AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸಾವಿಗೆ ರಾಜಕಾರಣಿಗಳೇ ಕಾರಣ; ಕೊರೊನಾ ಸೋಂಕಿತ ‘ಮಠ’ ಗುರುಪ್ರಸಾದ್​ ಬಹಿರಂಗ ಡೆತ್​ ನೋಟ್​​

ಕೊರೊನಾ ವೈರಸ್​ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ ಎಂದು ನಿರ್ದೇಶಕ ಗುರುಪ್ರಸಾದ್​ ಕಿಡಿಕಾರಿದ್ದಾರೆ. ಅನೇಕ ರಾಜಕಾರಣಿಗಳ ವಿರುದ್ಧ ಅವರು ಗುಡುಗಿದ್ದಾರೆ.

ನನ್ನ ಸಾವಿಗೆ ರಾಜಕಾರಣಿಗಳೇ ಕಾರಣ; ಕೊರೊನಾ ಸೋಂಕಿತ ‘ಮಠ’ ಗುರುಪ್ರಸಾದ್​ ಬಹಿರಂಗ ಡೆತ್​ ನೋಟ್​​
ಫೇಸ್​ಬುಕ್​ ಲೈವ್​ನಲ್ಲಿ ನಿರ್ದೇಶಕ ಗುರುಪ್ರಸಾದ್​
ಮದನ್​ ಕುಮಾರ್​
|

Updated on: Apr 19, 2021 | 8:11 AM

Share

‘ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್​ ಅವರಿಗೆ ಕೊರೊನಾ ವೈರಸ್​ ಪಾಸಿಟಿವ್​ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಈ ವಿಚಾರವನ್ನು ಖಚಿತಪಡಿಸಿರುವ ಅವರು, ಅನೇಕರ ವಿರುದ್ಧ ಹರಿಹಾಯ್ದಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಅವರ ಪುತ್ರ ಬಿ.ವೈ. ರಾಘವೇಂದ್ರ, ಆರೋಗ್ಯ ಸಚಿವ ಸುಧಾಕರ್​, ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗುತ್ತಿದೆ. ಒಂದು ವೇಳೆ ತಾವು ನಿಧನರಾದರೆ ಅದಕ್ಕೆ ಯಡಿಯೂರಪ್ಪ, ರಾಘವೇಂದ್ರ, ಸುಧಾಕರ್​ ಮುಂತಾದ ರಾಜಕಾರಣಿಗಳೇ ಕಾರಣ ಎಂದು ಗುರು ಪ್ರಸಾದ್​ ಹೇಳಿದ್ದಾರೆ.

‘ಕೊನೇ ಕ್ಷಣಗಳ ಕೊನೇ ಮಾತುಗಳು. ಕೊರೊನಾ ಪಾಸಿಟಿವ್​ ಬಂದಿದೆ. ನಮ್ಮ ಮನೆಯವರೆಗೂ ಕೊರೊನಾ ತಂದುಕೊಟ್ಟಂತಹ ಯಡಿಯೂರಪ್ಪ, ವಿಜಯೇಂದ್ರ ಇವರಿಗೆಲ್ಲ ಧನ್ಯವಾದಗಳು. ನಮ್ಮ ಸಾವಿಗೆ ಮುನ್ನುಡಿ ಬರೆದಿದ್ದೀರಿ. ಕೊರೊನಾ ಪಾಸಿಟಿವ್​ ಆಗಿದ್ದಕ್ಕೆ ನೋವಿನಲ್ಲಿ ಮಾತನಾಡುತ್ತಿದ್ದೇನೆ. ನಾನು ಸತ್ತರೂ ಕೂಡ ಕೊನೇ ಕ್ಷಣದವರೆಗೂ ನನ್ನ ಈ ಶಾಪ ನೋವು ಕೊಡಬೇಕು ಎಂದು ಈ ಮಾತು ಹೇಳುತ್ತಿದ್ದೇನೆ. ಒಂದೂವರೆ ವರ್ಷ ಟೈಮ್​ ತಗೊಂಡು, ಮೂರು-ನಾಲ್ಕು ತಿಂಗಳು ಲಾಕ್​ಡೌನ್ ಮಾಡಿದ್ರಲ್ಲ’ ಎನ್ನುವ ಮೂಲಕ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದಿದ್ದಾರೆ ಗುರುಪ್ರಸಾದ್​.

ಮೋದಿ ಪ್ರಾಮಾಣಿಕ. ಆದರೆ ಬಿಜಿಪಿಯವರೆಲ್ಲ ಪ್ರಾಮಾಣಿಕರಲ್ಲ. ಜೆಡಿಎಸ್​, ಕಾಂಗ್ರೆಸ್​ನವರೆಲ್ಲ ಪ್ರಾಮಾಣಿಕರಲ್ಲ. ಒಂದು ವೈರಸ್​ ನಿಮ್ಮನ್ನು ಆಡಿಸುತ್ತಿದೆ. ವಿಜ್ಞಾನದ ಹಿನ್ನೆಲೆ ಇದ್ದರೆ ಡಾ. ಸುಧಾಕರ್​ ಬೆಂಗಳೂರಿನಲ್ಲಿ ಒಂದು ಲಕ್ಷ ವಾರ್​ಫೇರ್​​ ಟೆಂಟ್​ ಹಾಕಿಸಿ. ಅದರ ಬದಲು ಯಾವುದೇ ಬ್ಯುಸಿನೆಸ್​ ನಿಲ್ಲಿಸ ಬೇಡಿ. ಒಂದೊಂದು ರೂಪಾಯಿ ದುಡಿಯಲು ಎಲ್ಲರೂ ಕಷ್ಟ ಪಡುತ್ತಿದ್ದಾರೆ. ಒಂದೂವರೆ ವರ್ಷ ಸಮಯ ತೆಗೆದುಕೊಂಡು ಪ್ರತಿಮನೆಗೂ ವೈರಸ್​ ಕಳಿಸಿದ್ದೀರಲ್ಲ.. ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು. ನನಗೆ ಕೊರೊನಾ ಬಂದಿದೆ. ಅಕಸ್ಮಾತ್​ ಸತ್ತು ಹೋದರೆ ಇದನ್ನೆಲ್ಲ ಹೇಳೋಕೆ ಆಗಲ್ಲ’ ಎಂದು ಗುರುಪ್ರಸಾದ್​ ಹೇಳಿದ್ದಾರೆ.

‘ಚಿತ್ರರಂಗದ ಅನೇಕ ಜನರನ್ನು ಸಾಯಿಸಿದ್ದೀರಿ. ನಾನು ಕೂಡ ಹಾರ್ಟ್​ ಅಟ್ಯಾಕ್​ ಆಗಿ ಸಾಯಬಹುದು. ಮನೆಮನೆಗೂ ವೈರಸ್​ ಬಂದಿದೆ. ಸಿನಿಮಾ ಪ್ರಚಾರಕ್ಕಾಗಿ ಇದನ್ನೆಲ್ಲ ನಾನು ಮಾಡುತ್ತಿಲ್ಲ. ನಾನು ಬದುಕಿದ್ದರೆ ತಾನೇ ಅದೆಲ್ಲ. ಪ್ರತಿಯೊಬ್ಬರು ಬದುಕುವುದು ಕೂಡ ಮುಖ್ಯ. ಕರ್ನಾಟಕದಲ್ಲಿ ಕೊರೊನಾದಿಂದಾದ ಪ್ರತಿ ಸಾವಿಗೆ ಡಾ. ಸುಧಾಕರ್​ ಕಾರಣ. ಡಿ.ಕೆ. ಶಿವಕುಮಾರ್​. ಎಚ್​.ಡಿ. ಕುಮಾರಸ್ವಾಮಿ ಸಾಚಾ ಎಂದು ನಾನು ಹೇಳುತ್ತಿಲ್ಲ. ಎಲ್ಲರೂ ನಮ್ಮನ್ನು ಕೊಲ್ಲುತ್ತಿದ್ದೀರಿ. ಇದು ನನ್ನ ಡೆತ್​ ನೋಟ್​. ನನ್ನ ಸಾವಿಗೆ ನೀವೆಲ್ಲರೂ ಕಾರಣ’ ಎಂದು ಗುರುಪ್ರಸಾದ್​ ಹೇಳಿರುವ ವಿಡಿಯೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

ಕೊರೊನಾದಿಂದ ಮೃತಪಟ್ಟ ಪತಿ, ಅತ್ತೆ.. ಖಿನ್ನತೆಗೆ ಒಳಗಾಗಿ ತಾಯಿ-ಮಗ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ