Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ನಟನೆಯ ಹೊಸ ಸಿನಿಮಾಗೆ ದಿನಕರ್​ ತೂಗುದೀಪ ನಿರ್ದೇಶನ

ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ದಿನಕರ್​ ತೂಗುದೀಪ ಅವರು ಇದೇ ಮೊದಲ ಬಾರಿಗೆ ಕೈ ಜೋಡಿಸುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾಗೆ ಪ್ರಿಯದರ್ಶಿನಿ ರಾಮರೆಡ್ಡಿ ಅವರು ಕಥೆ ಬರೆದಿದ್ದಾರೆ. ‘ಬಿಂದ್ಯಾ ಮೂವೀಸ್’ ಸಂಸ್ಥೆಯ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ.

ಶಿವರಾಜ್​ಕುಮಾರ್​ ನಟನೆಯ ಹೊಸ ಸಿನಿಮಾಗೆ ದಿನಕರ್​ ತೂಗುದೀಪ ನಿರ್ದೇಶನ
ಶಿವರಾಜ್​ ಕುಮಾರ್​, ದಿನಕರ್​ ತೂಗುದೀಪ
Follow us
ಮದನ್​ ಕುಮಾರ್​
|

Updated on: Dec 31, 2023 | 12:18 PM

ನಟ ಶಿವರಾಜ್​ಕುಮಾರ್​ (Shivarajkumar) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ. ‘ಜೈಲರ್​’, ‘ಘೋಸ್ಟ್​’ ಸಿನಿಮಾಗಳ ಮೂಲಕ ರಂಜಿಸಿದ್ದ ಅವರು 2024ರಲ್ಲೂ ಭರ್ಜರಿ ಮನರಂಜನೆ ನೀಡಲಿದ್ದಾರೆ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಶಿವರಾಜ್​ಕುಮಾರ್​ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದೆ. ವಿಶೇಷ ಏನೆಂದರೆ, ಶಿವಣ್ಣ ನಟಿಸಲಿರುವ ಈ ನೂತನ ಚಿತ್ರಕ್ಕೆ ಖ್ಯಾತ ನಿರ್ದೇಶಕ ದಿನಕರ್​ ತೂಗುದೀಪ (Dinakar Thoogudeepa) ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇವರಿಬ್ಬರ ಕಾಂಬಿನೇಷನ್​ ಎಂಬ ಕಾರಣಕ್ಕೆ ಈ ಸಿನಿಮಾ ಭಾರಿ ಕೌತುಕ ಮೂಡಿಸಿದೆ.

ದಿನಕರ್ ತೂಗುದೀಪ ಅವರು ಈ ಹಿಂದೆ ‘ಜೊತೆ ಜೊತೆಯಲಿ’, ‘ನವಗ್ರಹ’, ‘ಸಾರಥಿ’ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದರು. ಇದೇ ಮೊದಲ ಬಾರಿಗೆ ಅವರು ಶಿವರಾಜ್​ಕುಮಾರ್​ ಜೊತೆ ಕೈ ಜೋಡಿಸುತ್ತಿರುವುದು ವಿಶೇಷ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ‘ಜೈಲರ್​’ ಸಿನಿಮಾದ ನರಸಿಂಹ ಪಾತ್ರದ ಮೇಲೆ ಹೊಸ ಸಿನಿಮಾ ಬರುತ್ತಾ? ಇಲ್ಲಿದೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ

ಈ ಸಿನಿಮಾಗೆ ‘ಬಿಂದ್ಯಾ ಮೂವೀಸ್’ ಸಂಸ್ಥೆಯ ಮೂಲಕ ಆರ್. ಕೇಶವ್ ಮತ್ತು ಬಿ.ಎಸ್. ಸುಧೀಂದ್ರ ಅವರು ಬಂಡವಾಳ ಹೂಡಲಿದ್ದಾರೆ. ಇದು ಪಕ್ಕಾ ಮಾಸ್ ಕಮರ್ಷಿಯಲ್ ಶೈಲಿಯ ಕಥೆಯನ್ನು ಹೊಂದಿರಲಿದೆ. ಈ ಸಿನಿಮಾಗೆ ಪ್ರಿಯದರ್ಶಿನಿ ರಾಮರೆಡ್ಡಿ ಅವರು ಕಥೆ ಬರೆದಿದ್ದಾರೆ. ಸದ್ಯಕ್ಕೆ ಪ್ರೀ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ: Shivarajkumar: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

ಶಿವರಾಜ್​ಕುಮಾರ್​ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಸದ್ಯಕ್ಕೆ ಈ ಸಿನಿಮಾದ ತಾಂತ್ರಿಕವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಸಿನಿಮಾದ ಟೈಟಲ್​ ಅನಾವರಣ ಮಾಡಲು ತಂಡ ನಿರ್ಧರಿಸಿದೆ. ನ್ಯೂ ಇಯರ್​ ಹೊಸ್ತಿಲಲ್ಲಿ ಹೊಸ ಸಿನಿಮಾ ಅನೌನ್ಸ್​ ಆಗಿದ್ದಕ್ಕೆ ಶಿವರಾಜ್​ಕುಮಾರ್ ಫ್ಯಾನ್ಸ್ ಖುಷಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!