AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಯುವ ನಟ ಸತ್ತಾಗ ಶವ ಪರೀಕ್ಷೆ ನಡೆಸಿದ್ದರೆ ಮಾದಕ ಜಾಲ ಬಟಾಬಯಲಿಗೆ ಬೀಳುತ್ತಿತ್ತು’

ಬೆಂಗಳೂರು: ಯುವ ನಟ ತೀರಿಹೋದಾಗ ಎಲ್ಲರಿಗೂ ನೋವಾಗಿತ್ತು. ಆದರೆ ಈ ಬಗ್ಗೆ ಒಂದೇ ಒಂದು ತನಿಖೆ ಆಗಲಿಲ್ಲ. ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. ನಾನು ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶವಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಡ್ರಗ್ಸ್​ನಿಂದಲೇ ಆ ನಟ ಮೃತಪಟ್ಟಿದ್ದರಾ ಎಂದು ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು. ಜೊತೆಗೆ, ಯಾಱರು […]

‘ಆ ಯುವ ನಟ ಸತ್ತಾಗ ಶವ ಪರೀಕ್ಷೆ ನಡೆಸಿದ್ದರೆ ಮಾದಕ ಜಾಲ ಬಟಾಬಯಲಿಗೆ ಬೀಳುತ್ತಿತ್ತು’
KUSHAL V
| Edited By: ಸಾಧು ಶ್ರೀನಾಥ್​|

Updated on: Aug 29, 2020 | 1:08 PM

Share

ಬೆಂಗಳೂರು: ಯುವ ನಟ ತೀರಿಹೋದಾಗ ಎಲ್ಲರಿಗೂ ನೋವಾಗಿತ್ತು. ಆದರೆ ಈ ಬಗ್ಗೆ ಒಂದೇ ಒಂದು ತನಿಖೆ ಆಗಲಿಲ್ಲ. ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

ನಾನು ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶವಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಡ್ರಗ್ಸ್​ನಿಂದಲೇ ಆ ನಟ ಮೃತಪಟ್ಟಿದ್ದರಾ ಎಂದು ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು. ಜೊತೆಗೆ, ಯಾಱರು ಡ್ರಗ್ಸ್​ ಜಾಲದಲ್ಲಿದ್ದಾರೆ, ಎಷ್ಟು ಹಣ ಪಾವತಿಯಾಗ್ತಿದೆ. ಇದರಿಂದ ಯಾಱರಿಗೆ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿದೆ ಎಂದೂ ತಿಳಿಸಬಲ್ಲೆ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

‘ಡ್ರಗ್ಸ್​ ದಂಧೆ ಜೊತೆ ವೇಶ್ಯಾವಾಟಿಕೆ, ಹನಿ ಟ್ರ್ಯಾಪ್ ಸಹ ನಡೆಯುತ್ತಿದೆ’ ಮತ್ತೊಂದೆಡೆ ಯಾವ ರೀತಿ ವೇಶ್ಯಾವಾಟಿಕೆ ನಡೆಯುತ್ತಿದೆ. ಹೀಗೆ ಹಲವಾರು ವಿಚಾರಗಳ ಬಗ್ಗೆ ತನಿಖೆ ನಡೆಸಬೇಕು. ಸಂಗೀತ ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿರುವ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಇದಲ್ಲದೆ, ಕೆಲವೊಂದು ಕಾರ್ಯಕ್ರಮಗಳಲ್ಲಿ ಮುಜುಗರ ಆಗಿದೆ. ರಾತ್ರಿ ತೆಗೆದುಕೊಂಡಿದ್ದ ಡ್ರಗ್ಸ್​ ಬೆಳಗ್ಗೆ ಆದರೂ ಸ್ಮೆಲ್ ಬರುತ್ತಿರುತ್ತದೆ. ಹಾಗಾಗಿ, ಅಂಥವರನ್ನು ವಾಸನೆ ನೋಡಿಯೇ ಕಾರ್ಯಕ್ರಮಗಳಿಂದ ಕಳಿಸಿದ್ದಾರೆ. ಅಷ್ಟೇ ಅಲ್ಲ, ಹನಿ ಟ್ರ್ಯಾಪ್​ ಸಹ ನಡೆಯುತ್ತಿದೆ. ಇವೆಲ್ಲವನ್ನು ಪೊಲೀಸರ ಸಹಕಾರದಿಂದ ಬಹಿರಂಗಪಡಿಸಬಹುದು. ಆದರೆ ಇದರಲ್ಲಿ ಶಾಮೀಲಾಗಿರೋರು ಪೊಲೀಸರ ಕೈ ಕಟ್ಟಿಹಾಕಿದ್ದಾರೆ. ಪೊಲೀಸರಿಗೆ ಎಲ್ಲ ಮಾಹಿತಿಯೂ ಗೊತ್ತಿದೆ. ಆದರೆ ಪೊಲೀಸರು ಮಾಹಿತಿ ಬಹಿರಂಗಪಡಿಸಬೇಕಷ್ಟೇ ಎಂದು ಇಂದ್ರಜಿತ್ ಹೇಳಿದ್ದಾರೆ.

ಚಿತ್ರರಂಗದ 25ರಿಂದ 30 ಕಲಾವಿದರು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದೆ. ಇದರಲ್ಲಿ 18 ಜನ ಏಜೆಂಟ್​ಗಳೇ ಇರುವ ಬಗ್ಗೆ ಮಾಹಿತಿ ಇದೆ. ಯಾವುದೇ ಬ್ಯಾಕ್​ಗ್ರೌಂಡ್​, ಹಿನ್ನೆಲೆ ಇಲ್ಲದ ನಟಿಯರೂ ಇದ್ದಾರೆ. ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್ ನಟಿಯರಿದ್ದಾರೆ ಎಂದು ಇಂದ್ರಜಿತ್ ಹೇಳಿದ್ದಾರೆ. ನಮ್ಮ ಪೊಲೀಸರ ಬಳಿ ಎಲ್ಲ ಮಾಹಿತಿ, ದಾಖಲೆಗಳು ಇವೆ. ಪೊಲೀಸರು ಮನಸ್ಸು ಮಾಡಿದರೆ ಈ ಕ್ಷಣವೇ ಅವರನ್ನು ಬಂಧಿಸಬಹುದು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ