AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳವಾಡುತ್ತಲೇ ಲವ್​ ಮಾಡಿದವರ ಕಥೆ ‘ಜಂಬೂ ಸರ್ಕಸ್​’; ಹೇಗಿದೆ ಟ್ರೇಲರ್​?

ಪ್ರವೀಣ್ ತೇಜ್, ಅಂಜಲಿ ಅನೀಶ್, ಅಚ್ಚುತ್ ಕುಮಾರ್, ಲಕ್ಷ್ಮೀ ಸಿದ್ದಯ್ಯ, ಸ್ವಾತಿ, ಅವಿನಾಶ್, ರವಿಶಂಕರ್ ಗೌಡ ಅವರು ‘ಜಂಬೂ ಸರ್ಕಸ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಎಂ.ಡಿ. ಶ್ರೀಧರ್​ ಅವರು ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ಬಿಡುಗಡೆ ಆಗಲಿದೆ. ಈಗ ಟ್ರೇಲರ್​ ಮೂಲಕ ‘ಜಂಬೂ ಸರ್ಕಸ್​’ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

ಜಗಳವಾಡುತ್ತಲೇ ಲವ್​ ಮಾಡಿದವರ ಕಥೆ ‘ಜಂಬೂ ಸರ್ಕಸ್​’; ಹೇಗಿದೆ ಟ್ರೇಲರ್​?
‘ಜಂಬೂ ಸರ್ಕಸ್​’ ಚಿತ್ರತಂಡ
ಮದನ್​ ಕುಮಾರ್​
|

Updated on:Sep 06, 2024 | 8:34 PM

Share

ಹಿಟ್ ಸಿನಿಮಾಗಳ ನಿರ್ದೇಶಕ ಎಂ.ಡಿ. ಶ್ರೀಧರ್ ಅವರು ಈಗ್ ‘ಜಂಬೂ ಸರ್ಕಸ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕಥೆ ಮತ್ತು ಚಿತ್ರಕಥೆ ಕೂಡ ಅವರೇ ಬರೆದಿದ್ದಾರೆ. ಈ ಸಿನಿಮಾದಲ್ಲಿ ಪ್ರವೀಣ್ ತೇಜ್ ಮತ್ತು ಅಂಜಲಿ ಎಸ್. ಅನೀಶ್ ಅವರು ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. ಕಳೆದ 3 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಹೆಚ್.ಸಿ. ಸುರೇಶ್ ಅವರು ‘ಮಹತಿ ಕಂಬೈನ್ಸ್’ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಪ್ರಮೋದ್ ಶೆಟ್ಟಿ ಅವರ ಪತ್ನಿ ಸುಪ್ರೀತಾ ಶೆಟ್ಟಿ ಅವರು ಕೂಡ ನಿರ್ಮಾಪಕಿಯಾಗಿ ಕೈಜೋಡಿಸಿದ್ದಾರೆ. ಈಗ ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಸುಪ್ರೀತಾ ಶೆಟ್ಟಿ, ಅಂಜಲಿ ಅನೀಶ್ ಮತ್ತು ನಯನಾ ಅವರು ಈ ಟ್ರೇಲರ್​ ಬಿಡುಗಡೆ ಮಾಡಿದ್ದು ವಿಶೇಷ.

ಸ್ನೇಹ ಮತ್ತು ಪ್ರೀತಿಯ ಸುತ್ತ ನಡೆಯುವ ಕಥಾಹಂದರ ‘ಜಂಬೂ ಸರ್ಕಸ್​’ ಸಿನಿಮಾದಲ್ಲಿ ಇದೆ ಎಂಬುದನ್ನು ಟ್ರೇಲರ್​ ಹೇಳುತ್ತಿದೆ. ಈ ಬಗ್ಗೆ ನಿರ್ದೇಶಕ ಎಂ.ಡಿ. ಶ್ರೀಧರ್ ಮಾತನಾಡಿದರು. ‘ಆತ್ಮೀಯ ಗೆಳೆಯರಿಬ್ಬರು ತುಂಬಾ ಚೆನ್ನಾಗಿ ಬದುಕುತ್ತಾರೆ. ಆದರೆ ಅವರ ಹೆಂಡತಿಯರು ಜಡೆ ಜಗಳು ಶುರು ಮಾಡುತ್ತಾರೆ. ಹಾಗಾದರೆ ಅವರ ಮಕ್ಕಳ ಭವಿಷ್ಯ ಏನಾಗಲಿದೆ? ಅವರು ಕೂಡ ಜಗಳದಲ್ಲೇ ದಿನ ಕಳೆಯುತ್ತಾರೆ. ಆಮೇಲೆ ಅವರಿಬ್ಬರ ನಡುವೆ ಪ್ರೀತಿ ಸಿಗುರುತ್ತದೆ. ಈ ಜರ್ನಿಯಲ್ಲಿ ಆಗುವ ಫನ್ನಿ ಸಂಗತಿಗಳೇ ಪ್ರೇಕ್ಷಕರಿಗೆ ಮನರಂಜನೆ ನೀಡಲಿವೆ’ ಎಂದು ಅವರು ಹೇಳಿದ್ದಾರೆ.

‘ಜಂಬೂ ಸರ್ಕಸ್​’ ಚಿತ್ರತಂಡ

‘ಯಾವಾಗಲೂ ಕಚ್ಚಾಡುತ್ತಾ ಬೆಳೆದ ನಾಯಕ-ನಾಯಕಿ ನಡುವೆ ಪ್ರೀತಿ ಮೂಡುತ್ತದೆ. ಅದನ್ನು ಕಾಮಿಡಿಯಾಗಿ ತೋರಿಸಿದ್ದೇವೆ. ನಮ್ಮ ಸಿನಿಮಾ ಈಗ ರಿಲೀಸ್​ ಹಂತಕ್ಕೆ ಬಂದಿದೆ. ಸೆಪ್ಟೆಂಬರ್​ 3ನೇ ವಾರ ಅಥವಾ ಕೊನೆವಾರ ರಿಲೀಸ್​ ಮಾಡುವ ಆಲೋಚನೆ ಇದೆ. ಕವಿರಾಜ್ ಬರೆದಿರುವ 2 ಹಾಡುಗಳಿಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಚೆಲ್ಲಾಟ ಸಿನಿಮಾದಿಂದಲೂ ಅವರು ನನ್ನೊಂದಿಗೆ ಇದ್ದಾರೆ’ ಎಂದಿದ್ದಾರೆ ಎಂ.ಡಿ. ಶ್ರೀಧರ್​.

ಈ ಸಿನಿಮಾದಲ್ಲಿ ಅಂಜಲಿ ಅನೀಶ್ ಅವರು ಬಜಾರಿ ಹುಡುಗಿಯ ಪಾತ್ರ ಮಾಡಿದ್ದಾರೆ. ‘ಈ ಸಿನಿಮಾ ಎಲ್ಲರಿಗೂ ಇಷ್ಟ ಆಗಲಿದೆ’ ಎಂದು ಅಂಜಲಿ ಹೇಳಿದ್ದಾರೆ. ಗೀತರಚನಕಾರ ಕವಿರಾಜ್ ಮಾತನಾಡಿ, ‘ನಿರ್ದೇಶಕ ಶ್ರೀಧರ್ ಅವರಲ್ಲಿ ಬೇರೆಯದೇ ರೀತಿ ಕಾಮಿಡಿ ಸೆನ್ಸ್ ಇದೆ. ಪ್ರವೀಣ್ ತೇಜ್ ಅವರು ಭರವಸೆಯ ನಾಯಕನಾಗುತ್ತಾರೆ. ನಿರ್ಮಾಪಕರು ತೀರ್ಥಹಳ್ಳಿ ಕಡೆಯವರು. ಪ್ರೀತಿಯಿಂದ ಮಾಡಿದ ಈ ಸಿನಿಮಾ‌ ಹಿಟ್ ಆಗಬೇಕು’ ಎಂದಿದ್ದಾರೆ. ಈ ಸಿನಿಮಾಗೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೂ ‘ಹೇಮಾ ಸಮಿತಿ’ ರೀತಿ ವರದಿ ಬೇಕು ಎಂಬ ಮಾತಿಗೆ ರಕ್ಷಿತ್​ ಶೆಟ್ಟಿ ಹೇಳಿದ್ದೇನು?

ಅಚ್ಚುತ್ ಕುಮಾರ್, ಸ್ವಾತಿ, ಲಕ್ಷ್ಮೀ ಸಿದ್ದಯ್ಯ, ಅವಿನಾಶ್, ರವಿಶಂಕರ್ ಗೌಡ ಅವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಎ.ವಿ. ಕೃಷ್ಣಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ವಾಸುಕಿ ವೈಭವ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಜಯಂತ್ ಕಾಯ್ಕಿಣಿ, ನಾಗೇಂದ್ರ ಪ್ರಸಾದ್, ಕವಿರಾಜ್ ಅವರು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:33 pm, Fri, 6 September 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ