AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಯುವ ನಟ ಸತ್ತಾಗ ಶವ ಪರೀಕ್ಷೆ ನಡೆಸಿದ್ದರೆ ಮಾದಕ ಜಾಲ ಬಟಾಬಯಲಿಗೆ ಬೀಳುತ್ತಿತ್ತು’

ಬೆಂಗಳೂರು: ಯುವ ನಟ ತೀರಿಹೋದಾಗ ಎಲ್ಲರಿಗೂ ನೋವಾಗಿತ್ತು. ಆದರೆ ಈ ಬಗ್ಗೆ ಒಂದೇ ಒಂದು ತನಿಖೆ ಆಗಲಿಲ್ಲ. ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. ನಾನು ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶವಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಡ್ರಗ್ಸ್​ನಿಂದಲೇ ಆ ನಟ ಮೃತಪಟ್ಟಿದ್ದರಾ ಎಂದು ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು. ಜೊತೆಗೆ, ಯಾಱರು […]

‘ಆ ಯುವ ನಟ ಸತ್ತಾಗ ಶವ ಪರೀಕ್ಷೆ ನಡೆಸಿದ್ದರೆ ಮಾದಕ ಜಾಲ ಬಟಾಬಯಲಿಗೆ ಬೀಳುತ್ತಿತ್ತು’
KUSHAL V
| Edited By: |

Updated on: Aug 29, 2020 | 1:08 PM

Share

ಬೆಂಗಳೂರು: ಯುವ ನಟ ತೀರಿಹೋದಾಗ ಎಲ್ಲರಿಗೂ ನೋವಾಗಿತ್ತು. ಆದರೆ ಈ ಬಗ್ಗೆ ಒಂದೇ ಒಂದು ತನಿಖೆ ಆಗಲಿಲ್ಲ. ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

ನಾನು ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶವಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಡ್ರಗ್ಸ್​ನಿಂದಲೇ ಆ ನಟ ಮೃತಪಟ್ಟಿದ್ದರಾ ಎಂದು ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು. ಜೊತೆಗೆ, ಯಾಱರು ಡ್ರಗ್ಸ್​ ಜಾಲದಲ್ಲಿದ್ದಾರೆ, ಎಷ್ಟು ಹಣ ಪಾವತಿಯಾಗ್ತಿದೆ. ಇದರಿಂದ ಯಾಱರಿಗೆ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿದೆ ಎಂದೂ ತಿಳಿಸಬಲ್ಲೆ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

‘ಡ್ರಗ್ಸ್​ ದಂಧೆ ಜೊತೆ ವೇಶ್ಯಾವಾಟಿಕೆ, ಹನಿ ಟ್ರ್ಯಾಪ್ ಸಹ ನಡೆಯುತ್ತಿದೆ’ ಮತ್ತೊಂದೆಡೆ ಯಾವ ರೀತಿ ವೇಶ್ಯಾವಾಟಿಕೆ ನಡೆಯುತ್ತಿದೆ. ಹೀಗೆ ಹಲವಾರು ವಿಚಾರಗಳ ಬಗ್ಗೆ ತನಿಖೆ ನಡೆಸಬೇಕು. ಸಂಗೀತ ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿರುವ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಇದಲ್ಲದೆ, ಕೆಲವೊಂದು ಕಾರ್ಯಕ್ರಮಗಳಲ್ಲಿ ಮುಜುಗರ ಆಗಿದೆ. ರಾತ್ರಿ ತೆಗೆದುಕೊಂಡಿದ್ದ ಡ್ರಗ್ಸ್​ ಬೆಳಗ್ಗೆ ಆದರೂ ಸ್ಮೆಲ್ ಬರುತ್ತಿರುತ್ತದೆ. ಹಾಗಾಗಿ, ಅಂಥವರನ್ನು ವಾಸನೆ ನೋಡಿಯೇ ಕಾರ್ಯಕ್ರಮಗಳಿಂದ ಕಳಿಸಿದ್ದಾರೆ. ಅಷ್ಟೇ ಅಲ್ಲ, ಹನಿ ಟ್ರ್ಯಾಪ್​ ಸಹ ನಡೆಯುತ್ತಿದೆ. ಇವೆಲ್ಲವನ್ನು ಪೊಲೀಸರ ಸಹಕಾರದಿಂದ ಬಹಿರಂಗಪಡಿಸಬಹುದು. ಆದರೆ ಇದರಲ್ಲಿ ಶಾಮೀಲಾಗಿರೋರು ಪೊಲೀಸರ ಕೈ ಕಟ್ಟಿಹಾಕಿದ್ದಾರೆ. ಪೊಲೀಸರಿಗೆ ಎಲ್ಲ ಮಾಹಿತಿಯೂ ಗೊತ್ತಿದೆ. ಆದರೆ ಪೊಲೀಸರು ಮಾಹಿತಿ ಬಹಿರಂಗಪಡಿಸಬೇಕಷ್ಟೇ ಎಂದು ಇಂದ್ರಜಿತ್ ಹೇಳಿದ್ದಾರೆ.

ಚಿತ್ರರಂಗದ 25ರಿಂದ 30 ಕಲಾವಿದರು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದೆ. ಇದರಲ್ಲಿ 18 ಜನ ಏಜೆಂಟ್​ಗಳೇ ಇರುವ ಬಗ್ಗೆ ಮಾಹಿತಿ ಇದೆ. ಯಾವುದೇ ಬ್ಯಾಕ್​ಗ್ರೌಂಡ್​, ಹಿನ್ನೆಲೆ ಇಲ್ಲದ ನಟಿಯರೂ ಇದ್ದಾರೆ. ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್ ನಟಿಯರಿದ್ದಾರೆ ಎಂದು ಇಂದ್ರಜಿತ್ ಹೇಳಿದ್ದಾರೆ. ನಮ್ಮ ಪೊಲೀಸರ ಬಳಿ ಎಲ್ಲ ಮಾಹಿತಿ, ದಾಖಲೆಗಳು ಇವೆ. ಪೊಲೀಸರು ಮನಸ್ಸು ಮಾಡಿದರೆ ಈ ಕ್ಷಣವೇ ಅವರನ್ನು ಬಂಧಿಸಬಹುದು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ