AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಡಗೈ ಅಪಘಾತಕ್ಕೆ ಕಾರಣ’ ಟೀಸರ್ ಬಿಡುಗಡೆಗೆ ಸಿದ್ಧ: ದಿಗಂತ್​ಗೆ ಕಿಚ್ಚನ ಬಲ

Diganth-Sudeep: ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ.

‘ಎಡಗೈ ಅಪಘಾತಕ್ಕೆ ಕಾರಣ’ ಟೀಸರ್ ಬಿಡುಗಡೆಗೆ ಸಿದ್ಧ: ದಿಗಂತ್​ಗೆ ಕಿಚ್ಚನ ಬಲ
ಸುದೀಪ್-ದಿಗಂತ್
ಮಂಜುನಾಥ ಸಿ.
|

Updated on: Dec 27, 2023 | 10:01 PM

Share

ದಿಗಂತ್​ರ (Diganth) ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ರೆಡಿಯಾಗುತ್ತಿವೆ. ಅದರಲ್ಲಿ ಪ್ರಮುಖವಾದುದು ‘ಎಡಗೈ ಅಪಘಾತಕ್ಕೆ ಕಾರಣ’. ತನ್ನ ಭಿನ್ನ ಹೆಸರಿಂದಲೂ ಸಾಕಷ್ಟು ಕುತೂಹಲವನ್ನು ಈ ಸಿನಿಮಾ ಕೆರಳಿಸಿದೆ. ಸಾಕಷ್ಟು ಸಮಯದಿಂದ ಈ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿತ್ತು, ಇದೀಗ ಸಿನಿಮಾದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದ್ದು, ಕಿಚ್ಚ ಸುದೀಪ್ (Kichcha Sudeep) ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ.

ಎಡಗೈ ಬಳಸುವವರ ಕಥೆ ಆಧಾರಿತ ಸಿನಿಮಾ ‘ಎಡಗೈಯೇ ಅಪಘಾತಕ್ಕೆ ಕಾರಣ’. ಸಿನಿಮಾದ ಟೀಸರ್ ಡಿಸೆಂಬರ್ 28ಕ್ಕೆ ಬಿಡುಗಡೆ ಆಗಲಿದ್ದು, ಸಿನಿಮಾದ ಟೀಸರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಲಿರುವುದು ವಿಶೇಷ. ಆ ಮೂಲಕ ದಿಗಂತ್ ಸಿನಿಮಾಗೆ ಸಾಥ್‌ಕೊಡಲಿದ್ದಾರೆ ಅಭಿನಯ ಚಕ್ರವರ್ತಿ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಸಮರ್ಥ್ ಬಿ ಕಡಕೊಳ್ ನಿರ್ದೇಶನ ಮಾಡಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಈ ಸಿನಿಮಾದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗಂತ್​ಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದಾರೆ. ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡಕ್ಕೆ ನಿರೂಪ್ ಭಂಡಾರಿ ಎಂಟ್ರಿ; ಸ್ವಾಗತ ಕೋರಿದ ದಿಗಂತ್​

‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ