AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್ ಮಾಕ್ಟೇಲ್ 3’ ಚಿತ್ರ ಒಟಿಟಿಯಲ್ಲಿ ಗಮನ ಸೆಳೆಯುವಾಗಲೇ ಕೊನೆಯುಸಿರೆಳೆದ ದಿಲೀಪ್ ರಾಜ್

‘ಲವ್ ಮಾಕ್ಟೇಲ್ 3' ಸಿನಿಮಾದಲ್ಲಿ ದಿಲೀಪ್ ರಾಜ್ ಅವರು ಬಹಳ ಗಂಭೀರವಾದ ಮತ್ತು ಜವಾಬ್ದಾರಿಯುತವಾದ ವಕೀಲನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಲಾಯರ್ ಪಾತ್ರಕ್ಕೆ ಬೇಕಾದ ಗಾಂಭೀರ್ಯ ಮತ್ತು ಸಂಯಮವನ್ನು ಅವರು ಬಹಳ ಅಚ್ಚುಕಟ್ಟಾಗಿ ತೆರೆಯ ಮೇಲೆ ತಂದಿದ್ದರು. ವೃತ್ತಿಜೀವನದ ಆರಂಭದಲ್ಲಿ ಚಾಕೊಲೇಟ್ ಹೀರೊ ಆಗಿ ಕಾಣಿಸಿಕೊಂಡಿದ್ದರು.

‘ಲವ್ ಮಾಕ್ಟೇಲ್ 3’ ಚಿತ್ರ ಒಟಿಟಿಯಲ್ಲಿ ಗಮನ ಸೆಳೆಯುವಾಗಲೇ ಕೊನೆಯುಸಿರೆಳೆದ ದಿಲೀಪ್ ರಾಜ್
ದಿಲೀಪ್ ರಾಜ್ ನಿಧನ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 13, 2026 | 8:58 AM

Share

ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ನಟ ದಿಲೀಪ್ ರಾಜ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತವಾಯಿತು ಮತ್ತು ಅವರನ್ನು ಆಸ್​ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಅವರ ಶವವನ್ನು ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಅಕಾಲಿಕ ನಿಧನವು ಅಭಿಮಾನಿಗಳಿಗೆ ಮತ್ತು ಚಿತ್ರೋದ್ಯಮಕ್ಕೆ ಆಘಾತ ತಂದಿದೆ.

ಸುಮಾರು ಎರಡು ದಶಕಗಳ ಕಾಲ ನಟನೆಯಲ್ಲಿ ತೊಡಗಿದ್ದ ಅವರು, ತಮ್ಮ ವೃತ್ತಿಜೀವನದ ಕೊನೆಯ ಹಂತದವರೆಗೂ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದರು ಎಂಬುದನ್ನು ಇಲ್ಲಿ ನೆನೆಯಲೇ ಬೇಕು. ವಿಶೇಷವೆಂದರೆ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಸಾರ್ವಕಾಲಿಕ ಹಿಟ್ ಚಿತ್ರ ‘ಮಿಲನ’ದಲ್ಲಿ ಅಣ್ಣನ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದ ದಿಲೀಪ್, ತಮ್ಮ ಕೊನೆಯ ದಿನಗಳಲ್ಲಿ ‘ಲವ್ ಮಾಕ್ಟೇಲ್ 3′ ಚಿತ್ರದಲ್ಲಿ ಅವರು ವಕೀಲರ ಪಾತ್ರ ಮಾಡಿದ್ದರು.

‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ದಿಲೀಪ್ ರಾಜ್ ಅವರು ಬಹಳ ಗಂಭೀರವಾದ ಮತ್ತು ಜವಾಬ್ದಾರಿಯುತವಾದ ವಕೀಲನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಲಾಯರ್ ಪಾತ್ರಕ್ಕೆ ಬೇಕಾದ ಗಾಂಭೀರ್ಯ ಮತ್ತು ಸಂಯಮವನ್ನು ಅವರು ಬಹಳ ಅಚ್ಚುಕಟ್ಟಾಗಿ ತೆರೆಯ ಮೇಲೆ ತಂದಿದ್ದರು. ವೃತ್ತಿಜೀವನದ ಆರಂಭದಲ್ಲಿ ಚಾಕೊಲೇಟ್ ಹೀರೊ ಆಗಿ ಕಾಣಿಸಿಕೊಂಡಿದ್ದ ಅವರು, ನಂತರ ಪೋಷಕ ಪಾತ್ರಗಳಲ್ಲಿ ಹಾಗೂ ಪಕ್ವ ನಟನಾಗಿ ಬೆಳೆದಿದ್ದಕ್ಕೆ ಈ ಚಿತ್ರದ ಪಾತ್ರವೇ ಸಾಕ್ಷಿ.

ಇದನ್ನೂ ಓದಿ: ‘ಜೀ5’ ಮೂಲಕ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ; ಪ್ರಸಾರ ಯಾವಾಗ?

ನಟನೆಯಷ್ಟೇ ಅಲ್ಲದೆ, ಡಬ್ಬಿಂಗ್ ಮತ್ತು ನಿರ್ಮಾಣದಲ್ಲೂ ಯಶಸ್ಸು ಕಂಡಿದ್ದ ದಿಲೀಪ್ ರಾಜ್, ‘ಹಿಟ್ಲರ್ ಕಲ್ಯಾಣ’ದಂತಹ ಜನಪ್ರಿಯ ಧಾರಾವಾಹಿಗಳ ಮೂಲಕ ಕರ್ನಾಟಕದ ಮನೆಮಗನಾಗಿದ್ದರು. ಶಿಸ್ತು ಮತ್ತು ನಗುಮುಖದ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು. ಅವರ ಪಾತ್ರಗಳು ಇಂದು ಅಭಿಮಾನಿಗಳ ಕಣ್ಣ ಮುಂದೆ ಹಸಿರಾಗಿದೆ. ಬೆಳ್ಳಿತೆರೆಯಲ್ಲಿ ವಕೀಲನಾಗಿ ಅವರು ನೀಡಿದ ಆ ಕೊನೆಯ ಅಭಿನಯವು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಅವರ ನೆನಪನ್ನು ಚಿರಸ್ಥಾಯಿಯಾಗಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:56 am, Wed, 13 May 26

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ