AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ತೆರೆಗೆ ಬರುವ ಮೊದಲೇ ಕನ್ನಡದ ಹೀರೋ, ಡೈರೆಕ್ಟರ್​ ಇಬ್ಬರೂ ಕೊವಿಡ್​ಗೆ ಬಲಿ

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಈಗ ಕೊರೊನಾಗೆ ಚಿತ್ರರಂಗದಿಂದ ಮತ್ತೊಬ್ಬರು ಬಲಿಯಾಗಿದ್ದಾರೆ.

ಸಿನಿಮಾ ತೆರೆಗೆ ಬರುವ ಮೊದಲೇ ಕನ್ನಡದ ಹೀರೋ, ಡೈರೆಕ್ಟರ್​ ಇಬ್ಬರೂ ಕೊವಿಡ್​ಗೆ ಬಲಿ
ಡಿ.ಎಸ್.‌ ಮಂಜುನಾಥ್ ಮತ್ತು ಅಭಿರಾಮ್
ರಾಜೇಶ್ ದುಗ್ಗುಮನೆ
|

Updated on:May 28, 2021 | 8:32 PM

Share

ಕೊರೊನಾ ವೈರಸ್​ ಎರಡನೇ ಅಲೆಗೆ ಸ್ಯಾಂಡಲ್​ವುಡ್​ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಏಪ್ರಿಲ್​ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್​ನಿಂದ ಮೃತಪಟ್ಟಿದ್ದಾರೆ.  ಅವರಿಗೆ 34 ವರ್ಷ ವಯಸ್ಸಾಗಿತ್ತು. 

ಡಿ.ಎಸ್.‌ ಮಂಜುನಾಥ್.‌ ’ಸಂಯುಕ್ತ-2’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಮತ್ತು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಂತರ ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾವನ್ನು ನಿರ್ಮಿಸಿ ಹೆಸರು ಮಾಡಿದರು. ಸದ್ಯ ‘೦% ಲವ್‌’ ಚಿತ್ರದಲ್ಲಿ ಹೀರೋ ಆಗಿ ಕೂಡ ನಟಿಸುತ್ತಿದ್ದರು. ‘ಸಂಯುಕ್ತ 2’ ಮತ್ತು ‘೦% ಲವ್‌’ ಎರಡೂ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಅಭಿರಾಮ್.‌ ಈಗ ಅಭಿರಾಮ್‌ ಕೂಡಾ ಮಂಜುನಾಥ್‌ ಅವರನ್ನು ಹಿಂಬಾಲಿಸಿ ಹೊರಟಿದ್ದಾರೆ ಅನ್ನೋದು ಬೇಸರದ ಸಂಗತಿ.

ಅಭಿರಾಮ್​ ಕಳೆದೊಂದು ವಾರದಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು. ಆದರೆ, ಅವರು ಪರೀಕ್ಷೆ ಮಾಡಿಸಿಕೊಳ್ಳದೆ ಮನೆಯಲ್ಲೇ ಇದ್ದರು. ಆದರೆ, ಇತ್ತೀಚೆಗೆ ಉಸಿರಾಟದ ತೊಂದರೆ ಅವರಲ್ಲಿ ಹೆಚ್ಚಾಗಿತ್ತು. ಈಗ ಅವರು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಕೊವಿಡ್​ ಇದ್ದಿದ್ದರಿಂದಲೇ ಉಸಿರಾಟದ ತೊಂದರೆ ಉಂಟಾಗಿ ಹೃದಯಾಘಾತವಾಗಿದೆ ಎನ್ನಲಾಗಿದೆ. ಸಿದ್ಧಪಡಿಸಿದ ಸಿನಿಮಾ ತೆರೆಗೆ ಬರುವ ಮುನ್ನವೇ ಚಿತ್ರದ ಹೀರೋ ಮತ್ತು ಡೈರೆಕ್ಟರ್‌ ಮೃತಪಟ್ಟಿದ್ದಾರೆ ಅನ್ನೋದು ಬೇಸರದ ಸಂಗತಿ.

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು. ಈಗ ಮಂಜುನಾಥ್​ ಜತೆ ನಿರ್ದೇಶಕರು ಕೂಡ ಮೃತಪಟ್ಟಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ: KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Published On - 7:58 pm, Fri, 28 May 21

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ