AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧಕ್ಕೆ ಮುನ್ನುಡಿ ಹಾಡಿದ ಪ್ರೇಮ್​; ಧ್ರುವ ಸರ್ಜಾ ಹೊಸ ಚಿತ್ರಕ್ಕೆ ಮೈಸೂರಿನಲ್ಲಿ ಮುಹೂರ್ತ

ಒಂದು ಮಾಸ್​ ಕಮರ್ಷಿಯಲ್​ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತವಾಗಿರಲಿಲ್ಲ. ಈಗ ಪ್ರೇಮ್ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಯುದ್ಧಕ್ಕೆ ಮುನ್ನುಡಿ ಹಾಡಿದ ಪ್ರೇಮ್​; ಧ್ರುವ ಸರ್ಜಾ ಹೊಸ ಚಿತ್ರಕ್ಕೆ ಮೈಸೂರಿನಲ್ಲಿ ಮುಹೂರ್ತ
TV9 Web
| Edited By: |

Updated on:Apr 19, 2022 | 7:15 AM

Share

ನಿರ್ದೇಶಕ ಪ್ರೇಮ್ (Director Prem)  ಅವರು ಸ್ಯಾಂಡಲ್​ವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಅವರ ನಿರ್ದೇಶನದ ‘ಜೋಗಿ’ ಚಿತ್ರವನ್ನು ಸಿನಿಪ್ರಿಯರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅವರ ಅಭಿಮಾನಿ ಬಳಗ ದೊಡ್ಡದು. ಇನ್ನು, ಧ್ರುವ ಸರ್ಜಾ (Dhruva Sarja) ಸ್ಯಾಂಡಲ್​ವುಡ್​ನ ಬೇಡಿಕೆಯ ನಟ. ಅವರು ‘ಅದ್ದೂರಿ’, ‘ಭರ್ಜರಿ’ ಮೊದಲಾದ ಚಿತ್ರಗಳ ಮೂಲಕ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಈಗ ಇವರಿಬ್ಬರೂ ಒಂದಾಗಿದ್ದಾರೆ. ಧ್ರುವ ಸರ್ಜಾ ಮುಂದಿನ ಚಿತ್ರಕ್ಕೆ ಪ್ರೇಮ್​ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಬಗ್ಗೆ ಪ್ರೇಮ್ ಅಧಿಕೃತ ಘೋಷಣೆ ಮಾಡಿದ್ದಾರೆ.

ಒಂದು ಮಾಸ್​ ಕಮರ್ಷಿಯಲ್​ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತವಾಗಿರಲಿಲ್ಲ. ಈಗ ಪ್ರೇಮ್ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರೇಮ್​ ಅವರು ‘ಏಕ್​ ಲವ್​ ಯಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈ ಸಿನಿಮಾ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬಂದಿತ್ತು. ಆ ಬಳಿಕ ಒಂದು ಸಣ್ಣ ಬ್ರೇಕ್ ತೆಗೆದುಕೊಂಡು ಹೊಸ ಸಿನಿಮಾ ಕೆಲಸ ಶುರುಮಾಡಿದ್ದಾರೆ ಪ್ರೇಮ್.

‘ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ’ ಎನ್ನುವ ಕ್ಯಾಪ್ಶನ್​ನೊಂದಿಗೆ ಫೋಟೋ ಪೋಸ್ಟ್ ಮಾಡಿದ್ದಾರೆ ಪ್ರೇಮ್​. ಫೋಟೋದಲ್ಲಿ ದೊಡ್ಡ ಕಮಾನಿನ ಮೇಲೆ 1970 ಎಂದು ಬರೆದುಕೊಂಡಿದೆ. ವ್ಯಕ್ತಿಯೋರ್ವ ಬೆನ್ನು ತೋರಿಸಿ ನಿಂತಿದ್ದು, ಕೈಯಲ್ಲಿ ಗನ್ ಹಿಡಿದಿದ್ದಾನೆ. ಈ ಕಥೆ ರೆಟ್ರೋ ಶೈಲಿಯಲ್ಲಿ ಸಾಗಲಿದೆಯೇ ಎನ್ನುವ ಕುತೂಹಲ ಕಾಡುತ್ತಿದೆ.

ಸಿನಿಮಾದ ಮುಹೂರ್ತವನ್ನು ಅಭಿಮಾನಿಗಳ ಜತೆ ನೆರವೇರಿಸಿಕೊಳ್ಳಲು ಪ್ರೇಮ್ ನಿರ್ಧರಿಸಿದ್ದಾರೆ. ಈ ಬಗ್ಗೆ ಬರೆದುಕೊಂಡಿರುವ ಅವರು, ‘ಏಪ್ರಿಲ್ 24ರಂದು ಬೆಳಿಗ್ಗೆ 9:30ಕ್ಕೆ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆಯೋ ಮುಹೂರ್ತಕ್ಕೆ ನೀವೇ ಮುಖ್ಯ ಅತಿಥಿ. ಬನ್ನಿ ಒಟ್ಟಿಗೆ ಹಬ್ಬ ಮಾಡೋಣ. ನಿಮ್ಮ ಪ್ರೀತಿ ಆಶೀರ್ವಾದ ಸದಾ ಹೀಗೆ ಇರಲಿ, ಹರಸಿ ಹಾರೈಸಿ’ ಎಂದು ಕೋರಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಮುಹೂರ್ತ ನೆರವೇರಿಸಿಕೊಳ್ಳಲು ಅವರು ಮುಂದಾಗಿದ್ದಾರೆ. ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್​ ನಿರ್ಮಾಣ ಮಾಡುತ್ತಿದ್ದು, ಈ ಪ್ರೊಡಕ್ಷನ್​ಹೌಸ್​ನ ನಾಲ್ಕನೇ ಸಿನಿಮಾ ಇದಾಗಿದೆ.

ಧ್ರುವ ಸರ್ಜಾ ‘ಮಾರ್ಟಿನ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಮಾರ್ಟಿನ್’ ಚಿತ್ರಕ್ಕೆ ಎ.ಪಿ. ಅರ್ಜುನ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ನಟನೆಯ ಮೊದಲ ಸಿನಿಮಾ ‘ಅದ್ದೂರಿ’ಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು ಈಗ ಮತ್ತೊಮ್ಮೆ ಧ್ರುವ ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: ರಕ್ಷಿತಾ-ಪ್ರೇಮ್​ ದಾಂಪತ್ಯಕ್ಕೆ 15 ವರ್ಷ; ‘ಹೆಂಗೆ ಕಳೆದೆ ಅಂತ ಯೋಚನೆ ಮಾಡ್ತಾ ಇದೀನಿ’ ಅಂದ್ರು ರಕ್ಷಿತಾ

ಏ.8ರಿಂದ ಜೀ5 ಒಟಿಟಿ ಮೂಲಕ ಪ್ರಸಾರ ಆಗಲಿದೆ ಪ್ರೇಮ್​ ನಿರ್ದೇಶನದ ‘ಏಕ್​ ಲವ್​ ಯಾ’ ಸಿನಿಮಾ

Published On - 7:56 pm, Mon, 18 April 22

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!