AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ತೆರೆಗೆ ಬರುವ ಮೊದಲೇ ಕನ್ನಡದ ಹೀರೋ, ಡೈರೆಕ್ಟರ್​ ಇಬ್ಬರೂ ಕೊವಿಡ್​ಗೆ ಬಲಿ

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಈಗ ಕೊರೊನಾಗೆ ಚಿತ್ರರಂಗದಿಂದ ಮತ್ತೊಬ್ಬರು ಬಲಿಯಾಗಿದ್ದಾರೆ.

ಸಿನಿಮಾ ತೆರೆಗೆ ಬರುವ ಮೊದಲೇ ಕನ್ನಡದ ಹೀರೋ, ಡೈರೆಕ್ಟರ್​ ಇಬ್ಬರೂ ಕೊವಿಡ್​ಗೆ ಬಲಿ
ಡಿ.ಎಸ್.‌ ಮಂಜುನಾಥ್ ಮತ್ತು ಅಭಿರಾಮ್
ರಾಜೇಶ್ ದುಗ್ಗುಮನೆ
|

Updated on:May 28, 2021 | 8:32 PM

Share

ಕೊರೊನಾ ವೈರಸ್​ ಎರಡನೇ ಅಲೆಗೆ ಸ್ಯಾಂಡಲ್​ವುಡ್​ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಏಪ್ರಿಲ್​ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್​ನಿಂದ ಮೃತಪಟ್ಟಿದ್ದಾರೆ.  ಅವರಿಗೆ 34 ವರ್ಷ ವಯಸ್ಸಾಗಿತ್ತು. 

ಡಿ.ಎಸ್.‌ ಮಂಜುನಾಥ್.‌ ’ಸಂಯುಕ್ತ-2’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಮತ್ತು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಂತರ ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾವನ್ನು ನಿರ್ಮಿಸಿ ಹೆಸರು ಮಾಡಿದರು. ಸದ್ಯ ‘೦% ಲವ್‌’ ಚಿತ್ರದಲ್ಲಿ ಹೀರೋ ಆಗಿ ಕೂಡ ನಟಿಸುತ್ತಿದ್ದರು. ‘ಸಂಯುಕ್ತ 2’ ಮತ್ತು ‘೦% ಲವ್‌’ ಎರಡೂ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಅಭಿರಾಮ್.‌ ಈಗ ಅಭಿರಾಮ್‌ ಕೂಡಾ ಮಂಜುನಾಥ್‌ ಅವರನ್ನು ಹಿಂಬಾಲಿಸಿ ಹೊರಟಿದ್ದಾರೆ ಅನ್ನೋದು ಬೇಸರದ ಸಂಗತಿ.

ಅಭಿರಾಮ್​ ಕಳೆದೊಂದು ವಾರದಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು. ಆದರೆ, ಅವರು ಪರೀಕ್ಷೆ ಮಾಡಿಸಿಕೊಳ್ಳದೆ ಮನೆಯಲ್ಲೇ ಇದ್ದರು. ಆದರೆ, ಇತ್ತೀಚೆಗೆ ಉಸಿರಾಟದ ತೊಂದರೆ ಅವರಲ್ಲಿ ಹೆಚ್ಚಾಗಿತ್ತು. ಈಗ ಅವರು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಕೊವಿಡ್​ ಇದ್ದಿದ್ದರಿಂದಲೇ ಉಸಿರಾಟದ ತೊಂದರೆ ಉಂಟಾಗಿ ಹೃದಯಾಘಾತವಾಗಿದೆ ಎನ್ನಲಾಗಿದೆ. ಸಿದ್ಧಪಡಿಸಿದ ಸಿನಿಮಾ ತೆರೆಗೆ ಬರುವ ಮುನ್ನವೇ ಚಿತ್ರದ ಹೀರೋ ಮತ್ತು ಡೈರೆಕ್ಟರ್‌ ಮೃತಪಟ್ಟಿದ್ದಾರೆ ಅನ್ನೋದು ಬೇಸರದ ಸಂಗತಿ.

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು. ಈಗ ಮಂಜುನಾಥ್​ ಜತೆ ನಿರ್ದೇಶಕರು ಕೂಡ ಮೃತಪಟ್ಟಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ: KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Published On - 7:58 pm, Fri, 28 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!