AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guruprasad Arrest: ಚೆಕ್​ಬೌನ್ಸ್ ಪ್ರಕರಣ; ‘ಮಠ’ ಖ್ಯಾತಿಯ ಗುರುಪ್ರಸಾದ್ ಅರೆಸ್ಟ್

ನಿರ್ದೇಶಕ ಗುರುಪ್ರಸಾದ್​ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ. ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.

Guruprasad Arrest: ಚೆಕ್​ಬೌನ್ಸ್ ಪ್ರಕರಣ; ‘ಮಠ’ ಖ್ಯಾತಿಯ ಗುರುಪ್ರಸಾದ್ ಅರೆಸ್ಟ್
ಗುರು ಪ್ರಸಾದ್
TV9 Web
| Edited By: |

Updated on:Jan 13, 2023 | 3:32 PM

Share

ನಟ, ನಿರ್ದೇಶಕ ಗುರುಪ್ರಸಾದ್​ (Guruprasad) ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ. ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅವರಿಗೆ ಗುರುಪ್ರಸಾದ್ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದೆ. ವಂಚನೆ ಹಾಗು ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರುಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿದೆ.

ಶ್ರೀನಿವಾಸ್ ಎಂಬುವವರ​ ಜತೆ ಗುರುಪ್ರಸಾದ್ ಹಣಕಾಸು ವ್ಯವಹಾರ ನಡೆಸಿದ್ದರು. ಗುರುಪ್ರಸಾದ್ ವಿರುದ್ಧ ವಂಚನೆ ಆರೋಪದಡಿ ಕೇಸ್ ದಾಖಲಾಗಿತ್ತು. ಚೆಕ್​ಬೌನ್ಸ್ ಪ್ರಕರಣದಲ್ಲಿ ವಾರಂಟ್ ಹೊರಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರಿಂದ ಗುರುಪ್ರಸಾದ್ ಬಂಧನ ಆಗಿದೆ.

ಹಣ ಕೊಟ್ಟ ಶ್ರೀನಿವಾಸ್ ಹೇಳಿದ್ದೇನು?

2015 ರಲ್ಲಿ ನಾನು ಅಭಿಮಾನಿ ಆಗಿ ಪರಿಚಯ ಆಗಿದ್ದು. 2016 ರಲ್ಲಿಸಾಲ ಅಂತ 30 ಲಕ್ಷ ರೂ. ಕೊಡಿಸಿದ್ದೆ. ಆದ್ರೆ, ಸಾಲ ವಾಪಸ್ ಕೇಳಿದಾಗ ಕೆಟ್ಟು ರೀತಿಯಲ್ಲಿ ವರ್ತಿಸಿದ್ರು. ಈ ಬಗ್ಗೆ ಕಳೆದ ಆಗಸ್ಟ್​ನಲ್ಲಿ ಕೇಸ್ ಹಾಕಿದ್ದೆ. ಪೊಲೀಸರು ಇವತ್ತು ವಶಕ್ಕೆ ಪಡೆದಿದ್ದಾರೆ. ಕೋರ್ಟ್ ಮೂಲಕ ನ್ಯಾಯ ಕೇಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಈಗಲೂ ದುಡ್ಡು ಕೊಟ್ರೆ ಅವರ ಕಾಲಿಗೆ ಬಿದ್ದು ಕೇಸ್ ವಾಪಸ್ ತೆಗೆದುಕೊಳ್ಳುತ್ತೇನೆ. ಚೆಕ್ ಬೌನ್ಸ್ ಕೇಸ್ ಹಾಕಿದ ಮೇಲೆ ನನ್ನ ಮೇಲೆ ಎರಡನೇ ಹೆಂಡತಿಯಿಂದ ನಾನು ಅನುಚಿತವಾಗಿ ವರ್ತಿಸಿದ್ದೀನಿ ಎಂದು ದುರು ದಾಖಲು ಮಾಡಿದ್ರು. ಗುರುಗಳನ್ನ ಇಲ್ಲಿಗೆ ತರುವುದಕ್ಕೆ ನನಗೆ ಈಗಲೂ ಬೇಜಾರಿದೆ, ಆದ್ರೆ, ಅವರಿಗೆ ಆ ಭಾವನೆ ಇಲ್ಲ ಎಂದರು.

2006ರಲ್ಲಿ ತೆರೆಗೆ ಬಂದ ‘ಮಠ’ ಸಿನಿಮಾಗೆ ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ಅವರ ನಿರ್ದೇಶನದ ಮೊದಲ ಸಿನಿಮಾ ಇದು. ಈ ಚಿತ್ರದಲ್ಲಿ ಜಗ್ಗೇಶ್ ಮುಖ್ಯ ಪಾತ್ರ ಮಾಡಿದ್ದರು. ಈ ಸಿನಿಮಾ ಯಶಸ್ಸು ಕಂಡಿತು. ಜಗ್ಗೇಶ್ ಹಾಗೂ ಗುರುಪ್ರಸಾದ್ ಕಾಂಬಿನೇಷನ್​​ನಲ್ಲಿ ಮೂಡಿಬಂದ 2009ರ ‘ಎದ್ದೇಳು ಮಂಜುನಾಥ’ ಸಿನಿಮಾ ಕೂಡ ಯಶಸ್ಸು ಕಂಡಿತು. 2013ರಲ್ಲಿ ‘ಡೈರೆಕ್ಟರ್​ ಸ್ಪೆಷಲ್​’ ನಿರ್ದೇಶನ ಮಾಡಿದರು. ಇನ್ನೂ ಕೆಲವು ಚಿತ್ರಗಳಿಗೆ ಅವರು ಆ್ಯಕ್ಷನ್​ಕಟ್  ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಸಾವಿಗೆ ರಾಜಕಾರಣಿಗಳೇ ಕಾರಣ; ಕೊರೊನಾ ಸೋಂಕಿತ ‘ಮಠ’ ಗುರುಪ್ರಸಾದ್​ ಬಹಿರಂಗ ಡೆತ್​ ನೋಟ್​​

ನಟನೆ ಮೂಲಕವೂ ಗುರುಪ್ರಸಾದ್ ಗುರುತಿಸಿಕೊಂಡಿದ್ದಾರೆ. ‘ಮಠ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ತೆರೆಗೆ ಬಂದ ‘ಮಠ’ ಸಿನಿಮಾದಲ್ಲೂ ಗುರುಪ್ರಸಾದ್ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:21 pm, Fri, 13 January 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ