AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಯುವ ನಟ ಸತ್ತಾಗ ಶವ ಪರೀಕ್ಷೆ ನಡೆಸಿದ್ದರೆ ಮಾದಕ ಜಾಲ ಬಟಾಬಯಲಿಗೆ ಬೀಳುತ್ತಿತ್ತು’

ಬೆಂಗಳೂರು: ಯುವ ನಟ ತೀರಿಹೋದಾಗ ಎಲ್ಲರಿಗೂ ನೋವಾಗಿತ್ತು. ಆದರೆ ಈ ಬಗ್ಗೆ ಒಂದೇ ಒಂದು ತನಿಖೆ ಆಗಲಿಲ್ಲ. ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. ನಾನು ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶವಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಡ್ರಗ್ಸ್​ನಿಂದಲೇ ಆ ನಟ ಮೃತಪಟ್ಟಿದ್ದರಾ ಎಂದು ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು. ಜೊತೆಗೆ, ಯಾಱರು […]

‘ಆ ಯುವ ನಟ ಸತ್ತಾಗ ಶವ ಪರೀಕ್ಷೆ ನಡೆಸಿದ್ದರೆ ಮಾದಕ ಜಾಲ ಬಟಾಬಯಲಿಗೆ ಬೀಳುತ್ತಿತ್ತು’
KUSHAL V
| Edited By: |

Updated on: Aug 29, 2020 | 1:08 PM

Share

ಬೆಂಗಳೂರು: ಯುವ ನಟ ತೀರಿಹೋದಾಗ ಎಲ್ಲರಿಗೂ ನೋವಾಗಿತ್ತು. ಆದರೆ ಈ ಬಗ್ಗೆ ಒಂದೇ ಒಂದು ತನಿಖೆ ಆಗಲಿಲ್ಲ. ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

ನಾನು ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶವಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಡ್ರಗ್ಸ್​ನಿಂದಲೇ ಆ ನಟ ಮೃತಪಟ್ಟಿದ್ದರಾ ಎಂದು ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು. ಜೊತೆಗೆ, ಯಾಱರು ಡ್ರಗ್ಸ್​ ಜಾಲದಲ್ಲಿದ್ದಾರೆ, ಎಷ್ಟು ಹಣ ಪಾವತಿಯಾಗ್ತಿದೆ. ಇದರಿಂದ ಯಾಱರಿಗೆ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿದೆ ಎಂದೂ ತಿಳಿಸಬಲ್ಲೆ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

‘ಡ್ರಗ್ಸ್​ ದಂಧೆ ಜೊತೆ ವೇಶ್ಯಾವಾಟಿಕೆ, ಹನಿ ಟ್ರ್ಯಾಪ್ ಸಹ ನಡೆಯುತ್ತಿದೆ’ ಮತ್ತೊಂದೆಡೆ ಯಾವ ರೀತಿ ವೇಶ್ಯಾವಾಟಿಕೆ ನಡೆಯುತ್ತಿದೆ. ಹೀಗೆ ಹಲವಾರು ವಿಚಾರಗಳ ಬಗ್ಗೆ ತನಿಖೆ ನಡೆಸಬೇಕು. ಸಂಗೀತ ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿರುವ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಇದಲ್ಲದೆ, ಕೆಲವೊಂದು ಕಾರ್ಯಕ್ರಮಗಳಲ್ಲಿ ಮುಜುಗರ ಆಗಿದೆ. ರಾತ್ರಿ ತೆಗೆದುಕೊಂಡಿದ್ದ ಡ್ರಗ್ಸ್​ ಬೆಳಗ್ಗೆ ಆದರೂ ಸ್ಮೆಲ್ ಬರುತ್ತಿರುತ್ತದೆ. ಹಾಗಾಗಿ, ಅಂಥವರನ್ನು ವಾಸನೆ ನೋಡಿಯೇ ಕಾರ್ಯಕ್ರಮಗಳಿಂದ ಕಳಿಸಿದ್ದಾರೆ. ಅಷ್ಟೇ ಅಲ್ಲ, ಹನಿ ಟ್ರ್ಯಾಪ್​ ಸಹ ನಡೆಯುತ್ತಿದೆ. ಇವೆಲ್ಲವನ್ನು ಪೊಲೀಸರ ಸಹಕಾರದಿಂದ ಬಹಿರಂಗಪಡಿಸಬಹುದು. ಆದರೆ ಇದರಲ್ಲಿ ಶಾಮೀಲಾಗಿರೋರು ಪೊಲೀಸರ ಕೈ ಕಟ್ಟಿಹಾಕಿದ್ದಾರೆ. ಪೊಲೀಸರಿಗೆ ಎಲ್ಲ ಮಾಹಿತಿಯೂ ಗೊತ್ತಿದೆ. ಆದರೆ ಪೊಲೀಸರು ಮಾಹಿತಿ ಬಹಿರಂಗಪಡಿಸಬೇಕಷ್ಟೇ ಎಂದು ಇಂದ್ರಜಿತ್ ಹೇಳಿದ್ದಾರೆ.

ಚಿತ್ರರಂಗದ 25ರಿಂದ 30 ಕಲಾವಿದರು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದೆ. ಇದರಲ್ಲಿ 18 ಜನ ಏಜೆಂಟ್​ಗಳೇ ಇರುವ ಬಗ್ಗೆ ಮಾಹಿತಿ ಇದೆ. ಯಾವುದೇ ಬ್ಯಾಕ್​ಗ್ರೌಂಡ್​, ಹಿನ್ನೆಲೆ ಇಲ್ಲದ ನಟಿಯರೂ ಇದ್ದಾರೆ. ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್ ನಟಿಯರಿದ್ದಾರೆ ಎಂದು ಇಂದ್ರಜಿತ್ ಹೇಳಿದ್ದಾರೆ. ನಮ್ಮ ಪೊಲೀಸರ ಬಳಿ ಎಲ್ಲ ಮಾಹಿತಿ, ದಾಖಲೆಗಳು ಇವೆ. ಪೊಲೀಸರು ಮನಸ್ಸು ಮಾಡಿದರೆ ಈ ಕ್ಷಣವೇ ಅವರನ್ನು ಬಂಧಿಸಬಹುದು ಎಂದು ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ