ಡಾ. ರಾಜ್​ಕುಮಾರ್​ ಜತೆ ದಿಲೀಪ್​ ಕುಮಾರ್​ಗೆ ಇದ್ದ ಒಡನಾಟ ಎಂಥದ್ದು? ಫೋಟೋ ಸಹಿತ ವಿವರಿಸಿದ ಪುನೀತ್​

Dilip Kumar: 5 ದಶಕಗಳ ಕಾಲ ಬಾಲಿವುಡ್​ನಲ್ಲಿ ಸ್ಟಾರ್​ ಆಗಿ ಮಿಂಚಿದ ದಿಲೀಪ್​ ಕುಮಾರ್​ಗೆ ಕರುನಾಡು ಮತ್ತು ಕನ್ನಡ ಚಿತ್ರರಂಗದ ಜೊತೆಗೆ ಒಡನಾಟ ಇತ್ತು. ಚಂದನವನದ ಮೇರು ನಟ ಡಾ. ರಾಜ್​ಕುಮಾರ್​ ಮತ್ತು ದಿಲೀಪ್​ ಕುಮಾರ್​ ಅನೇಕ ಸಂದರ್ಭಗಳಲ್ಲಿ ಭೇಟಿ ಆಗಿದ್ದರು.

ಡಾ. ರಾಜ್​ಕುಮಾರ್​ ಜತೆ ದಿಲೀಪ್​ ಕುಮಾರ್​ಗೆ ಇದ್ದ ಒಡನಾಟ ಎಂಥದ್ದು? ಫೋಟೋ ಸಹಿತ ವಿವರಿಸಿದ ಪುನೀತ್​
ಡಾ. ರಾಜ್​ಕುಮಾರ್​, ದಿಲೀಪ್​ ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Jul 07, 2021 | 4:16 PM

ಭಾರತೀಯ ಚಿತ್ರರಂಗದ ದಿಗ್ಗಜ ನಟ ದಿಲೀಪ್​ ಕುಮಾರ್​ ಅವರು ಇಂದು (ಜು.7) ನಿಧನರಾಗಿರುವುದು ನೋವಿನ ಸಂಗತಿ. ಅವರ ಜೊತೆ ಒಡನಾಡಿದ ಅನೇಕರು ತಮ್ಮ ನೆನಪಿನ ಪುಟ ತೆರೆಯುತ್ತಿದ್ದಾರೆ. ದಿಲೀಪ್​ ಕುಮಾರ್​ ಆತ್ಮಕ್ಕೆ ಶಾಂತಿ ಕೋರುತ್ತಲೇ ಕೆಲವು ಅವಿಸ್ಮರಣೀಯ ಘಟನೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಟ ಪುನೀತ್​ ರಾಜ್​ಕುಮಾರ್​ ಕೂಡ ಒಂದೆರಡು ಬಾರಿ ದಿಲೀಪ್​ ಕುಮಾರ್​ ಅವರನ್ನು ಭೇಟಿ ಮಾಡಿದ್ದರು. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಸಮೇತ ಮಾಹಿತಿ ಹಂಚಿಕೊಂಡಿರುವ ಪುನೀತ್​ ಅವರು ದಿಲೀಪ್​ ಕುಮಾರ್​ಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

5 ದಶಕಗಳ ಕಾಲ ಬಾಲಿವುಡ್​ನಲ್ಲಿ ಸ್ಟಾರ್​ ಆಗಿ ಮಿಂಚಿದ ದಿಲೀಪ್​ ಕುಮಾರ್​ಗೆ ಕರುನಾಡು ಮತ್ತು ಕನ್ನಡ ಚಿತ್ರರಂಗದ ಜೊತೆಗೆ ಒಡನಾಟ ಇತ್ತು. ಚಂದನವನದ ಮೇರು ನಟ ಡಾ. ರಾಜ್​ಕುಮಾರ್​ ಮತ್ತು ದಿಲೀಪ್​ ಕುಮಾರ್​ ಅನೇಕ ಸಂದರ್ಭಗಳಲ್ಲಿ ಭೇಟಿ ಆಗಿದ್ದರು. ಅದನ್ನು ಈಗ ಪುನೀತ್​ ನೆನಪಿಸಿಕೊಂಡಿದ್ದಾರೆ. ‘ಎರಡು ಬಾರಿ ದಿಲೀಪ್​ ಕುಮಾರ್​ ಅವನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದ್ದಕ್ಕೆ ನಾನು ಧನ್ಯ’ ಎಂದು ಅವರು ಹೇಳಿದ್ದಾರೆ.

‘ಅಪ್ಪಾಜಿ (ಡಾ. ರಾಜ್​ಕುಮಾರ್​) ಮತ್ತು ದಿಲೀಪ್​ ಕುಮಾರ್​ ಅವರು ಪರಸ್ಪರ ಆದರದ ಭಾವ ಮತ್ತು ಗೌರವವನ್ನು ಹೊಂದಿದ್ದರು. ಅಪ್ಪಾಜಿ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಪಡೆಯುವಾಗ ನಾನು ಅವರನ್ನು ಭೇಟಿಯಾಗಿದ್ದು ನೆನಪಾಗುತ್ತಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಯ ಕಾರಣಕ್ಕಾಗಿ ಅವರನ್ನು ಎಂದಿಗೂ ಸ್ಮರಿಸಲಾಗುವುದು’ ಎಂದು ಟ್ವೀಟ್ ಮಾಡಿರುವ ಪುನೀತ್​ ಅವರು ಅಪರೂಪದ ಒಂದು ಫೋಟೋ ಹಂಚಿಕೊಂಡಿದ್ದಾರೆ.

ನರೇಂದ್ರ ಮೋದಿ, ರಾಹುಲ್​ ಗಾಂಧಿ, ಅಮಿತಾಭ್​ ಬಚ್ಚನ್​, ಅಕ್ಷಯ್​ ಕುಮಾರ್​, ಸಲ್ಮಾನ್​ ಖಾನ್​, ಸೋನು ಸೂದ್​, ಬಿ.ಎಸ್​. ಯಡಿಯೂರಪ್ಪ ಸೇರಿದಂತೆ ನೂರಾರು ಗಣ್ಯರು ದಿಲೀಪ್​ ಕುಮಾರ್​ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಹಲವು ಬಾರಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜೂ.30ರಂದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ನಿಧನರಾದ ಕಹಿ ಸುದ್ದಿ ಹೊರಬಿತ್ತು. 98 ವರ್ಷಗಳ ತುಂಬು ಜೀವನ ನಡೆಸಿದ ದಿಲೀಪ್​ ಕುಮಾರ್​ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಪಾರ ಸಂಖ್ಯೆಯ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ:

Dilip Kumar Death: ಲೆಜೆಂಡರಿ ನಟ ದಿಲೀಪ್​ ಕುಮಾರ್​ ಬಗ್ಗೆ ಯಡಿಯೂರಪ್ಪ, ಅಮಿತಾಭ್​, ಸೋನು ಸೂದ್​ ಹೇಳಿದ್ದೇನು?

ಪೆಟ್ಟು ತಿನ್ನಬೇಕಾಗುತ್ತೆ ಎಂಬ ಭಯದಲ್ಲಿ ಖಾನ್​ ಬದಲು ದಿಲೀಪ್​ ಕುಮಾರ್​ ಎಂದು ಹೆಸರಿಟ್ಟುಕೊಂಡಿದ್ದ ದಿಗ್ಗಜ ನಟ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ