ್​. ಕುಮಾರ್​ ಮರುಪ್ರಶ್ನೆ
ಎಂ.ಎನ್​. ಕುಮಾರ್​, ಕಿಚ್ಚ ಸುದೀಪ್​
Follow us
|

Updated on: Jul 08, 2023 | 6:25 PM

ನಿರ್ಮಾಪಕ ಎಂ.ಎನ್​. ಕುಮಾರ್​ (Producer MN Kumar) ಮತ್ತು ನಟ ಕಿಚ್ಚ ಸುದೀಪ್​ ನಡುವಿನ ಜಟಾಪಟ ಮತ್ತೊಂದು ಹಂತಕ್ಕೆ ಏರಿದೆ. ಕಾನೂನಿನ ಮೂಲಕ ವಿವಾದ ಬಗೆಹರಿಸಿಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ. ಎಂ.ಎನ್​. ಕುಮಾರ್​ಗೆ ಸುದೀಪ್​ (Kichcha Sudeep) ಅವರು ಲೀಗಲ್​ ನೋಟೀಸ್​ ಕಳಿಸಿದ್ದಾರೆ. ಅಡ್ವಾನ್ಸ್​ ಹಣ ಪಡೆದು ಕಾಲ್​ಶೀಟ್​ ನೀಡಿಲ್ಲ ಎಂಬ ಆರೋಪಕ್ಕೆ ದಾಖಲೆ ಇದೆಯೇ ಎಂದು ಸುದೀಪ್​ ಪ್ರಶ್ನಿಸಿದ್ದಾರೆ. ಆ ಮಾತಿಗೆ ಎಂ.ಎನ್​. ಕುಮಾರ್​ ಅವರು ಮರು ಪ್ರಶ್ನೆ ಹಾಕಿದ್ದಾರೆ. ಸುದೀಪ್​ ಮಾಡಿರುವ 45 ಸಿನಿಮಾಗಳಿಗೆ ಅಗ್ರಿಮೆಂಟ್​ ಇದೆಯೇ ಎಂದು ಎಂ.ಎನ್​. ಕುಮಾರ್​ ಪ್ರಶ್ನಿಸಿದ್ದಾರೆ.

‘ಸುದೀಪ್​ ಅವರು 45 ಸಿನಿಮಾ ಮಾಡಿದ್ದಾರೆ. ಆ 45 ಸಿನಿಮಾಗಳ ಅಗ್ರಿಮೆಂಟ್​ ತಂದು ಮಾಧ್ಯಮಗಳ ಮುಂದೆ ಕೊಡಲು ಹೇಳಿ. ಯಾವುದಕ್ಕಾದರೂ ಅಗ್ರಿಮೆಂಟ್​ ಮಾಡಿದ್ದಾರಾ. ಸಿನಿಮಾ ಕ್ಷೇತ್ರ ನಡೆಯುವುದೇ ನಂಬಿಕೆ ಮೇಲೆ. ಪ್ರಪಂಚದಲ್ಲಿ ಬೇರೆ ಯಾವ ವ್ಯವಹಾರ ಈ ರೀತಿ ನಡೆಯುತ್ತೋ ಇಲ್ಲವೋ ಗೊತ್ತಿಲ್ಲ’ ಎಂದು ಎಂ.ಎನ್​. ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ಜುಲೈ 6 ಎಂದರೆ ಸುದೀಪ್​ ಪಾಲಿಗೆ ಭಾರಿ ವಿಶೇಷ; ‘ಹುಚ್ಚ’ ಚಿತ್ರ ತೆರೆಕಂಡು ಕಳೆಯಿತು 22 ವರ್ಷ

ಮೊದಲು ಅಡ್ವಾನ್ಸ್ ಹಣ ಪಡೆಯುವ ಹೀರೋಗಳು ನಂತರ ಅದೇ ನಿರ್ಮಾಪಕರ ಜೊತೆ ಸಿನಿಮಾ ಮಾಡಲು ಹಿಂದೇಟು ಹಾಕುತ್ತಾರೆ ಎಂಬ ಆರೋಪ ಇದೆ. ಅದಕ್ಕೆ ಕಾರಣ ಏನು ಎಂಬುದನ್ನು ಎಂ.ಎನ್​. ಕುಮಾರ್​ ವಿವರಿಸಿದ್ದಾರೆ. ‘ಇಂದು ಒಬ್ಬ ಹೀರೋ ಸಂಭಾವನೆ 1 ಕೋಟಿ ರೂಪಾಯಿ ಇರುತ್ತದೆ. ಅವರಿಗೆ ನಾವು 50 ಲಕ್ಷ ರೂಪಾಯಿ ಅಡ್ವಾನ್ಸ್​ ಕೊಡುತ್ತೇವೆ. ಅವರು ನಮ್ಮ ಜೊತೆ ಸಿನಿಮಾ ಮಾಡುವಷ್ಟರಲ್ಲಿ ಅವರ ಸಂಭಾವನೆ 5 ಕೋಟಿ ರೂಪಾಯಿ ಆಗಿರುತ್ತದೆ. ಆಗ ಅವರಿಗೆ ಒಂದು ಕೋಟಿ ರೂಪಾಯಿಗೆ ಸಿನಿಮಾ ಮಾಡಲು ಮನಸ್ಸು ಇರುವುದಿಲ್ಲ. 5 ಕೋಟಿ ರೂಪಾಯಿ ಕೇಳೋಕೆ ಆಗಲ್ಲ. ಅದಕ್ಕೆ ಹೀಗೆಲ್ಲ ಮಾಡ್ತಾರೆ’ ಎಂದು ಎಂ.ಎನ್​. ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ಕ್ಯಾನ್ಸರ್​ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಆಸೆ ಈಡೇರಿಸಿದ ಕಿಚ್ಚ ಸುದೀಪ್​

ಲೀಗಲ್​ ನೋಟೀಸ್​ಗೆ ಎಂ.ಎನ್​. ಕುಮಾರ್​ ರಿಯಾಕ್ಷನ್​:

‘ವಾಟ್ಸಪ್​ ಮೂಲಕ ಬಂದಿದ್ದೆಲ್ಲ ನಿಜವಲ್ಲ. ಅಧಿಕೃತವಾಗಿ ನೋಟೀಸ್​ ಬರಲಿ. ಅದಕ್ಕೆ ಸೂಕ್ತವಾಗಿ ಉತ್ತರ ನೀಡೋಣ. ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘಕ್ಕೂ ವಕೀಲರು ಇರುತ್ತಾರೆ. ನಿರ್ಮಾಪಕರಲ್ಲೂ ಲಾಯರ್​ಗಳಿದ್ದಾರೆ. ಅವರೆಲ್ಲ ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ರೆಡಿ ಇರುತ್ತೇನೆ’ ಎಂದು ಎಂ.ಎನ್​. ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ