AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌತುಕ ಮೂಡಿಸಿದ ‘19.20.21’ ಕನ್ನಡ ಸಿನಿಮಾ; ಮಂಸೋರೆ ಹೊಸ ಚಿತ್ರ ಅನೌನ್ಸ್​

‘19.20.21’ ಚಿತ್ರದ ಕುರಿತು ನಿರ್ದೇಶಕ ಮಂಸೋರೆ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಈ ಸಿನಿಮಾದ ಪೋಸ್ಟರ್​ಗೆ ಸಿನಿಪ್ರಿಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೌತುಕ ಮೂಡಿಸಿದ ‘19.20.21’ ಕನ್ನಡ ಸಿನಿಮಾ; ಮಂಸೋರೆ ಹೊಸ ಚಿತ್ರ ಅನೌನ್ಸ್​
‘19.20.21’ ಸಿನಿಮಾ ಪೋಸ್ಟರ್​, ಮಂಸೋರೆ
Follow us
TV9 Web
| Updated By: ಮದನ್​ ಕುಮಾರ್​

Updated on: Jan 19, 2022 | 8:41 AM

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ (Director Mansore) ಅವರು ಪ್ರತಿ ಪ್ರಯತ್ನದಲ್ಲೂ ಭಿನ್ನವಾದ ಸಿನಿಮಾಗಳನ್ನು ನೀಡುತ್ತಾ ಬಂದಿದ್ದಾರೆ. ‘ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್​-1978’ (Act 1978) ಚಿತ್ರಗಳ ಮೂಲಕ ಅವರು ಗಮನ ಸೆಳೆದರು. ಮಂಸೋರೆ ಅವರು ‘ಅಬ್ಬಕ್ಕ’ ಸಿನಿಮಾ ಮಾಡುವ ಕುರಿತು ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು. ಆದರೆ ಕಾರಣಾಂತರಗಳಿಂದ ಆ ಚಿತ್ರ ಮುಂದಕ್ಕೆ ಹೋಗಿದೆ. ಈಗ ಅವರು ಹೊಸ ಸಿನಿಮಾವನ್ನು ಅನೌನ್ಸ್​ ಮಾಡಿದ್ದಾರೆ. ‘19.20.21’ ಎಂಬುದು ಈ ಚಿತ್ರದ ಶೀರ್ಷಿಕೆ. ಇದರ ಜೊತೆಗೆ ಪೋಸ್ಟರ್​ ಕೂಡ ಕೌತುಕಭರಿತವಾಗಿದೆ. ‘ಆ್ಯಕ್ಟ್​-1978’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ದೇವರಾಜ್​ ಅವರು ‘19.20.21’ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸತ್ಯ ಹೆಗಡೆ, ವೀರೇಂದ್ರ ಮಲ್ಲಣ್ಣ ಕೂಡ ಟೀಮ್​ನಲ್ಲಿ ಇದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಸಿನಿಮಾ ಎಂಬುದು ವಿಶೇಷ. ಈ ಚಿತ್ರದ (19.20.21 Movie) ಕುರಿತು ಸೋಶಿಯಲ್​ ಮೀಡಿಯಾದಲ್ಲಿ ನಿರ್ದೇಶಕ ಮಂಸೋರೆ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟರ್​ಗೆ ಸಿನಿಪ್ರಿಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರದಲ್ಲಿ ಯಾವೆಲ್ಲ ಕಲಾವಿದರು ಅಭಿನಯಿಸಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಈ ಸಿನಿಮಾದ ಕುರಿತು ಮಂಸೋರೆ ಈ ರೀತಿ ಬರೆದುಕೊಂಡಿದ್ದಾರೆ. ‘ಸ್ನೇಹಿತರೇ ಹಾಗೂ ಸಿನಿಪ್ರಿಯರೇ.. ನಾವು ಈ ಹಿಂದೆ ನಿಮ್ಮೊಂದಿಗೆ ಹಂಚಿಕೊಂಡಿದ್ದ ನನ್ನ ಬಹುವರ್ಷಗಳ ಕನಸು ‘ಅಬ್ಬಕ್ಕ’ ಸಿನಿಮಾ ಮಾಡುವ ಯೋಜನೆಯನ್ನು ಕೊರೊನಾ ಕಾಲದಲ್ಲಿ ಜರುಗುತ್ತಿರುವ ಅನಿಶ್ಚಿತತೆಗಳ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಿದ್ದೇವೆ. ಮುಂದೆ ಸಮಯ ಕೈಗೂಡಿ ಬಂದಾಗ ಖಂಡಿತ ‘ಅಬ್ಬಕ್ಕ’ ತೆರೆಯ ಮೇಲೆ ತರುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಮುಂದೆ? ಉತ್ತರ ‘19.20.21’ ಚಿತ್ರ’ ಎಂದು ಅವರು ಬರಹ ಆರಂಭಿಸಿದ್ದಾರೆ.

‘ನಮಗೆ ಸಿನಿಮಾ ಬಿಟ್ಟು ಬೇರೆ ಜಗತ್ತು ತಿಳಿಯದು. ಸಿನಿಮಾನೇ ನಮ್ಮ ಜೀವನ. ಸಿನಿಮಾ ಕನಸು ಕಾಣದೆ ನಮ್ಮ ಜೀವನವನ್ನು ಊಹಿಸಿಕೊಳ್ಳುವುದು ನಮಗೇ ಅಸಾಧ್ಯ. ಹಾಗಾಗಿ, ‘ಅಬ್ಬಕ್ಕ’ ಯೋಜನೆಯ ಕನಸಿನ ಜೊತೆಜೊತೆಗೆ ಈ ಕೊರೊನಾ ಕಾಲದಲ್ಲಿ, ವರ್ಷ ಪೂರ್ತಿ ಮನೆಯಲ್ಲೇ ಕಾಲ ಕಳೆಯುವಾಗ ಬಹಳ ಕಷ್ಟವೆನಿಸಿದರೂ, ಆ ಎರಡು ವರ್ಷಗಳಲ್ಲಿ ನಮಗೆ ಸಾಕಷ್ಟು ಹೋಮ್ ವರ್ಕ್ ಮಾಡಲು, ಕನಸುಗಳನ್ನು ಕಾಣಲು ಸಮಯವೂ ಸಿಕ್ಕಿತು. ಅದರ ಫಲವೇ ಈಗ ಹೊಸ ಸಿನಿಮಾ’ ಎಂದು ಮಂಸೋರೆ ಪೋಸ್ಟ್​ ಮಾಡಿದ್ದಾರೆ.

‘ಹೊಸ ಪ್ರಯತ್ನವೊಂದರ ಬೆನ್ನತ್ತಿ ಹೊರಟಿದ್ದೇವೆ. ಆದರೆ ಇದು ಕನಸಲ್ಲ, ಕತೆಯಲ್ಲ, ಸತ್ಯ ಘಟನೆ ಆಧಾರಿತ. ಬಹಳ ಹಿಂದೆಯೇ ಸಿನಿಮಾ ಮಾಡಬೇಕು ಅಂದುಕೊಂಡಿದ್ದ ಒಂದು ಘಟನೆಯು ದೃಶ್ಯರೂಪ ಪಡೆದುಕೊಳ್ಳಲು ಈಗ ಕಾಲ ಕೂಡಿಬಂದಿದೆ.‌ ಈ ವರ್ಷವೇ ಸಿನಿಮಾನ ನಿಮ್ಮ ಮುಂದೆ ತರುವ ಆಶಯದೊಂದಿಗೆ, ಅತಿ ಶೀಘ್ರದಲ್ಲೇ ಚಿತ್ರೀಕರಣಕ್ಕೆ ಹೋಗುವ ಸಿದ್ಧತೆಯಲ್ಲಿದ್ದೇವೆ. ‘ಹತ್ತೊಂಬತ್ತು, ಇಪ್ಪತ್ತು, ಇಪ್ಪತ್ತೊಂದು’ ಎಲ್ಲರ ಬದುಕಿಗೆ ಬಹಳ ಮುಖ್ಯವಾದ ಸಂಖ್ಯೆಗಳು. ಅದು ಏನು? ಹೇಗೆ ಎಂಬ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳುವ ಕುತೂಹಲ ಸಿನಿಮಾ ನೋಡುವ ತನಕ ಉಳಿದಿರಲಿ. ಸಿನಿಮಾದ ಪಾತ್ರವರ್ಗ ಮತ್ತು ತಾಂತ್ರಿಕ ವರ್ಗದ ಕುರಿತಾಗಿ ಮುಂಬರುವ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತೇವೆ. ನಿಮ್ಮ ಪ್ರೀತಿಯ ಹಾರೈಕೆ ಮತ್ತು ಬೆಂಬಲದ ಆಶೀರ್ವಾದ ಸದಾ ನಮ್ಮೊಂದಿಗೆ ಇರಲಿ’ ಎಂದು ಮಂಸೋರೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

ಅಗಲಿದ ಗೆಳೆಯ ಸಂಚಾರಿ ವಿಜಯ್​ಗಾಗಿ ‘ಪುಕ್ಸಟ್ಟೆ ಲೈಫು’ ಚಿತ್ರದ ಟಿಕೆಟ್​ ಖರೀದಿಸಿ, ಪತ್ರ ಬರೆದ ಮಂಸೋರೆ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!