AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ನಟನೆಯ ಹೊಸ ಸಿನಿಮಾಗೆ ದಿನಕರ್​ ತೂಗುದೀಪ ನಿರ್ದೇಶನ

ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ದಿನಕರ್​ ತೂಗುದೀಪ ಅವರು ಇದೇ ಮೊದಲ ಬಾರಿಗೆ ಕೈ ಜೋಡಿಸುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾಗೆ ಪ್ರಿಯದರ್ಶಿನಿ ರಾಮರೆಡ್ಡಿ ಅವರು ಕಥೆ ಬರೆದಿದ್ದಾರೆ. ‘ಬಿಂದ್ಯಾ ಮೂವೀಸ್’ ಸಂಸ್ಥೆಯ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ.

ಶಿವರಾಜ್​ಕುಮಾರ್​ ನಟನೆಯ ಹೊಸ ಸಿನಿಮಾಗೆ ದಿನಕರ್​ ತೂಗುದೀಪ ನಿರ್ದೇಶನ
ಶಿವರಾಜ್​ ಕುಮಾರ್​, ದಿನಕರ್​ ತೂಗುದೀಪ
ಮದನ್​ ಕುಮಾರ್​
|

Updated on: Dec 31, 2023 | 12:18 PM

Share

ನಟ ಶಿವರಾಜ್​ಕುಮಾರ್​ (Shivarajkumar) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ. ‘ಜೈಲರ್​’, ‘ಘೋಸ್ಟ್​’ ಸಿನಿಮಾಗಳ ಮೂಲಕ ರಂಜಿಸಿದ್ದ ಅವರು 2024ರಲ್ಲೂ ಭರ್ಜರಿ ಮನರಂಜನೆ ನೀಡಲಿದ್ದಾರೆ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಶಿವರಾಜ್​ಕುಮಾರ್​ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದೆ. ವಿಶೇಷ ಏನೆಂದರೆ, ಶಿವಣ್ಣ ನಟಿಸಲಿರುವ ಈ ನೂತನ ಚಿತ್ರಕ್ಕೆ ಖ್ಯಾತ ನಿರ್ದೇಶಕ ದಿನಕರ್​ ತೂಗುದೀಪ (Dinakar Thoogudeepa) ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇವರಿಬ್ಬರ ಕಾಂಬಿನೇಷನ್​ ಎಂಬ ಕಾರಣಕ್ಕೆ ಈ ಸಿನಿಮಾ ಭಾರಿ ಕೌತುಕ ಮೂಡಿಸಿದೆ.

ದಿನಕರ್ ತೂಗುದೀಪ ಅವರು ಈ ಹಿಂದೆ ‘ಜೊತೆ ಜೊತೆಯಲಿ’, ‘ನವಗ್ರಹ’, ‘ಸಾರಥಿ’ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದರು. ಇದೇ ಮೊದಲ ಬಾರಿಗೆ ಅವರು ಶಿವರಾಜ್​ಕುಮಾರ್​ ಜೊತೆ ಕೈ ಜೋಡಿಸುತ್ತಿರುವುದು ವಿಶೇಷ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ‘ಜೈಲರ್​’ ಸಿನಿಮಾದ ನರಸಿಂಹ ಪಾತ್ರದ ಮೇಲೆ ಹೊಸ ಸಿನಿಮಾ ಬರುತ್ತಾ? ಇಲ್ಲಿದೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ

ಈ ಸಿನಿಮಾಗೆ ‘ಬಿಂದ್ಯಾ ಮೂವೀಸ್’ ಸಂಸ್ಥೆಯ ಮೂಲಕ ಆರ್. ಕೇಶವ್ ಮತ್ತು ಬಿ.ಎಸ್. ಸುಧೀಂದ್ರ ಅವರು ಬಂಡವಾಳ ಹೂಡಲಿದ್ದಾರೆ. ಇದು ಪಕ್ಕಾ ಮಾಸ್ ಕಮರ್ಷಿಯಲ್ ಶೈಲಿಯ ಕಥೆಯನ್ನು ಹೊಂದಿರಲಿದೆ. ಈ ಸಿನಿಮಾಗೆ ಪ್ರಿಯದರ್ಶಿನಿ ರಾಮರೆಡ್ಡಿ ಅವರು ಕಥೆ ಬರೆದಿದ್ದಾರೆ. ಸದ್ಯಕ್ಕೆ ಪ್ರೀ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ: Shivarajkumar: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

ಶಿವರಾಜ್​ಕುಮಾರ್​ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಸದ್ಯಕ್ಕೆ ಈ ಸಿನಿಮಾದ ತಾಂತ್ರಿಕವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಸಿನಿಮಾದ ಟೈಟಲ್​ ಅನಾವರಣ ಮಾಡಲು ತಂಡ ನಿರ್ಧರಿಸಿದೆ. ನ್ಯೂ ಇಯರ್​ ಹೊಸ್ತಿಲಲ್ಲಿ ಹೊಸ ಸಿನಿಮಾ ಅನೌನ್ಸ್​ ಆಗಿದ್ದಕ್ಕೆ ಶಿವರಾಜ್​ಕುಮಾರ್ ಫ್ಯಾನ್ಸ್ ಖುಷಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!