AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಜೊತೆ ಕೈಜೋಡಿಸಿದ ಖ್ಯಾತ ಗಾಯಕ

Kantara Chapter 1: ಹೊಂಬಾಳೆ ನಿರ್ಮಿಸಿ ರಿಷ್ ಶೆಟ್ಟಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರ ಆರಂಭ ಆಗಿದೆ. ಇದೀಗ ಭಾರತದ ಸ್ಟಾರ್ ಸಿಂಗರ್ ಒಬ್ಬರು ‘ಕಾಂತಾರ: ಚಾಪ್ಟರ್ 1’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಯಾರು ಆ ಖ್ಯಾತ ಗಾಯಕ?

‘ಕಾಂತಾರ: ಚಾಪ್ಟರ್ 1’ ಜೊತೆ ಕೈಜೋಡಿಸಿದ ಖ್ಯಾತ ಗಾಯಕ
Kantara Chapter 1
ಮಂಜುನಾಥ ಸಿ.
|

Updated on: Sep 11, 2025 | 5:44 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ನಿಧಾನವಾಗಿ ಪ್ರಾರಂಭ ಮಾಡುತ್ತಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್​​ಡೇಟ್​​ಗಳನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಆದರೆ ಇದೀಗ ಒಂದೊಂದಾಗಿ ಅಪ್​​​ಡೇಟ್​​ಗಳು ಹೊರಗೆ ಬರುತ್ತಿವೆ. ಇತ್ತೀಚೆಗಷ್ಟೆ ಸಿನಿಮಾದ ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸುತ್ತಿರುವ ವಿಷಯವನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಭಾರತದ ಖ್ಯಾತ ನಟ ಮತ್ತು ಗಾಯಕರಾಗಿರುವ ಗುರುತಿಸಿಕೊಂಡಿರುವ ಅಂತರಾಷ್ಟ್ರೀಯ ಮಟ್ಟದ ಸೆಲೆಬ್ರಿಟಿಯೊಬ್ಬರು ಸಿನಿಮಾಕ್ಕಾಗಿ ಹಾಡು ಹಾಡಿರುವ ವಿಷಯ ಹೊರ ಬಿದ್ದಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾನಲ್ಲಿ ಹಲವು ಹಾಲಿವುಡ್ ತಂತ್ರಜ್ಞರು ಕೆಲಸ ಮಾಡಿರುವುದು ಗೊತ್ತೇ ಇದೆ. ಇದೀಗ ಭಾರತದ ಖ್ಯಾತ ಕಲಾವಿದ ವಿದೇಶಗಳಲ್ಲಿಯೂ ಬಹಳ ಹೆಸರು ಮಾಡಿರುವ ದಿಲ್ಜೀತ್ ದೊಸ್ಸಾಂಜ್ ಅವರು ‘ಕಾಂತಾರ’ ಸಿನಿಮಾಕ್ಕಾಗಿ ಹಾಡು ಹಾಡಲಿದ್ದಾರೆ. ದಿಲ್ಜೀತ್ ದುಸ್ಸಾಂಜ್, ಖ್ಯಾತ ನಟರಾಗಿರುವ ಜೊತೆಗೆ ಅದ್ಭುತವಾದ ಹಾಡುಗಾರರು ಸಹ. ಅವರ ಲೈವ್ ಕಾನ್ಸರ್ಟ್​​ಗಳಿಗೆ ಲಕ್ಷಗಳ ಸಂಖ್ಯೆಯಲ್ಲಿ ಜನ ಬರುತ್ತಾರೆ. ಅವರ ಶೋನ ಟಿಕೆಟ್​​ಗಳು ಬಿಸಿ ದೋಸೆಯಂತೆ ಮಾರಾಟ ಆಗುತ್ತವೆ. ಭಾರತದ ನಂಬರ್ 1 ಲೈವ್ ಕಾನ್ಸರ್ಟ್ ಗಾಯಕ ಎನಿಸಿಕೊಂಡಿದ್ದಾರೆ ದಿಲ್ಜೀತ್ ದೊಸ್ಸಾಂಜ್.

ಇದೀಗ ಇವರು ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕಾಗಿ ವಿಶೇಷವಾದ ಹಾಡೊಂದನ್ನು ಹಾಡಲಿದ್ದಾರೆ. ದಿಲ್ಜೀತ್ ದೊಸ್ಸಾಂಜ್ ತಮ್ಮ ಹಾಡುಗಳ ಮೂಲಕ ಪಂಜಾಬಿ ಸಂಸ್ಕೃತಿಯನ್ನು ಪ್ರತಿನಿಧಿಸುವ ಕಾರ್ಯ ಮಾಡುತ್ತಾ ಬಂದಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಹ ಕರಾವಳಿ ಸಂಸ್ಕೃತಿಯನ್ನು ಎತ್ತಿ ತೋರಿಸುವ ಸಿನಿಮಾ ಆಗಿದ್ದು ಇದೇ ಕಾರಣಕ್ಕೆ ದಿಲ್ಜೀತ್ ದೊಸ್ಸಾಂಜ್, ‘ಕಾಂತಾರ 1’ಗಾಗಿ ಹಾಡು ಹಾಡುತ್ತಿರುವುದು ಬಹಳ ವಿಶೇಷ ಎನಿಸಿಕೊಳ್ಳುತ್ತಿದೆ.

ಇದನ್ನೂ ಓದಿ:ಕಾಂತಾರ ಸುಂದರಿ ರುಕ್ಮಿಣಿ ವಸಂತ್ ನಗುವಿಗೆ ಮನಸೋತ ಫ್ಯಾನ್ಸ್

ನಾಳೆ ಅಂದರೆ ಸೆಪ್ಟೆಂಬರ್ 12 ರಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕಾಗಿ ದಿಲ್ಜೀತ್ ದುಸ್ಸಾಂಜ್ ಹಾಡು ಹಾಡಲಿದ್ದು, ಹಾಡನ್ನು ಮುಂಬೈನ ವೈಆರ್​​ಎಫ್ ಸ್ಟುಡಿಯೋನಲ್ಲಿ ರೆಕಾರ್ಡ್ ಮಾಡಲಾಗುತ್ತಿದೆ. ಹಾಡು ರೆಕಾರ್ಡ್ ಮಾಡುವ ವೇಳೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಜೊತೆಗೆ ನಿರ್ದೇಶಕ ರಿಷಬ್ ಶೆಟ್ಟಿ ಸಹ ಇರಲಿದ್ದಾರೆ ಎನ್ನಲಾಗುತ್ತಿದೆ.

‘ಕಾಂತಾರ: ಚಾಪ್ಟರ್ 1’ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಇದೀಗ ದಿಲ್ಜೀತ್ ದೊಸ್ಸಾಂಜ್ ಹಿಂದಿ ಹಾಡು ಮಾತ್ರವೇ ಹಾಡಲಿದ್ದಾರೆಯೇ ಅಥವಾ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಭಾಷೆಗಳಲ್ಲಿಯೂ ಹಾಡು ಹಾಡಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ. ದಿಲ್ಜೀತ್ ದೊಸ್ಸಾಂಜ್ ಭಾರಿ ಜನಪ್ರಿಯ ಗಾಯಕರಾಗಿದ್ದು, ಅವರಿಂದ ಹಾಡು ಹಾಡಿಸುವುದು ಮತ್ತು ಅದರ ವಿಡಿಯೋ ಮಾಡಿ ಪ್ರಚಾರಕ್ಕೆ ಬಳಸುವ ಟ್ರೆಂಡ್ ಬಾಲಿವುಡ್​​ನಲ್ಲಿದೆ. ‘ಕಾಂತಾರ’ ಚಿತ್ರತಂಡವೂ ಸಹ ದಿಲ್ಜೀತ್ ಅವರ ವಿಡಿಯೋ ಮಾಡಿ ಅದನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್ ಬಂಡವಾಳ ಹೂಡಿದ್ದು, ಸಿನಿಮಾದ ವಿತರಣೆ ಹಕ್ಕು ಮಾರಾಟ ಚಾಲ್ತಿಯಲ್ಲಿದೆ. ಕೇರಳ ಮತ್ತು ಆಂಧ್ರ ಪ್ರದೇಶಗಳಲ್ಲಿ ಈಗಾಗಲೇ ವಿತರಕರನ್ನು ಹೊಂಬಾಳೆ ಫಿಲಮ್ಸ್ ಅಂತಿಮಗೊಳಿಸಿದೆ. ಸಿನಿಮಾ ಭಾರತದಲ್ಲಿ ಮಾತ್ರವಲ್ಲದೆ ದುಬೈ, ಅಮೆರಿಕ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಇನ್ನೂ ಕೆಲ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!