Mansore: ತಮ್ಮದೇ ಕಥೆಯನ್ನು ತೆರೆ ಮೇಲೆ ನೋಡಿ ಕಣ್ಣೀರು ಹಾಕಿದ ‘19.20.21’ ಚಿತ್ರದ ನೈಜ ಪಾತ್ರಗಳು

19.20.21 Kannada Movie | Sandalwood: ಬಿಡುಗಡೆಗೂ ಮುನ್ನ ‘19.20.21’ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಅದರ ಅನುಭವವನ್ನು ನಿರ್ದೇಶನ ಮಂಸೋರೆ ಅವರು ಹಂಚಿಕೊಂಡಿದ್ದಾರೆ.

Mansore: ತಮ್ಮದೇ ಕಥೆಯನ್ನು ತೆರೆ ಮೇಲೆ ನೋಡಿ ಕಣ್ಣೀರು ಹಾಕಿದ ‘19.20.21’ ಚಿತ್ರದ ನೈಜ ಪಾತ್ರಗಳು
‘19.20.21’ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಪ್ರೇಕ್ಷಕರ ಜೊತೆ ನಿರ್ದೇಶಕ ಮಂಸೋರೆ
Follow us
|

Updated on: Mar 01, 2023 | 4:35 PM

ನಿರ್ದೇಶಕ ಮಂಸೋರೆ (Mansore) ಅವರು ಪ್ರತಿ ಬಾರಿಯೂ ಒಂದು ವಿಶೇಷ ಕಥಾವಸ್ತು ಇಟ್ಟುಕೊಂಡು ಸಿನಿಮಾ ಮಾಡುತ್ತಾರೆ. ‘ಹರಿವು’, ‘ನಾತಿಚರಾಮಿ’, ‘ಆಕ್ಟ್​ 1978’ ಬಳಿಕ ಅವರು ‘19.20.21’ (19.20.21 Movie) ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್​ 3ರಂದು ರಿಲೀಸ್​ ಆಗುತ್ತಿದೆ. ಹಲವು ವರ್ಷಗಳಿಂದ ದೌರ್ಜನ್ಯಕ್ಕೆ ಒಳಗಾದ ಬುಡಕಟ್ಟು ಸಮುದಾಯದ ಜನರ ಕುರಿತು ಈ ಸಿನಿಮಾ ಮಾಡಲಾಗಿದೆ. ವಿಶೇಷ ಏನೆಂದರೆ, ಈ ಜನರಿಗಾಗಿಯೇ ಚಿತ್ರತಂಡದವರು ಪ್ರದರ್ಶನ ಏರ್ಪಡಿಸಿದ್ದಾರೆ. ತಮ್ಮದೇ ಕಥೆಯನ್ನು ಬೆಳ್ಳಿಪರದೆಯ ಮೇಲೆ ನೋಡಿದ ಅವೆಲ್ಲರೂ ಭಾವುಕರಾಗಿದ್ದಾರೆ. ಆ ಅನುಭವದ ಕುರಿತು ಮಂಸೋರೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಇದಕ್ಕಿಂತ ಸಾರ್ಥಕತೆ ಇನ್ನೇನಿದೆ? ಇಲ್ಲಿಯವರೆಗಿನ ನನ್ನ ಸಿನಿ ಪಯಣದಲ್ಲಿ ಇಂತಹ ಭಾವುಕ ಸಂಗತಿ ಎಂದೂ ಘಟಿಸಿಲ್ಲ. ‘ಹರಿವು’ ನೈಜ ಘಟನೆ ಆಧರಿಸಿದ ಕತೆಯಾದರೂ ಮೂಲ ವ್ಯಕ್ತಿಯನ್ನು ಭೇಟಿ ಮಾಡುವ ಅವಕಾಶ ದೊರಕಿರಲಿಲ್ಲ. ಆದರೆ ಈ ಬಾರಿ ಸಿನಿಮಾ ಮಾಡುವ ಮೊದಲು ಅವರೊಂದಿಗಿನ ಒಡನಾಟ ಹಾಗೂ ಆ ನಂತರ ಅವರದೇ ಕತೆಯ ಸಿನಿಮಾವನ್ನು ಅವರಿಗೇ ತೋರಿಸುವ ಅವಕಾಶ ಮೊದಲ ಬಾರಿಗೆ ದಕ್ಕಿತು. ಅದರಲ್ಲೂ ಆ ಸಮುದಾಯದ ಬಹುತೇಕರು ಮೊದಲ ಬಾರಿಗೆ ಚಿತ್ರಮಂದಿರದ ಒಳಗೆ ಪ್ರವೇಶ ಮಾಡಿರುವುದು’ ಎಂದು ಮಂಸೋರೆ ಅವರು ಬರಹ ಆರಂಭಿಸಿದ್ದಾರೆ.

ಇದನ್ನೂ ಓದಿ
Image
‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ
Image
ಬದುಕು ಬದಲಿಸಿದ ಹೆದ್ದಾರಿಯಿಂದಲೇ ಸಾವು; ಸಂಚಾರಿ ವಿಜಯ್ ನೆನೆದು ದುಃಖ ಹೊರಹಾಕಿದ ನಿರ್ದೇಶಕ ಮಂಸೋರೆ
Image
ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
Image
ಮಂಸೋರೆ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರಾ ಸಾಯಿ ಪಲ್ಲವಿ? ಇಲ್ಲಿದೆ ಅಸಲಿಯತ್ತು

ಇದನ್ನೂ ಓದಿ: 19.20.21 Movie: ಗಮನ ಸೆಳೆಯುತ್ತಿದೆ ‘19.20.21’ ಹೊಸ ಪೋಸ್ಟರ್​; ಬಿಡುಗಡೆ ಹೊಸ್ತಿಲಿನಲ್ಲಿ ಹೆಚ್ಚಿತು ಕೌತುಕ

‘ಅವರದೇ ಬದುಕಿನ ಪುಟ್ಟ ಭಾಗವನ್ನು ಸಿನಿಮಾ ರೂಪದಲ್ಲಿ ತೆರೆಯ ಮೇಲೆ ಕಂಡ ನಂತರ ಆ ಮುಗ್ಧ ಕಣ್ಣಲ್ಲಿ ಕಾಣಿಸಿದ್ದನ್ನು ಪದಗಳಲ್ಲಿ ವಿವರಿಸಲು ಸಾಧ್ಯವಾಗದು. ಆ ಕ್ಷಣಗಳಲ್ಲಿ ಆ ಕಣ್ಣುಗಳ ಮೂಲಕ ಅವರು ದಾಟಿಸಿದ ಪ್ರೀತಿ ಎದೆಯಾಳವನ್ನು ಹೊಕ್ಕು ಶಾಶ್ವತವಾಗಿ ಕೂತುಬಿಟ್ಟಿದೆ. ಅವರು ತಮ್ಮ ಬೆಚ್ಚನೆಯ ಕೈಯಲ್ಲಿ ನನ್ನ ಕೈಹಿಡಿದು ಮಾತೇ ಆಡದೇ ನೀಡಿದ ಮೆಚ್ಚುಗೆಯ ಮುಂದೆ ಇನ್ಯಾವ ಪ್ರಶಸ್ತಿ ಗೌರವಗಳು ಸರಿಗಟ್ಟಲಾರವೇನೊ. ಹೌದು ಇವರು ಅದೇ ಮಲೆಕುಡಿಯರು. ದಶಕಗಳ ಕಾಲ ದೌರ್ಜನ್ಯವನ್ನು ಅನುಭವಿಸುತ್ತಾ, ನ್ಯಾಯಯುತ ಹೋರಾಟದಿಂದಲೇ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುತ್ತಿರುವವರು. ಇದು ಅವರದೇ ಕತೆ. ಈ ಜೀವಕ್ಕೆ ಇದಕ್ಕಿಂತ ಸಾರ್ಥಕತೆ ಇನ್ನೇನು ಬೇಕಿದೆ?’ ಎಂದು ಮಂಸೋರೆ ಬರೆದುಕೊಂಡಿದ್ದಾರೆ.

View this post on Instagram

A post shared by Manso Re (@manso.re.10)

ಶೃಂಗ ಬಿ.ವಿ., ಬಾಲಾಜಿ ಮನೋಹರ್, ಸಂಪತ್, ಎಂ.ಡಿ. ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಸೇರಿದಂತೆ ಅನೇಕರು ‘19.20.21’ ಚಿತ್ರದಲ್ಲಿ ನಟಿಸಿದ್ದಾರೆ. ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ. ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ದೇವರಾಜ್. ಆರ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸತ್ಯ ಹೆಗಡೆ ಅವರ ಸಹ ನಿರ್ಮಾಣವಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್