AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ನಟನೆಯ ಹೊಸ ಸಿನಿಮಾಗೆ ದಿನಕರ್​ ತೂಗುದೀಪ ನಿರ್ದೇಶನ

ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ದಿನಕರ್​ ತೂಗುದೀಪ ಅವರು ಇದೇ ಮೊದಲ ಬಾರಿಗೆ ಕೈ ಜೋಡಿಸುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾಗೆ ಪ್ರಿಯದರ್ಶಿನಿ ರಾಮರೆಡ್ಡಿ ಅವರು ಕಥೆ ಬರೆದಿದ್ದಾರೆ. ‘ಬಿಂದ್ಯಾ ಮೂವೀಸ್’ ಸಂಸ್ಥೆಯ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ.

ಶಿವರಾಜ್​ಕುಮಾರ್​ ನಟನೆಯ ಹೊಸ ಸಿನಿಮಾಗೆ ದಿನಕರ್​ ತೂಗುದೀಪ ನಿರ್ದೇಶನ
ಶಿವರಾಜ್​ ಕುಮಾರ್​, ದಿನಕರ್​ ತೂಗುದೀಪ
ಮದನ್​ ಕುಮಾರ್​
|

Updated on: Dec 31, 2023 | 12:18 PM

Share

ನಟ ಶಿವರಾಜ್​ಕುಮಾರ್​ (Shivarajkumar) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ. ‘ಜೈಲರ್​’, ‘ಘೋಸ್ಟ್​’ ಸಿನಿಮಾಗಳ ಮೂಲಕ ರಂಜಿಸಿದ್ದ ಅವರು 2024ರಲ್ಲೂ ಭರ್ಜರಿ ಮನರಂಜನೆ ನೀಡಲಿದ್ದಾರೆ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಶಿವರಾಜ್​ಕುಮಾರ್​ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದೆ. ವಿಶೇಷ ಏನೆಂದರೆ, ಶಿವಣ್ಣ ನಟಿಸಲಿರುವ ಈ ನೂತನ ಚಿತ್ರಕ್ಕೆ ಖ್ಯಾತ ನಿರ್ದೇಶಕ ದಿನಕರ್​ ತೂಗುದೀಪ (Dinakar Thoogudeepa) ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇವರಿಬ್ಬರ ಕಾಂಬಿನೇಷನ್​ ಎಂಬ ಕಾರಣಕ್ಕೆ ಈ ಸಿನಿಮಾ ಭಾರಿ ಕೌತುಕ ಮೂಡಿಸಿದೆ.

ದಿನಕರ್ ತೂಗುದೀಪ ಅವರು ಈ ಹಿಂದೆ ‘ಜೊತೆ ಜೊತೆಯಲಿ’, ‘ನವಗ್ರಹ’, ‘ಸಾರಥಿ’ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದರು. ಇದೇ ಮೊದಲ ಬಾರಿಗೆ ಅವರು ಶಿವರಾಜ್​ಕುಮಾರ್​ ಜೊತೆ ಕೈ ಜೋಡಿಸುತ್ತಿರುವುದು ವಿಶೇಷ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ‘ಜೈಲರ್​’ ಸಿನಿಮಾದ ನರಸಿಂಹ ಪಾತ್ರದ ಮೇಲೆ ಹೊಸ ಸಿನಿಮಾ ಬರುತ್ತಾ? ಇಲ್ಲಿದೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ

ಈ ಸಿನಿಮಾಗೆ ‘ಬಿಂದ್ಯಾ ಮೂವೀಸ್’ ಸಂಸ್ಥೆಯ ಮೂಲಕ ಆರ್. ಕೇಶವ್ ಮತ್ತು ಬಿ.ಎಸ್. ಸುಧೀಂದ್ರ ಅವರು ಬಂಡವಾಳ ಹೂಡಲಿದ್ದಾರೆ. ಇದು ಪಕ್ಕಾ ಮಾಸ್ ಕಮರ್ಷಿಯಲ್ ಶೈಲಿಯ ಕಥೆಯನ್ನು ಹೊಂದಿರಲಿದೆ. ಈ ಸಿನಿಮಾಗೆ ಪ್ರಿಯದರ್ಶಿನಿ ರಾಮರೆಡ್ಡಿ ಅವರು ಕಥೆ ಬರೆದಿದ್ದಾರೆ. ಸದ್ಯಕ್ಕೆ ಪ್ರೀ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ: Shivarajkumar: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

ಶಿವರಾಜ್​ಕುಮಾರ್​ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಸದ್ಯಕ್ಕೆ ಈ ಸಿನಿಮಾದ ತಾಂತ್ರಿಕವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಸಿನಿಮಾದ ಟೈಟಲ್​ ಅನಾವರಣ ಮಾಡಲು ತಂಡ ನಿರ್ಧರಿಸಿದೆ. ನ್ಯೂ ಇಯರ್​ ಹೊಸ್ತಿಲಲ್ಲಿ ಹೊಸ ಸಿನಿಮಾ ಅನೌನ್ಸ್​ ಆಗಿದ್ದಕ್ಕೆ ಶಿವರಾಜ್​ಕುಮಾರ್ ಫ್ಯಾನ್ಸ್ ಖುಷಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?